ಆ್ಯಪ್ನಗರ

ಕರ್ನಾಟಕ ಶಿಕ್ಷಕರ ವರ್ಗಾವಣೆಗೆ ಸುಗ್ರೀವಾಜ್ಞೆ: ಸರ್ಕಾರಕ್ಕೆ ಶಿಕ್ಷಣ ಇಲಾಖೆ ಪ್ರಸ್ತಾವನೆ

ದೀರ್ಘಕಾಲದಿಂದಲೂ ನನೆಗುದಿಗೆ ಬಿದ್ದಿರುವ ಶಿಕ್ಷಕರ ವರ್ಗಾವಣೆ ಕಾಯ್ದೆಗೆ ತಿದ್ದುಪಡಿ ತಂದಿದ್ದು, ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ. ಸಚಿವ ಸಂಪುಟದ ಅನುಮೋದನೆ

Vijaya Karnataka Web 24 Apr 2021, 9:28 am
ದೀರ್ಘಕಾಲದಿಂದಲೂ ನನೆಗುದಿಗೆ ಬಿದ್ದಿರುವ ಶಿಕ್ಷಕರ ವರ್ಗಾವಣೆ ಕಾಯ್ದೆಗೆ ತಿದ್ದುಪಡಿ ತಂದಿದ್ದು, ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ. ಸಚಿವ ಸಂಪುಟದ ಅನುಮೋದನೆ ಪಡೆಯಲು ಸರ್ಕಾರಕ್ಕೆ ಶಿಕ್ಷಣ ಇಲಾಖೆಯು ಪ್ರಸ್ತಾವನೆ ಕಳುಹಿಸಿಕೊಟ್ಟಿದೆ.
Vijaya Karnataka Web karnataka teachers transfer latest news
karnataka teachers transfer latest news


ಬರುವ ಸೋಮವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕಾಯ್ದೆಗೆ ಒಪ್ಪಿಗೆ ಪಡೆದು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವರ್ಗಾವಣೆಗಾಗಿ ಕಾಯುತ್ತಿರುವ ಸಾವಿರಾರು ಶಿಕ್ಷಕರಿಗೆ ಅನುಕೂಲ ಆಗಲಿದೆ.

ಕರ್ನಾಟಕ ಸರ್ಕಾರ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ) ಅಧಿನಿಯಮ 2020 ಅನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಿದ್ಧತೆ ಮಾಡಿಕೊಂಡಿದೆ. ಹೊಸ ಶಿಕ್ಷಣ ಹಕ್ಕು ಕಾಯ್ದೆ ಅಡಿ ಕೆಲವು ಮಾರ್ಪಾಡುಗಳು ಆಗಬೇಕೆಂದು ಶಿಕ್ಷಕರು ಒತ್ತಾಯಿಸಿದ್ದರಿಂದ ಕೆಲವು ನಿಯಮಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲೇ ಇರಲಿ: ಡಾ. ಅಶ್ವತ್ಥನಾರಾಯಣ

ಶಿಕ್ಷಣ ಇಲಾಖೆಯು ಕಳೆದ ನವೆಂಬರ್ ತಿಂಗಳಲ್ಲೇ 2020-21ನೇ ಸಾಲಿನ ಶಿಕ್ಷಕರ ವರ್ಗಾವಣೆ ಮಾರ್ಗಸೂಚಿ ಪ್ರಕಟಿಸಿತ್ತು. ವರ್ಗಾವಣೆ ಬಯಸಿ 70 ಸಾವಿರ ಶಿಕ್ಷಕರು ಅರ್ಜಿ ಸಲ್ಲಿಸಿದ್ದರು. ಆದರೆ, ಹಿಂದಿನ ವರ್ಗಾವಣೆ ಕಾಯ್ದೆಯಲ್ಲಿ ಹೆಚ್ಚುವರಿ ಮತ್ತು ಕಡ್ಡಾಯ ವರ್ಗಾವಣೆಗೆ ಸಿಲುಕಿ ಸಾಕಷ್ಟು ಶಿಕ್ಷಕರು ತೊಂದರೆ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ವರ್ಗಾವಣೆಯಲ್ಲಿ ಆದ್ಯತೆ ನೀಡಲು ಮುಂದಾಗಿದೆ.

ಕೆಲವು ಶಿಕ್ಷಕರು ವರ್ಗಾವಣೆ ಕಾಯ್ದೆಯಲ್ಲಿ ಅನ್ಯಾಯ ಆಗಿದೆ ಎಂದು ಕೆಎಟಿ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಕೆಎಟಿ 2021 ರ ಜನವರಿ 2 ರವರಗೆ ಈಗಿನ ನಿಯಮಗಳನ್ನೇ ಪಾಲಿಸುವಂತೆ 2020ರಲ್ಲಿ ಆದೇಶ ನೀಡಿತ್ತು. ಆದ್ದರಿಂದ ವರ್ಗಾವಣೆ ಪ್ರಕ್ರಿಯೆಗೆ ತಡೆ ಬಿದ್ದಿತ್ತು. ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ-2020 ರ ಅನ್ವಯ ಕಾಯ್ದೆ ಅಂಶ ಹೊರತುಪಡಿಸಿ ಇತರ ಯಾವುದೇ ಅಂಶಗಳನ್ನು ಅನುಷ್ಠಾನಗೊಳಿಸದೆಯೇ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಬೇಕೆಂದು ಕೆಎಟಿ ಆದೇಶಿಸಿತ್ತು. ಈ ಆದೇಶದ ವಿರುದ್ಧ ಶಿಕ್ಷಣ ಇಲಾಖೆ ಉಚ್ಛನ್ಯಾಯಾಲಯದ ಮೆಟ್ಟಿಲೇರಿತ್ತು. ಸರ್ಕಾರದ ವಾದಗಳನ್ನು ಆಲಿಸಿ, ಕೆಎಟಿ ನೀಡಿದ್ದ ತೀರ್ಪನ್ನೇ ಪಾಲಿಸುವಂತೆ ಆದೇಶಿಸಿತ್ತು.

ಪ್ರಸ್ತುತ ಶಿಕ್ಷಣ ಇಲಾಖೆ ಕೊರೊನಾ ಮಧ್ಯೆಯೇ ಶಿಕ್ಷಕರ ಮನವಿಗೆ ಓಗೊಟ್ಟು, ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಿ ಸಾಧ್ಯವಾದಷ್ಟು ಬೇಗ ಪ್ರಕ್ರಿಯೆ ಆರಂಭಿಸಲು ಕಾರ್ಯಪ್ರವೃತ್ತವಾಗಿದೆ.

ಪಿಯು ಭೌತಿಕ ತರಗತಿ, ಪೂರ್ವ ಸಿದ್ಧತಾ ಪರೀಕ್ಷೆ ರದ್ದು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌