ಆ್ಯಪ್ನಗರ

PUC ಇಂದಲೇ ಆನ್‌ಲೈನ್‌ ಕ್ಲಾಸ್‌ಗೆ ಚಿಂತನೆ; ಬೇಸಿಗೆ ರಜೆಗೆ ಬ್ರೇಕ್‌

ಅಪೂರ್ಣಗೊಂಡಿರುವ ಪಠ್ಯವನ್ನು ಆನ್‌ಲೈನ್‌ ತರಗತಿಗಳ ಮೂಲಕ ಪೂರ್ಣಗೊಳಿಸಿ, ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಸೂಚಿಸಿದ್ದಾರೆ.

Vijaya Karnataka Web 27 May 2020, 1:47 pm

ಅಪೂರ್ಣಗೊಂಡಿರುವ ಪಠ್ಯವನ್ನು ಆನ್‌ಲೈನ್‌ ತರಗತಿಗಳ ಮೂಲಕ ಪೂರ್ಣಗೊಳಿಸಿ, ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಸೂಚಿಸಿದ್ದಾರೆ.
Vijaya Karnataka Web online class for karnataka students
online class for karnataka students


ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಆನ್‌ಲೈನ್‌ ತರಗತಿಗಳು ವೆಚ್ಚದಾಯಕವಲ್ಲ. ಹೀಗಾಗಿ ಈ ವ್ಯವಸ್ಥೆಯನ್ನು ಪಿಯುಸಿ ಹಂತದಿಂದಲೇ ಪ್ರಾರಂಭಿಸುವ ಬಗ್ಗೆ ಪರಿಶೀಲಿಸುವಂತೆ ನಿರ್ದೇಶನ ನೀಡಿದ್ದಾರೆ. ಲಾಕ್‌ಡೌನ್‌ಗೆ ಮುಂಚೆ ಶೇಕಡ.79 ರಷ್ಟು ಪಠ್ಯಕ್ರಮ ಪೂರ್ಣಗೊಂಡಿದ್ದು, ಇನ್ನುಳಿದ ಪಠ್ಯಕ್ರಮವನ್ನು ಮೇ 31 ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ಸಿಎಂಗೆ ಮಾಹಿತಿ ಒದಗಿಸಿದ್ದಾರೆ.

ಈಗಾಗಲೇ 30 ಸಾವಿರ ಆನ್‌ಲೈನ್‌ ತರಗತಿಗಳನ್ನು ನಡೆಸಲಾಗಿದೆ. ವಾಟ್ಸಾಪ್ ಮತ್ತು ಟೆಲಿಗ್ರಾಂ ಮೂಲಕ ಶೇಕಡ 85 ರಷ್ಟು ವಿದ್ಯಾರ್ಥಿಗಳಿಗೆ ಇ-ನೋಟ್ಸ್‌, ಪಿಪಿಟಿ ಹಾಗೂ ಹಳೆಯ ಪ್ರಶ್ನೆ ಪತ್ರಿಕೆಗಳ ವಿತರಣೆ ಮಾಡಲಾಗಿದೆ. 'ಜ್ಞಾನನಿಧಿ' ಯೂಟ್ಯೂಬ್ ಚಾನೆಲ್ ಮೂಲಕ 65 ವಿಷಯಗಳ 7074 ಬೋಧನಾ ವಿಡಿಯೋ ಅಪ್‌ಲೋಡ್‌ ಮಾಡಲಾಗಿದ್ದು, 5 ಲಕ್ಷ ಮಂದಿ ವೀಕ್ಷಣೆ ಮಾಡಿದ್ದಾರೆ ಎಂದು ಅಧಿಕಾರಿಗಳು ಸಭೆಯಲ್ಲಿ ವಿವರ ಒದಗಿಸಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ನ್ಯೂಮರಿಕಲ್‌ ರೀಸನಿಂಗ್‌ ಪ್ರಶ್ನೆಗಳಿಗೆ ಸಿದ್ಧತೆ ಹೇಗೆ?

ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎನ್‌. ಎಸ್‌.ಪ್ರಸಾದ್, ಉನ್ನತ ಶಿಕ್ಷಣ ಇಲಾಖೆ ಎಸಿಎಸ್‌ ಡಾ.ಇ.ವಿ ರಮಣರೆಡ್ಡಿ, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ವಿಶ್ವವಿದ್ಯಾಲಯ ನಿರ್ವಹಣೆಗೆ ವ್ಯವಸ್ಥೆ

11 ಕೋಟಿ ರೂ. ವೆಚ್ಚದಲ್ಲಿ ವಿವಿ ಮತ್ತು ಕಾಲೇಜುಗಳ ಸಮಗ್ರ ನಿರ್ವಹಣಾ ವ್ಯವಸ್ಥೆಯನ್ನು ಇ-ಆಡಳಿತದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಡಿಸಿಎಂ ಡಾ. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಈ ವರ್ಷದಿಂದ ಸರ್ಕಾರಿ ಕಾಲೇಜುಗಳಲ್ಲಿ ಉಚಿತ ಲ್ಯಾಪ್‌ಟಾಪ್ ವಿತರಿಸಲಾಗಿರುವ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಕಲಿಕೆ ಅನುಷ್ಠಾನಕ್ಕೆ ಬರಲಿದೆ.

15 ಸಾವಿರ ಕೇಂದ್ರಗಳಲ್ಲಿ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ

ಬೇಸಿಗೆ ರಜೆ ಮೊಟಕು

ಜೂನ್‌ 15 ರೊಳಗೆ ಶೈಕ್ಷಣಿಕ ಚಟುವಟಿಕೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ಬೇಸಿಗೆ ರಜೆಯನ್ನು ಮೊಟಕು ಮಾಡಲಾಗುವುದು. ಕಾಲೇಜುಗಳೇ ಇಲ್ಲದ 13 ವಿಧಾನಸಭಾ ಕ್ಷೇತ್ರಗಳಿಗೆ ಹೆಚ್ಚುವರಿ ಇರುವ ಭಾಗದಿಂದ 6 ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಳಾಂತರಿಸಲಾಗುವುದು ಎಂದು ಡಿಸಿಎಂ ಡಾ.ಅಶ್ವತ್ಥ್‌ ನಾರಾಯಣ ತಿಳಿಸಿದರು. ಬೆಂಗಳೂರಿನ ಡಾ.ಅಂಬೇಡ್ಕರ್ ಸ್ಕೂಲ್‌ ಆಫ್ ಎಕನಾಮಿಕ್ಸ್ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಉದ್ಘಾಟನೆಗೆ ಪ್ರಧಾನ ಮಂತ್ರಿಗಳನ್ನು ಆಹ್ವಾನಿಸಲಾಗುವುದು ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌