ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೌಶಲ್ಯ ಕ್ರಾಂತಿಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದ್ದಾರೆ. ಅವರು ಇಂದು ಕಲಬುರಗಿಯಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ 'ಕೌಶಲ್ಯ ರಥ' ಲೋಕಾರ್ಪಣೆ ನೆರವೇರಿಸಿ ಮಾತನಾಡಿದರು. ಕೌಶಲ್ಯ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ವಿಶ್ವದಲ್ಲಿ ಅತಿ ಹೆಚ್ಚು ಯುವಕರಿರುವ ದೇಶ ಭಾರತ. ಸುಮಾರು 46% ರಷ್ಟು ಜನಯುವಕರಿಗೆ ಭವಿಷ್ಯವನ್ನು ನಿರ್ಮಿಸುವ ಸಲುವಾಗಿ ವಿದ್ಯೆ ಮತ್ತು ಕೌಶಲ್ಯ ಎರಡೂ ಇದ್ದರೆ ಉದ್ಯೋಗ ದೊರೆಯುತ್ತದೆ. ದೀನ್ ದಯಾಳ್ ಉಪಾಧ್ಯಾಯ ಅವರ ಹೆಸರಿನಲ್ಲಿ ಕೇಂದ್ರ ಸರ್ಕಾರದ ಕಾರ್ಯಕ್ರಮ ಇದಾಗಿದೆ. ಕರ್ನಾಟಕ ಸರ್ಕಾರ ಸಹ ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಕೌಶಲ್ಯಾಭಿವೃದ್ಧಿ ಕೈಗೊಂಡಿದೆ ಎಂದು ತಿಳಿಸಿದರು.
ಪ್ರತಿ ವರ್ಷ ಸಾವಿರಾರು ಯುವಕರಿಗೆ ಬೇರೆ ಬೇರೆ ಕಸುಬಿನಲ್ಲಿ ತರಬೇತಿ ಕೊಟ್ಟು ಅವರಿಗೆ ತಮ್ಮ ಸ್ವಂತ ಕಾಲಿನ ಮೇಲೆ ನಿಲ್ಲುವ ಶಕ್ತಿ ಯನ್ನು ತುಂಬುವ ಕೆಲಸ ಇಲಾಖೆ ಮಾಡುತ್ತಿದೆ. ಇದನ್ನು ಇನ್ನಷ್ಟು ವ್ಯಾಪಕವಾಗಿ ಯುವಕರು ಇರುವಲ್ಲಿಯೇ ತರಬೇತಿ ಯನ್ನು ನೀಡಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಕೌಶಲ್ಯ ರಥವನ್ನು ಉದ್ಘಾಟಿಸಲಾಗಿದೆ. ಎಲೆಕ್ಟ್ರಿಷಿಯನ್ ಹಾಗೂ ಬ್ಯುಟೀಷಿಯನ್ ಕೋರ್ಸುಗಳನ್ನು ಆಕಾಂಕ್ಷಿಗಳು ಕೈಗೊಳ್ಳಬಹುದು. ಗ್ರಾಮೀಣ ಪ್ರದೇಶದ ಪ್ರತಿ ಪಂಚಾಯತಿಯಲ್ಲಿ ತರಬೇತಿ ಕೊಟ್ಟು ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲ ಕಲ್ಪಿಸುವ ಯೋಜನೆ ಇದಾಗಿದೆ ಎಂದರು.
SSLC Result: ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಚೆಕ್ ಮಾಡುವ ವಿಧಾನ ಇಲ್ಲಿದೆ..
ಕಲ್ಯಾಣ ಕರ್ನಾಟಕದ ಯುವಕರ ಭವಿಷ್ಯವನ್ನು ಉಜ್ವಲಗೊಳಿಸಲು ಸರ್ಕಾರ ದಿಟ್ಟ ಹೆಜ್ಜೆ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಹಾಗೂ ಕೌಶಲ್ಯ ಪಡೆಯುವವರ ಸಂಖ್ಯೆ ಹೆಚ್ಚಾಗಿ ಅವರು ಸ್ವಯಂ ಉದ್ಯೋಗ ಕೈಗೊಳ್ಳುವಂತಾಗಬೇಕು. ಅದಕ್ಕೆ ಇಲ್ಲಿ ವಿಪುಲ ಅವಕಾಶಗಳಿಗೆ. ಹಳ್ಳಿಗಳಲ್ಲಿ ಸರಿಯಾದ ಮೋಟಾರ್ ವೈಂಡರ್ ಸಿಗುವುದಿಲ್ಲ. ಅದಕ್ಕೆ ತಾಲ್ಲೂಕು ಕೇಂದ್ರಕ್ಕೆ ಹೋಗಬೇಕು. ಅದನ್ನು ತಪ್ಪಿಸಲು ಪ್ರತಿ ಗ್ರಾಮದಲ್ಲಿ ಎಲೆಕ್ಟ್ರೀಷಿಯನ್, ಪ್ಲಂಬರ್, ರಿಪೇರಿ ಮುಂತಾದ ಕೌಶಲ್ಯ ವಿರುವ ಯುವಕರ ಪಡೆಯ ಅಗತ್ಯವಿದೆ. ಆ ನಿಟ್ಟಿನಲ್ಲಿ ಕೆಲಸವನ್ನು ಪ್ರಾರಂಭಿಸಲಾಗಿದೆ. ಈ ವರ್ಷ 2.50 ಲಕ್ಷ ಕ್ಕೂ ಹೆಚ್ಚು ಜನರಿಗೆ ತರಬೇತಿ ನೀಡುವ ಗುರಿಯಿದೆ. ಜೀವನೋಪಾಯಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಅದರಲ್ಲಿ ಇದೂ ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಕಲ್ಯಾಣ ಕರ್ನಾಟಕದ ಯುವಕರ ಭವಿಷ್ಯವನ್ನು ಉಜ್ವಲಗೊಳಿಸಲು ಸರ್ಕಾರ ದಿಟ್ಟ ಹೆಜ್ಜೆ ಎಂದರು.
2022-23ನೇ ಸಾಲಿನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್ ಪ್ರಕಟ: ಬೇಸಿಗೆ, ದಸರಾ ರಜೆ, ಇತರೆ ವೇಳಾಪಟ್ಟಿ ಇಲ್ಲಿದೆ..
ಪ್ರತಿ ಗ್ರಾಮದಲ್ಲಿ ಕೌಶಲ್ಯಭರಿತ ಪಡೆ
ಕೌಶಲ್ಯಾಭಿವೃದ್ಧಿಗೆ ಕಲ್ಯಾಣ ಕರ್ನಾಟಕದಲ್ಲಿ ವಿಶೇಷ ಒತ್ತು ನೀಡಲಾಗುವುದು. ಮುಂಬರುವ ದಿನಗಳಲ್ಲಿ ಪ್ರತಿ ಗ್ರಾಮದಲ್ಲಿ ಕೌಶಲ್ಯ ಭರಿತ ಪಡೆ ನಿರ್ಮಿಸಿ ಸ್ವಯಂ ಉದ್ಯೋಗ ಕೈಗೊಳ್ಳುವಂತೆ ಮಾಡುವುದು ಹಾಗೂ ತರಬೇತಿಯ ನಂತರ ಪ್ರಮುಖ ಸಂಸ್ಥೆಗಳಲ್ಲಿ ಈ ಯುವಕರನ್ನು ತೊಡಗಿಸಬೇಕು ಎಂದೂ ಸಹ ಸೂಚನೆ ನೀಡಲಾಗಿದೆ ಎಂದರು.
ಪ್ರತಿ ವರ್ಷ ಸಾವಿರಾರು ಯುವಕರಿಗೆ ಬೇರೆ ಬೇರೆ ಕಸುಬಿನಲ್ಲಿ ತರಬೇತಿ ಕೊಟ್ಟು ಅವರಿಗೆ ತಮ್ಮ ಸ್ವಂತ ಕಾಲಿನ ಮೇಲೆ ನಿಲ್ಲುವ ಶಕ್ತಿ ಯನ್ನು ತುಂಬುವ ಕೆಲಸ ಇಲಾಖೆ ಮಾಡುತ್ತಿದೆ. ಇದನ್ನು ಇನ್ನಷ್ಟು ವ್ಯಾಪಕವಾಗಿ ಯುವಕರು ಇರುವಲ್ಲಿಯೇ ತರಬೇತಿ ಯನ್ನು ನೀಡಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಕೌಶಲ್ಯ ರಥವನ್ನು ಉದ್ಘಾಟಿಸಲಾಗಿದೆ. ಎಲೆಕ್ಟ್ರಿಷಿಯನ್ ಹಾಗೂ ಬ್ಯುಟೀಷಿಯನ್ ಕೋರ್ಸುಗಳನ್ನು ಆಕಾಂಕ್ಷಿಗಳು ಕೈಗೊಳ್ಳಬಹುದು. ಗ್ರಾಮೀಣ ಪ್ರದೇಶದ ಪ್ರತಿ ಪಂಚಾಯತಿಯಲ್ಲಿ ತರಬೇತಿ ಕೊಟ್ಟು ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲ ಕಲ್ಪಿಸುವ ಯೋಜನೆ ಇದಾಗಿದೆ ಎಂದರು.
SSLC Result: ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಚೆಕ್ ಮಾಡುವ ವಿಧಾನ ಇಲ್ಲಿದೆ..
ಕಲ್ಯಾಣ ಕರ್ನಾಟಕದ ಯುವಕರ ಭವಿಷ್ಯವನ್ನು ಉಜ್ವಲಗೊಳಿಸಲು ಸರ್ಕಾರ ದಿಟ್ಟ ಹೆಜ್ಜೆ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಹಾಗೂ ಕೌಶಲ್ಯ ಪಡೆಯುವವರ ಸಂಖ್ಯೆ ಹೆಚ್ಚಾಗಿ ಅವರು ಸ್ವಯಂ ಉದ್ಯೋಗ ಕೈಗೊಳ್ಳುವಂತಾಗಬೇಕು. ಅದಕ್ಕೆ ಇಲ್ಲಿ ವಿಪುಲ ಅವಕಾಶಗಳಿಗೆ. ಹಳ್ಳಿಗಳಲ್ಲಿ ಸರಿಯಾದ ಮೋಟಾರ್ ವೈಂಡರ್ ಸಿಗುವುದಿಲ್ಲ. ಅದಕ್ಕೆ ತಾಲ್ಲೂಕು ಕೇಂದ್ರಕ್ಕೆ ಹೋಗಬೇಕು. ಅದನ್ನು ತಪ್ಪಿಸಲು ಪ್ರತಿ ಗ್ರಾಮದಲ್ಲಿ ಎಲೆಕ್ಟ್ರೀಷಿಯನ್, ಪ್ಲಂಬರ್, ರಿಪೇರಿ ಮುಂತಾದ ಕೌಶಲ್ಯ ವಿರುವ ಯುವಕರ ಪಡೆಯ ಅಗತ್ಯವಿದೆ. ಆ ನಿಟ್ಟಿನಲ್ಲಿ ಕೆಲಸವನ್ನು ಪ್ರಾರಂಭಿಸಲಾಗಿದೆ. ಈ ವರ್ಷ 2.50 ಲಕ್ಷ ಕ್ಕೂ ಹೆಚ್ಚು ಜನರಿಗೆ ತರಬೇತಿ ನೀಡುವ ಗುರಿಯಿದೆ. ಜೀವನೋಪಾಯಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಅದರಲ್ಲಿ ಇದೂ ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಕಲ್ಯಾಣ ಕರ್ನಾಟಕದ ಯುವಕರ ಭವಿಷ್ಯವನ್ನು ಉಜ್ವಲಗೊಳಿಸಲು ಸರ್ಕಾರ ದಿಟ್ಟ ಹೆಜ್ಜೆ ಎಂದರು.
2022-23ನೇ ಸಾಲಿನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್ ಪ್ರಕಟ: ಬೇಸಿಗೆ, ದಸರಾ ರಜೆ, ಇತರೆ ವೇಳಾಪಟ್ಟಿ ಇಲ್ಲಿದೆ..
ಪ್ರತಿ ಗ್ರಾಮದಲ್ಲಿ ಕೌಶಲ್ಯಭರಿತ ಪಡೆ
ಕೌಶಲ್ಯಾಭಿವೃದ್ಧಿಗೆ ಕಲ್ಯಾಣ ಕರ್ನಾಟಕದಲ್ಲಿ ವಿಶೇಷ ಒತ್ತು ನೀಡಲಾಗುವುದು. ಮುಂಬರುವ ದಿನಗಳಲ್ಲಿ ಪ್ರತಿ ಗ್ರಾಮದಲ್ಲಿ ಕೌಶಲ್ಯ ಭರಿತ ಪಡೆ ನಿರ್ಮಿಸಿ ಸ್ವಯಂ ಉದ್ಯೋಗ ಕೈಗೊಳ್ಳುವಂತೆ ಮಾಡುವುದು ಹಾಗೂ ತರಬೇತಿಯ ನಂತರ ಪ್ರಮುಖ ಸಂಸ್ಥೆಗಳಲ್ಲಿ ಈ ಯುವಕರನ್ನು ತೊಡಗಿಸಬೇಕು ಎಂದೂ ಸಹ ಸೂಚನೆ ನೀಡಲಾಗಿದೆ ಎಂದರು.