ಆ್ಯಪ್ನಗರ

Karnataka TET Exam 2023: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

Karnataka Teacher Eligibility Test 2023: 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ( KAR-TET 2023)ಕ್ಕೆ ಶಾಲಾ ಶಿಕ್ಷಣ ಇಲಾಖೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ದಿನಾಂಕ 14-07-2023 ರಿಂದ 15-08-2023 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Authored byಮುರಳಿಧರ. ಯಡಚಿ | Vijaya Karnataka Web 14 Jul 2023, 12:51 pm

ಹೈಲೈಟ್ಸ್‌:

  • ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ.
  • ಟಿಇಟಿ ಪರೀಕ್ಷೆಗೆ ಅರ್ಜಿ ಆಹ್ವಾನ.
  • ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆ ದಿನ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web KARTET 2023 Karnataka teachers eligibility test 2023 notification
KAR TET Exam 2023: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ.. ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ..PC-VK
2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023)ಗೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, ಟಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ, ಪರೀಕ್ಷಾ ದಿನಾಂಕ ಮತ್ತು ಇನ್ನಿತರ ಮಾಹಿತಿಯನ್ನು ನೀಡಿದೆ.
ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ವೆಬ್‌ಸೈಟ್ https://www.schooleducation.kar.nic.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ನಿಗದಿತ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ದಿನಾಂಕ 14-07-2023 ರಿಂದ 15-08-2023 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಟಿಇಟಿ-2022ರ ಪರೀಕ್ಷೆಗೆ ( KARTET-2022 Exam) (Online) ಮೂಲಕ ಅರ್ಜಿಯನ್ನು ದಿನಾಂಕ 14-07-2023 ರಿಂದ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ, ವಯೋಮಿತಿ ಸೇರಿದಂತೆ ವಿವಿಧ ಮಾಹಿತಿಗಳಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಸೂಚಿಸಿದೆ.

ರೈಲ್ ಕೌಶಲ್ ವಿಕಾಸ್ ಯೋಜನೆ ..ರೈಲ್ವೇ ಇಲಾಖೆಯಿಂದ 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ..
ಅಭ್ಯರ್ಥಿಗಳಿಗೆ ಸೂಚನೆಗಳು
  • ಕರ್ನಾಟಕ - ಶಿಕ್ಷಕರ ಅರ್ಹತಾ ಪರೀಕ್ಷೆ-2023ಕ್ಕೆ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 14-07-2023 ರಿಂದ 15-08-2023 ಒಳಗಾಗಿ ಇಲಾಖಾ ವೆಬ್‌ಸೈಟ್ https://www.schooleducation.kar.nic.in ಮೂಲಕ ಸಲ್ಲಿಸುವುದು.
  • ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯನ್ನು ಪೂರ್ಣ ವಿವರಗಳೊಂದಿಗೆ ಭರ್ತಿ ಮಾಡಿ, ಸ್ಕ್ಯಾನ್‌ ಮಾಡಲಾದ ತಮ್ಮ ಭಾವಚಿತ್ರ ಹಾಗೂ ಸಹಿಯನ್ನು ಜೆ.ಪಿ.ಇ.ಜಿ. (JPEG Format)ನಮೂನೆಯಲ್ಲಿ ಅಪ್‌ಲೋಡ್ ಮಾಡುವುದು.
  • ಆನ್‌ಲೈನ್ ಅರ್ಜಿಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ಪೂರ್ಣವಾಗಿ ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಪೂರ್ಣವಿವರಗಳನ್ನೊಳಗೊಂಡ ಅರ್ಜಿಯ ಕಂಪ್ಯೂಟರ್ ಜನರೇಟೆಡ್ ಪ್ರತಿಯ Print out ನ್ನು ಪಡೆದುಕೊಳ್ಳುವುದು.
Event Management Courses After 12th: PUC ನಂತರ ಯಾರೆಲ್ಲಾ ಇವೆಂಟ್‌ ಮ್ಯಾನೇಜ್‌ಮೆಂಟ್‌ ಕೋರ್ಸ್ ಓದಬಹುದು? ಉದ್ಯೋಗಾವಕಾಶಗಳು ಇವೆಯೇ?
ಆನ್‌ಲೈನ್ ಅರ್ಜಿ ಸಲ್ಲಸಲು ಅನುಸರಿಸಬೇಕಾದ ಕ್ರಮ
  • ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್ ನಲ್ಲಿ ನೀಡಲಾಗಿರುವ ಸೂಚನೆಗಳನ್ನು ತಪ್ಪದೇ ಓದಿ.
  • 'Registration 'Login' ನೊಂದಿಗೆ ಆನ್‌ಲೈನ್ ಅರ್ಜಿಯನ್ನು ಪೂರ್ಣ ವಿವರಗಳೊಂದಿಗೆ ಭರ್ತಿ ಮಾಡುವುದು.
  • ಸ್ಕ್ಯಾನ್ ಮಾಡಿದ ಅಭ್ಯರ್ಥಿಯ ಭಾವಚಿತ್ರ (50KB ಕ್ಕಿಂತಲೂ ಕಡಿಮೆ) ಹಾಗೂ ಸಹಿಯನ್ನು (40KB ಕ್ಕಿಂತಲೂ ಕಡಿಮೆ) ಅಪ್‌ಲೋಡ್‌ ಮಾಡುವುದು.
  • ಪರೀಕ್ಷಾ ಶುಲ್ಕವನ್ನು Internet Banking /debit Card/ Credit Card/ UPI ಅಥವಾ ಬ್ಯಾಂಕ್ ಚಲನ್ (ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕಿನಲ್ಲಿ ಮಾತ್ರ ಚಲನ್ ಮೂಲಕ ಶುಲ್ಕ ಪಾವತಿಸುವುದು) ಮೂಲಕವೇ ಪಾವತಿಸತಕ್ಕದ್ದು.
  • ಅಭ್ಯರ್ಥಿಗಳು ಒಮ್ಮೆ ಪಾವತಿಸಿರುವ ಪರೀಕ್ಷಾ ಶುಲ್ಕವನ್ನು ಯಾವುದೇ ಸಂದರ್ಭದಲ್ಲಿಯೂ ಮರುಪಾವತಿ ಮಾಡುವದಿಲ್ಲ. ಅಥವಾ ಮುಂದಿನ ಪರೀಕ್ಷೆಗಳಿಗೆ ಹೊಂದಾಣಿಕೆ ಮಾಡಲಾಗುವುದಿಲ್ಲ.
  • INTERNET Crash ಅನ್ನು ತಪ್ಪಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸುವುದು.
  • ಅಭ್ಯರ್ಥಿಗಳು ತಮ್ಮ ಆನ್‌ಲೈನ್‌ ಅರ್ಜಿಗಳನ್ನು https://www.schooleducation.kar.nic.in
  • ವೆಬ್‌ಸೈಟ್ ಮೂಲಕ ಶುಲ್ಕ ಪಾವತಿಸಿದ ನಂತರ, ಅಭ್ಯರ್ಥಿಗಳ User name and Password ಬಳಸಿ ಡೌನ್‌ಲೋಡ್ ಮಾಡಿಕೊಳ್ಳುವುದು. ಅರ್ಜಿ ಶುಲ್ಕ ಪಾವತಿಯಾದ ಎರಡು ದಿನಗಳ ನ೦ತರದಲ್ಲೂ ಪೇಮೆಂಟ್ ಸ್ಟೇಟಸ್ (Payment Status) ಪೆಂಡಿಂಗ್ ಎಂದು ಕಂಡುಬಂದಲ್ಲಿ ಕೇಂದ್ರೀಕೃತ ದಾಖಲಾತಿ ಘಟಕವನ್ನು ಸಂಪರ್ಕಿಸುವುದು.
  • ಅಭ್ಯರ್ಥಿಗಳು ಡೌನ್‌ಲೋಡ್ ಮಾಡಲಾದ ತಮ್ಮ ಆನ್‌ಲೈನ್ ಅರ್ಜಿಯನ್ನು ಮುಂದಿನ ದಿನಗಳಲ್ಲಿ ಯಾವುದೇ ಕಛೇರಿ, ಸಂಬಂಧಿತ ಆಡಳಿತ ಸಂಪರ್ಕಕ್ಕಾಗಿ ತಮ್ಮ ಬಳಿ ಕಡ್ಡಾಯವಾಗಿ ಇರಿಸಿಕೊಳ್ಳುವುದು. ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲಿ ನೀಡಿರುವ ಮಾಹಿತಿಯಲ್ಲಿ ಏನಾದರೂ ತಿದ್ದುಪಡಿ ಮಾಡಬೇಕಾದಲ್ಲಿ ಪರೀಕ್ಷಾ ಶುಲ್ಕ ಪಾವತಿಸುವುದಕ್ಕಿಂತ ಮೊದಲು ಮಾಡಬೇಕಾಗಿರುತ್ತದೆ. ನಂತರದಲ್ಲಿ ಯಾವುದೇ ತಿದ್ದುಪಡಿ/ಬದಲಾವಣೆಗೆ ಅವಕಾಶವಿರುವುದಿಲ್ಲ.
  • ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಯ ಮಾಹಿತಿಯಲ್ಲಿ ಯಾವುದೇ ವ್ಯತ್ಯಾಸವಿದ್ದಲ್ಲಿ ಅದರಿಂದ ಉಂಟಾಗುವ ಪರಿಣಾಮಗಳಿಗೆ ಅಭ್ಯರ್ಥಿಗಳೇ ಜವಾಬ್ದಾರರಾಗಿರುತ್ತಾರೆ.
  • ಅಭ್ಯರ್ಥಿಗಳು ಒಮ್ಮೆ ಮಾಹಿತಿ ತುಂಬಿ ಅಂತಿಮವಾಗಿ ಅರ್ಜಿ ಸಲ್ಲಿಸಿದ ಮೇಲೆ ಯಾವುದೇ ತಿದ್ದುಪಡಿಗೆ, ಹೊಸ ವಿವರಗಳನ್ನು ಅರ್ಜಿಯಲ್ಲಿ ಸೇರಿಸಲು ಅಥವಾ ತೆಗೆಯಲು ಅವಕಾಶವಿರುವುದಿಲ್ಲ. ಈ ಸಂಬಂಧ ಉದ್ಭವಿಸುವ ಸಮಸ್ಯೆಗಳಿಗೆ ಕೇಂದ್ರೀಕೃತ ದಾಖಲಾತಿ ಘಟಕವು ಜವಾಬ್ದಾರಿಯಾಗಿರುವುದಿಲ್ಲ.
  • ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿನ ಅರ್ಹತೆಯು ಶಿಕ್ಷಕರ ನೇಮಕಾತಿಗೆ, ಅಗತ್ಯವಾದ ಪ್ರವೇಶಾರ್ಹತೆಯೇ ಹೊರತು, ಅಭ್ಯರ್ಥಿಗಳು ನೇಮಕಾತಿಗೆ ಯಾವುದೇ ಹಕ್ಕನ್ನು ಚಲಾಯಿಸಲು ಅವಕಾಶವಿರುವುದಿಲ್ಲ.
  • KARTET-2023 ಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಉಪಯೋಗದಲ್ಲಿರುವಂತಹ ತಮ್ಮ ಸ್ವಂತ ಮೊಬೈಲ್‌ನ ಸಂಪರ್ಕ ಸಂಖ್ಯೆಯನ್ನು ಹಾಗೂ ಇ-ಮೇಲ್ ಐಡಿಯನ್ನು ಆನ್‌ಲೈನ್ ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸುವುದು.
  • ವೆಬ್‌ಸೈಟ್‌ನಲ್ಲಿ ನೀಡುವ ಹೆಚ್ಚುವರಿ ಮಾಹಿತಿಗಳನ್ನು ಪಡೆದುಕೊಳ್ಳಲು ಅಭ್ಯರ್ಥಿಗಳು, ಆಗಿಂದಾಗ್ಗೆ ಇಲಾಖಾ ವೆಬ್‌ಸೈಟ್ ವೀಕ್ಷಿಸುವುದು.
Medical Courses After 12th: ಭಾರತದಲ್ಲಿ ಹೆಚ್ಚು ಬೇಡಿಕೆ ಇರುವ ಮೆಡಿಕಲ್ ಕೋರ್ಸ್‌ಗಳಾವವು? ಪಟ್ಟಿ ಇಲ್ಲಿದೆ
KAR-TET 2023 ಪರೀಕ್ಷಾ ಶುಲ್ಕ ವಿವರ
  • ಸಾಮಾನ್ಯವರ್ಗ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ- ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ- ರೂ. 700. ಪತ್ರಿಕೆ-1 ಹಾಗೂ ಪತ್ರಿಕೆ-2 ರೂ. 1000/-.
  • ಪ.ಜಾ/ಪ.ಪಂ/ ಪ್ರವರ್ಗ-1 ಅಭ್ಯರ್ಥಿಗಳಿಗೆ - ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ- ರೂ. 350. ಪತ್ರಿಕೆ-1 ಹಾಗೂ ಪತ್ರಿಕೆ-2 ರೂ. 500/-.
  • ವಿಶೇಷ ಅಗತ್ಯಯುಳ್ಳ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕ ದಿಂದ ವಿನಾಯಿತಿ ಇರುತ್ತದೆ.

KAR-TET 2023 ಪ್ರವೇಶ ಪತ್ರ ಬಿಡುಗಡೆ ದಿನಾಂಕ-23-08-2023.
KAR-TET 2022 ಪರೀಕ್ಷಾ ದಿನಾಂಕ
  • 03-09-2023
  • ಪತ್ರಿಕೆ-1 - ಬೆಳಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆವರೆಗೆ.
  • ಪತ್ರಿಕೆ-2 - ಮಧ್ಯಾಹ್ನ 2 ರಿಂದ 4.30ರ ವರೆಗೆ.
ಲೇಖಕರ ಬಗ್ಗೆ
ಮುರಳಿಧರ. ಯಡಚಿ
" ಲೇಖಕರ ವಿವರ: ಮುರಳೀಧರ ಯಡಚಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 5 ವರ್ಷ 6 ತಿಂಗಳ ಅನುಭವ ಹೊಂದಿದ್ದಾರೆ. ಅವರು ಕ್ರೀಡೆ, ರಾಜಕೀಯ, ದಿನನಿತ್ಯದ ಅಪ್‌ಡೇಟ್‌ ಸುದ್ದಿ ಮತ್ತು ಶಿಕ್ಷಣ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ. ಪ್ರಸ್ತುತ, ಕಳೆದ 11 ತಿಂಗಳಿಂದ ಶಿಕ್ಷಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಮುರಳೀಧರ ಯಡಚಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಅವರು ತಮ್ಮ ವೃತ್ತಿಜೀವನದಲ್ಲಿ ಹಲವಾರು ಪ್ರಮುಖ ಸುದ್ದಿಗಳನ್ನು ಬ್ರೇಕ್‌ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದು ಮಾಧ್ಯಮಗಳಲ್ಲಿ ವ್ಯಾಪಕವಾಗಿ ವರದಿಯಾಗಿದೆ. ಮುರಳೀಧರ ಯಡಚಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಮುರಳೀಧರ ಯಡಚಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಕ್ರಿಕೆಟ್ ಆಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ಅವರ ಉತ್ತಮ ಗುಣಮಟ್ಟದ ಕೆಲಸಕ್ಕೆ ಈ ಹವ್ಯಾಸಗಳು ಸಹಾಯಕವಾಗಿವೆ. ಒಟ್ಟಾರೆ ಹೇಳುವುದಾದರೆ, ಮುರಳೀಧರ ಯಡಚಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ. "... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌