ಆ್ಯಪ್ನಗರ

2 ಸಾವಿರ ಅಭ್ಯರ್ಥಿಗಳಿಗೆ ತಪ್ಪಿದ ಕೆಸೆಟ್ ಪರೀಕ್ಷೆ ಬರೆಯುವ ಅವಕಾಶ

2020ನೇ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ದಿನಗಣನೆ ಶುರುವಾಗಿದೆ. ಮೈಸೂರು ವಿಶ್ವವಿದ್ಯಾಲಯ ನಡೆಸುವ ಈ ಪರೀಕ್ಷೆಗೆ...

Vijaya Karnataka Web 23 Sep 2020, 9:13 am
2020ನೇ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ದಿನಗಣನೆ ಶುರುವಾಗಿದೆ. ಮೈಸೂರು ವಿಶ್ವವಿದ್ಯಾಲಯ ನಡೆಸುವ ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿದ್ದರೂ ಸುಮಾರು 2 ಸಾವಿರ ಮಂದಿ ಪರೀಕ್ಷೆಗೆ ಕೂರುವ ಅವಕಾಶದಿಂದ ವಂಚಿತರಾಗುವಂತಾಗಿದೆ.
Vijaya Karnataka Web candidates missed kset written exam
candidates missed kset written exam


ಕೆಸೆಟ್‌ ಪರೀಕ್ಷೆಯನ್ನು ದಿನಾಂಕ 27-09-2020 ರಂದು ನಡೆಸಲು ನಿಗದಿಪಡಿಸಲಾಗಿದೆ. ಪರೀಕ್ಷೆಗೆ ಕೇವಲ 6 ದಿನ ಬಾಕಿ ಇದೆ. ಆದರೆ ಅಭ್ಯರ್ಥಿಗಳು ಕೆಸೆಟ್‌ ವೆಬ್‌ನಲ್ಲಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವುದನ್ನು ವಿವಿ ಬಂದ್ ಮಾಡಿದೆ. ಈ ಕಾರಣದಿಂದ ಕೆಸೆಟ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿದ ಅಭ್ಯರ್ಥಿಗಳು ಪರೀಕ್ಷೆ ಬರೆಯುವುದರಿಂದ ವಂಚಿತರಾಗಿದ್ದಾರೆ.

ಮೈಸೂರು ವಿವಿಯು ಎರಡು ವರ್ಷಗಳ ನಂತರ 2020 ರ ಫೆಬ್ರವರಿ ತಿಂಗಳಲ್ಲಿ ಕೆಸೆಸ್‌ ಪರೀಕ್ಷೆ ನಡೆಸಲು ನೋಟಿಫಿಕೇಶನ್‌ ಹೊರಡಿಸಿತ್ತು. ರಾಜ್ಯದಾದ್ಯಂತದ 1.07 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ಪರೀಕ್ಷಾ ಶುಲ್ಕ ಪಾವತಿಸಿದ್ದಾರೆ. 11 ಜಿಲ್ಲಾ ಕೇಂದ್ರಗಳಲ್ಲಿ 41 ವಿಷಯಗಳಿಗೆ ಕೆಸೆಟ್‌ ಪರೀಕ್ಷೆ ನಡೆಯಲಿದೆ.

2020-21ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ: ನ.1 ರಿಂದ ಕಾಲೇಜು, ವಿವಿಗಳ ಆರಂಭ

ಕೊರೊನಾ ಪರಿಣಾಮದ ಹಿನ್ನೆಲೆ ಪರೀಕ್ಷೆಗೆ ಆನ್‌ಲೈನ್‌ ಅರ್ಜಿ ಸಲ್ಲಿಸಲು ಮೂರು ಬಾರಿ ಅವಕಾಶ ವಿಸ್ತರಣೆ ಮಾಡಲಾಗಿತ್ತು. ಅಭ್ಯರ್ಥಿಗಳು ಶುಲ್ಕ ಪಾವತಿಸಿದ ನಂತರ ಭರ್ತಿ ಮಾಡಿದ ಪೂರ್ಣ ಅಪ್ಲಿಕೇಶನ್ ಮತ್ತು ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಲು 15 ದಿನ ಅವಕಾಶ ನೀಡಲಾಗಿತ್ತು. ಒಟ್ಟು 1.07 ಲಕ್ಷ ಅಭ್ಯರ್ಥಿಗಳ ಪೈಕಿ, 1.05 ಲಕ್ಷ ಅಭ್ಯರ್ಥಿಗಳು ಅರ್ಜಿ ಹಾಗೂ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಆದರೆ, ನಿಗದಿತ ಸಮಯದಲ್ಲಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳದ 2 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ತೊಂದರೆಯಲ್ಲಿ ಸಿಲುಕಿದ್ದಾರೆ.

ವಿವಿ ವೆಬ್‌ಸೈಟ್‌ನಲ್ಲಿ ಮಾತ್ರ ಮಾಹಿತಿ ಪ್ರಕಟಿಸಿದ್ದ ವಿವಿ, ಸಕಾಲದಲ್ಲಿ ಅಭ್ಯರ್ಥಿಗಳಿಗೆ ವಿಷಯ ಮುಟ್ಟಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಅಭ್ಯರ್ಥಿಗಳು ಕಾಲ್‌ ಲೆಟರ್ ಡೌನ್‌ಲೋಡ್ ಮಾಡಿಕೊಳ್ಳಲು ಆಗಿಲ್ಲ. ಆದ್ದರಿಂದ ಪರೀಕ್ಷೆಗೆ ಕೂರಲು 2 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಅವಕಾಶ ತಪ್ಪಿದೆ.

ರಾಜ್ಯ ಹೈಕೋರ್ಟ್‌ನಲ್ಲಿ ಕಾನೂನು ಪದವೀಧರರಿಗೆ ಉದ್ಯೋಗಾವಕಾಶ: ಅರ್ಜಿ ಆಹ್ವಾನ

ಕೆಸೆಟ್ ಪರೀಕ್ಷೆ ಸಂಯೋಜನಾಧಿಕಾರಿ ಹೇಳಿದ್ದೇನು?
"ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು 15 ದಿನ ಅವಕಾಶ ನೀಡಲಾಗಿತ್ತು. ಪ್ರವೇಶ ಪತ್ರಗಳ ಡೌನ್‌ಲೋಡ್ ಸಂಖ್ಯೆ ಆಧರಿಸಿ ಪರೀಕ್ಷಾ ಕೇಂದ್ರಗಳು, ಸಿಬ್ಬಂದಿ ನಿಯೋಜನೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಮುದ್ರಿಸಲಾಗುತ್ತದೆ. ಇದೇ ಮಾಹಿತಿ ಆಧರಿಸಿ ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ (ಯುಜಿಸಿ) 'ವೀಕ್ಷಕ'ರನ್ನು ನೇಮಿಸುತ್ತದೆ. ಪ್ರತಿ ಕೊಠಡಿಗೆ ಎಲ್ಲಾ 41 ವಿಷಯಗಳ ಅಭ್ಯರ್ಥಿಗಳನ್ನು ಮಿಶ್ರಣ ಮಾಡಿ ನಿಯೋಜಿಸಲಾಗುತ್ತದೆ. ಈ ಪ್ರಕ್ರಿಯೆಗೆ ಒಂದು ತಿಂಗಳಿಗೂ ಹೆಚ್ಚು ಕಾಲಾವಕಾಶ ಬೇಕಿದೆ. ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳದಿದ್ದರೆ ವಿವಿ ಜವಾಬ್ದಾರಿಯಲ್ಲಿ," ಎಂದು ಕೆಸೆಟ್ ಪರೀಕ್ಷೆ ಸಯೋಜನಾಧಿಕಾರಿ ಪ್ರೊ.ರಾಜಶೇಖರ್ ರವರು ಪ್ರತಿಕ್ರಿಯಿಸಿದ್ದಾರೆ.

ನ್ಯಾಯ ವಿಜ್ಞಾನ ಪ್ರಯೋಗಾಲಯದ ವೈಜ್ಞಾನಿಕ ಅಧಿಕಾರಿಗಳ ಲಿಖಿತ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌