ಜುಲೈ 8 ರಂದು ಪಿಯುಸಿ ಫಲಿತಾಂಶ ಪ್ರಕಟ
ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 8 ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
Vijaya Karnataka Web 29 May 2020, 6:58 pm
ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 8 ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ದ್ವಿತೀಯ ಪಿಯುಸಿ ಮೌಲ್ಯಮಾಪನ ಈಗಾಗಲೇ ಆರಂಭವಾಗಿದೆ. ಇಂಗ್ಲಿಷ್ ಪರೀಕ್ಷೆ ಮಾತ್ರ ಬಾಕಿ ಇದೆ. ಅದಕ್ಕೂ ವೇಳಾಪಟ್ಟಿ ನಿಗದಿಯಾಗಿದೆ ಎಂದಿದ್ದಾರೆ.
ಜುಲೈ 8 ಅಥವಾ ಒಂದೆರಡು ದಿನಗಳ ಆಸುಪಾಸಿನಲ್ಲಿ ಫಲಿತಾಂಶ ಪ್ರಕಟವಾಗುತ್ತೆ. SSLC ಪರೀಕ್ಷೆಗಳಿಗೆ ಟೈಮ್ಟೇಬಲ್ ಬಿಡುಗಡೆ ಮಾಡಲಾಗಿದೆ. ಜುಲೈ 04 ಕ್ಕೆ ಪರೀಕ್ಷೆ ಮುಗಿಯಲಿದ್ದು, ಜುಲೈ ಅಂತ್ಯದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟ ಮಾಡಲಾಗುತ್ತದೆ. ಇದಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ ಎಂದು ಮೈಸೂರಿನಲ್ಲಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಕೆಸೆಟ್ ಪರೀಕ್ಷೆ ತೆಗೆದುಕೊಂಡಿರುವ ಅಭ್ಯರ್ಥಿಗಳಿಗೆ ವಿಶೇಷ ಮಾಹಿತಿ
8.48 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕು. ಹೆಚ್ಚಿನ ಸುರಕ್ಷತಾ ಕ್ರಮದಲ್ಲಿ ಹೊಸ ವಾತಾವರಣದಲ್ಲಿ ಪರೀಕ್ಷೆ ನಡೆಸಬೇಕಿದೆ. ಮಾಸ್ಕ್ಗಳನ್ನು ಕೊಡಲು ಸ್ಕೌಟ್ಸ್ ಮತ್ತು ಗೈಡ್ಸ್ ಮುಂದೆ ಬಂದಿದೆ. ಮೈಸೂರು ಜಿಲ್ಲೆಗೆ 42 ಸಾವಿರ ಮಾಸ್ಕ್ಕೊಟ್ಟಿದ್ದಾರೆ. ಪ್ರತಿ ಮಕ್ಕಳಿಗೆ 2 ಮಾಸ್ಕ್ ಸಿಗುತ್ತೆ. ಸ್ಯಾನಿಟೈಸರ್ ಸಹ ನೀಡಲಾಗುತ್ತದೆ. 4000 ಕೇಂದ್ರಗಳಲ್ಲೂ ಸ್ಯಾನಿಟೈಸರ್ ಇರುತ್ತದೆ. ಹಾಗೂ ಥರ್ಮಲ್ ಸ್ಕ್ಯಾನರ್ ಮಾಡಲು ಆರೋಗ್ಯ ಇಲಾಖೆ ತಂಡಗಳನ್ನು ನಿಯೋಜಿಸಲಾಗುವುದು. ಪ್ರತಿ ವರ್ಷ 24 ವಿದ್ಯಾರ್ಥಿಗಳನ್ನು ಒಂದು ಕೊಠಡಿಯಲ್ಲಿ ಕೂರಿಸಲಾಗುತ್ತಿತ್ತು. ಆದರೆ ಈ ಬಾರಿ 18 ವಿದ್ಯಾರ್ಥಿಗಳನ್ನು ಕೂರಿಸಲಾಗುತ್ತದೆ. ಆರೋಗ್ಯದಲ್ಲಿ ಏರುಪೇರುಗಳಿದ್ದರೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡುತ್ತೇವೆ.
ಪರೀಕ್ಷೆ ಮಿಸ್ ಆದರೆ ಜುಲೈನಲ್ಲಿ ನಡೆಯುವ ಪೂರಕ ಪರೀಕ್ಷೆಯಲ್ಲಿ ಫ್ರೆಶ್ ಕ್ಯಾಂಡಿಡೇಟ್ ಅಂತ ಪರಿಗಣಿಸುತ್ತೇವೆ. ವಲಸೆ ಕಾರ್ಮಿಕರ ಮಕ್ಕಳಿಗೆ ಸಮೀಪದ ಸೆಂಟರ್ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ.
ನೇಮಕ ಪ್ರಕ್ರಿಯೆ ಬದಲು; ಡಾಕ್ಯುಮೆಂಟ್ ವೆರಿಫಿಕೇಶನ್ KPSC ಜವಾಬ್ದಾರಿ ಅಲ್ಲ
ಮೈಸೂರಿನಲ್ಲಿ 130 ಪರೀಕ್ಷಾ ಕೇಂದ್ರಗಳಿವೆ. ಕಂಟೋನ್ಮೆಂಟ್ ವಲಯದಲ್ಲಿ ಯಾವುದು ಇಲ್ಲ. ಮಂಡ್ಯದಲ್ಲಿ 83, ಕೊಡಗಿನಲ್ಲಿ 27 ಪರೀಕ್ಷಾ ಕೇಂದ್ರಗಳಿವೆ. ಮೂರು ಜಿಲ್ಲೆಗಳಿಂದ 248 ಪರೀಕ್ಷಾ ಕೇಂದ್ರಗಳಿವೆ. ಯಾವುದೂ ಕಂಟೋನ್ಮೆಂಟ್ ವಲಯದಲ್ಲಿ ಇಲ್ಲ. ಸುರಕ್ಷತಾ ಹಿತದೃಷ್ಟಿಯಿಂದ ಮನೆ ಮನೆಗಳಿಗೆ ತಲುಪುವ ಕೆಲಸ ಮಾಡುತ್ತಿದ್ದೇವೆ. ಕಲಿಕಾ ನಿರಂತರತೆ ಕಾಪಾಡಿಕೊಂಡಿದ್ದೇವೆ. ಈ ಕಾರಣಕ್ಕಾಗಿ ಪರೀಕ್ಷೆ ಯಶಸ್ವಿಯಾಗುವ ವಿಶ್ವಾಸವಿದೆ.
ಪರೀಕ್ಷೆ ನಡೆಸಲೇಬಾರದು ಎಂಬ ಅಭಿಪ್ರಾಯವಿದೆ. ಈ ಸಂಬಂಧ ಹೈಕೋರ್ಟ್ನಲ್ಲೂ ಪಿಎಎಲ್ ದಾಖಲಾಗಿತ್ತು. 10ನೇ ತರಗತಿ ಜೀವನದ ಪ್ರಮುಖ ಘಟ್ಟ. ಆದ್ದರಿಂದ ಪರೀಕ್ಷೆ ನಡೆಸಲೇಬೇಕಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳ; ಗೃಹ ಸಚಿವರಿಗೆ ಸನ್ಮಾನ
ದ್ವಿತೀಯ ಪಿಯುಸಿ ಮೌಲ್ಯಮಾಪನ ಈಗಾಗಲೇ ಆರಂಭವಾಗಿದೆ. ಇಂಗ್ಲಿಷ್ ಪರೀಕ್ಷೆ ಮಾತ್ರ ಬಾಕಿ ಇದೆ. ಅದಕ್ಕೂ ವೇಳಾಪಟ್ಟಿ ನಿಗದಿಯಾಗಿದೆ ಎಂದಿದ್ದಾರೆ.
ಜುಲೈ 8 ಅಥವಾ ಒಂದೆರಡು ದಿನಗಳ ಆಸುಪಾಸಿನಲ್ಲಿ ಫಲಿತಾಂಶ ಪ್ರಕಟವಾಗುತ್ತೆ. SSLC ಪರೀಕ್ಷೆಗಳಿಗೆ ಟೈಮ್ಟೇಬಲ್ ಬಿಡುಗಡೆ ಮಾಡಲಾಗಿದೆ. ಜುಲೈ 04 ಕ್ಕೆ ಪರೀಕ್ಷೆ ಮುಗಿಯಲಿದ್ದು, ಜುಲೈ ಅಂತ್ಯದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟ ಮಾಡಲಾಗುತ್ತದೆ. ಇದಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ ಎಂದು ಮೈಸೂರಿನಲ್ಲಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಕೆಸೆಟ್ ಪರೀಕ್ಷೆ ತೆಗೆದುಕೊಂಡಿರುವ ಅಭ್ಯರ್ಥಿಗಳಿಗೆ ವಿಶೇಷ ಮಾಹಿತಿ
8.48 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕು. ಹೆಚ್ಚಿನ ಸುರಕ್ಷತಾ ಕ್ರಮದಲ್ಲಿ ಹೊಸ ವಾತಾವರಣದಲ್ಲಿ ಪರೀಕ್ಷೆ ನಡೆಸಬೇಕಿದೆ. ಮಾಸ್ಕ್ಗಳನ್ನು ಕೊಡಲು ಸ್ಕೌಟ್ಸ್ ಮತ್ತು ಗೈಡ್ಸ್ ಮುಂದೆ ಬಂದಿದೆ. ಮೈಸೂರು ಜಿಲ್ಲೆಗೆ 42 ಸಾವಿರ ಮಾಸ್ಕ್ಕೊಟ್ಟಿದ್ದಾರೆ. ಪ್ರತಿ ಮಕ್ಕಳಿಗೆ 2 ಮಾಸ್ಕ್ ಸಿಗುತ್ತೆ. ಸ್ಯಾನಿಟೈಸರ್ ಸಹ ನೀಡಲಾಗುತ್ತದೆ. 4000 ಕೇಂದ್ರಗಳಲ್ಲೂ ಸ್ಯಾನಿಟೈಸರ್ ಇರುತ್ತದೆ. ಹಾಗೂ ಥರ್ಮಲ್ ಸ್ಕ್ಯಾನರ್ ಮಾಡಲು ಆರೋಗ್ಯ ಇಲಾಖೆ ತಂಡಗಳನ್ನು ನಿಯೋಜಿಸಲಾಗುವುದು. ಪ್ರತಿ ವರ್ಷ 24 ವಿದ್ಯಾರ್ಥಿಗಳನ್ನು ಒಂದು ಕೊಠಡಿಯಲ್ಲಿ ಕೂರಿಸಲಾಗುತ್ತಿತ್ತು. ಆದರೆ ಈ ಬಾರಿ 18 ವಿದ್ಯಾರ್ಥಿಗಳನ್ನು ಕೂರಿಸಲಾಗುತ್ತದೆ. ಆರೋಗ್ಯದಲ್ಲಿ ಏರುಪೇರುಗಳಿದ್ದರೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡುತ್ತೇವೆ.
ಪರೀಕ್ಷೆ ಮಿಸ್ ಆದರೆ ಜುಲೈನಲ್ಲಿ ನಡೆಯುವ ಪೂರಕ ಪರೀಕ್ಷೆಯಲ್ಲಿ ಫ್ರೆಶ್ ಕ್ಯಾಂಡಿಡೇಟ್ ಅಂತ ಪರಿಗಣಿಸುತ್ತೇವೆ. ವಲಸೆ ಕಾರ್ಮಿಕರ ಮಕ್ಕಳಿಗೆ ಸಮೀಪದ ಸೆಂಟರ್ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ.
ನೇಮಕ ಪ್ರಕ್ರಿಯೆ ಬದಲು; ಡಾಕ್ಯುಮೆಂಟ್ ವೆರಿಫಿಕೇಶನ್ KPSC ಜವಾಬ್ದಾರಿ ಅಲ್ಲ
ಮೈಸೂರಿನಲ್ಲಿ 130 ಪರೀಕ್ಷಾ ಕೇಂದ್ರಗಳಿವೆ. ಕಂಟೋನ್ಮೆಂಟ್ ವಲಯದಲ್ಲಿ ಯಾವುದು ಇಲ್ಲ. ಮಂಡ್ಯದಲ್ಲಿ 83, ಕೊಡಗಿನಲ್ಲಿ 27 ಪರೀಕ್ಷಾ ಕೇಂದ್ರಗಳಿವೆ. ಮೂರು ಜಿಲ್ಲೆಗಳಿಂದ 248 ಪರೀಕ್ಷಾ ಕೇಂದ್ರಗಳಿವೆ. ಯಾವುದೂ ಕಂಟೋನ್ಮೆಂಟ್ ವಲಯದಲ್ಲಿ ಇಲ್ಲ. ಸುರಕ್ಷತಾ ಹಿತದೃಷ್ಟಿಯಿಂದ ಮನೆ ಮನೆಗಳಿಗೆ ತಲುಪುವ ಕೆಲಸ ಮಾಡುತ್ತಿದ್ದೇವೆ. ಕಲಿಕಾ ನಿರಂತರತೆ ಕಾಪಾಡಿಕೊಂಡಿದ್ದೇವೆ. ಈ ಕಾರಣಕ್ಕಾಗಿ ಪರೀಕ್ಷೆ ಯಶಸ್ವಿಯಾಗುವ ವಿಶ್ವಾಸವಿದೆ.
ಪರೀಕ್ಷೆ ನಡೆಸಲೇಬಾರದು ಎಂಬ ಅಭಿಪ್ರಾಯವಿದೆ. ಈ ಸಂಬಂಧ ಹೈಕೋರ್ಟ್ನಲ್ಲೂ ಪಿಎಎಲ್ ದಾಖಲಾಗಿತ್ತು. 10ನೇ ತರಗತಿ ಜೀವನದ ಪ್ರಮುಖ ಘಟ್ಟ. ಆದ್ದರಿಂದ ಪರೀಕ್ಷೆ ನಡೆಸಲೇಬೇಕಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳ; ಗೃಹ ಸಚಿವರಿಗೆ ಸನ್ಮಾನ