ಆ್ಯಪ್ನಗರ

ಸಿಇಟಿ ಕೃಷಿ ಪ್ರಾಯೋಗಿಕ ಪರೀಕ್ಷೆ ಇಂದು, ನಾಳೆ

ಅಭ್ಯರ್ಥಿಗಳು ತಮ್ಮ ಪ್ರವೇಶಪತ್ರವನ್ನು ಸಂಬಂಧಿಸಿದ ದಾಖಲೆಯೊಂದಿಗೆ ಯಾವುದೇ ಕೇಂದ್ರದಲ್ಲಿ ದೃಢೀಕರಿಸಿ ಪತ್ರವನ್ನು ತರಬೇಕಾಗುತ್ತದೆ. ಇಲ್ಲದಿದ್ದಲ್ಲಿ ಅಂಥ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ.

Vijaya Karnataka 18 May 2019, 9:00 am
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಎಇ) ವೃತ್ತಿಪರ ಕೋರ್ಸ್‌ಗಳಿಗೆ ನಡೆಸುವಂತೆ ಕೃಷಿ ಕೋರ್ಸ್‌ನ ಪ್ರಾಯೋಗಿಕ ಪರೀಕ್ಷೆಯನ್ನು ನಿಗದಿಯಂತೆ ಶನಿವಾರ(ಮೇ 18) ಆಯಾ ಪರೀಕ್ಷೆ ಕೇಂದ್ರಗಳಲ್ಲಿ ನಡೆಸಲಿದೆ.
Vijaya Karnataka Web Agriculture


ಮೇ 18ರಂದೇ ಮಾನಸ ಗಂಗೋತ್ರಿಯ ವಾಕ್‌ ಹಾಗೂ ಶ್ರವಣದೋಷ ಸಂಸ್ಥೆಯ ಬಿಎಎಸ್‌ಎಲ್‌ಎಫ್‌ ಕೋರ್ಸ್‌, ಆಯುಷ್‌ ಸಹಿತ ದ್ವಿತೀಯ ಪಿಯುಸಿ ನಂತರದ ವೃತ್ತಿಪರ ಕೋರ್ಸ್‌ಗಳಿಗೆ ಬೇರೊಂದು ಪರೀಕ್ಷೆ ಇದೆ. ಈ ಪರೀಕ್ಷೆಯನ್ನು ತೆಗೆದುಕೊಂಡವರಿಗೆ ಮಾತ್ರ ಭಾನುವಾರ(ಮೇ 19) ಮ.2 ಗಂಟೆಗೆ ಬೆಂಗಳೂರಿನ ಜಿಕೆವಿಕೆ ಕೇಂದ್ರದಲ್ಲಿ ಕೃಷಿ ಪ್ರಾಯೋಗಿಕ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಹಾಜರಾಗಲು ಕೋರಲಾಗಿದೆ.

ಇದಕ್ಕಾಗಿ ಅಭ್ಯರ್ಥಿಗಳು ತಮ್ಮ ಪ್ರವೇಶಪತ್ರವನ್ನು ಸಂಬಂಧಿಸಿದ ದಾಖಲೆಯೊಂದಿಗೆ ಯಾವುದೇ ಕೇಂದ್ರದಲ್ಲಿ ದೃಢೀಕರಿಸಿ ಪತ್ರವನ್ನು ತರಬೇಕಾಗುತ್ತದೆ. ಇಲ್ಲದಿದ್ದಲ್ಲಿ ಅಂಥ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ರಾಜ್ಯದ ಎಲ್ಲಾ ಕೃಷಿ ವಿವಿಗಳ ಪರವಾಗಿ ಬೆಂಗಳೂರು ಕೃಷಿ ವಿವಿ ಕುಲಸಚಿವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌