ಆ್ಯಪ್ನಗರ

CUET UG 2023 : ಸಿಯುಇಟಿ ಯುಜಿಗೆ ಅರ್ಜಿ ಸಲ್ಲಿಸುವುದು ಹೇಗೆ? ಎಷ್ಟು ವಿವಿ'ಗಳನ್ನು ಆಯ್ಕೆ ಮಾಡಬಹುದು? ಶುಲ್ಕವೇಷ್ಟು? ಇಲ್ಲಿದೆ ಮಾಹಿತಿ

ಸಾಮಾನ್ಯ ವಿಶ್ವವಿದ್ಯಾಲಯಗಳ ಪ್ರವೇಶ ಪರೀಕ್ಷೆಯನ್ನು ಭಾರತದಲ್ಲಿರುವ ಒಟ್ಟು 86 ವಿಶ್ವವಿದ್ಯಾನಿಲಯಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಸಲಾಗುತ್ತದೆ. ಅದರಲ್ಲಿ 43 ಕೇಂದ್ರೀಯ ವಿಶ್ವವಿದ್ಯಾಲಯಗಳು, 13 ರಾಜ್ಯ ವಿಶ್ವವಿದ್ಯಾಲಯಗಳು, 12 ಡೀಮ್ಡ್‌ ಮತ್ತು 18 ಖಾಸಗಿ ವಿಶ್ವವಿದ್ಯಾಲಯಗಳಿವೆ ಸೇರಿವೆ.

Authored byಮುರಳಿಧರ. ಯಡಚಿ | Vijaya Karnataka Web 23 Feb 2023, 11:09 am
ಕೇಂದ್ರೀಯ ವಿಶ್ವವಿದ್ಯಾಲಯಗಳ ಪ್ರವೇಶಾತಿಗೆ ನಡೆಸುವ ಸಾಮಾನ್ಯ ವಿಶ್ವವಿದ್ಯಾಲಯಗಳ ಪ್ರವೇಶ ಪರೀಕ್ಷೆ (CUET)ಗೆ ಇದೆ ತಿಂಗಳ ಫೆಬ್ರವರಿ 9,2023 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 12,2023 ಕೊನೆಯ ದಿನವಾಗಿದೆ.
Vijaya Karnataka Web common university entrance test 2023 registration and exam date eligibility how to apply for cuet check here
CUET UG 2023 : ಸಿಯುಇಟಿ ಯುಜಿಗೆ ಅರ್ಜಿ ಸಲ್ಲಿಸುವುದು ಹೇಗೆ? ಎಷ್ಟು ವಿವಿ'ಗಳನ್ನು ಆಯ್ಕೆ ಮಾಡಬಹುದು? ಶುಲ್ಕವೇಷ್ಟು? ಇಲ್ಲಿದೆ ಮಾಹಿತಿ


ಭಾರತದ ಒಟ್ಟು 86 ವಿಶ್ವವಿದ್ಯಾನಿಲಯಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಯಲಿದೆ. ಅದರಲ್ಲಿ 43 ಕೇಂದ್ರೀಯ ವಿಶ್ವವಿದ್ಯಾಲಯಗಳು, 13 ರಾಜ್ಯ ವಿಶ್ವವಿದ್ಯಾಲಯಗಳು, 12 ಡೀಮ್ಡ್‌ ಮತ್ತು 18 ಖಾಸಗಿ ವಿಶ್ವವಿದ್ಯಾಲಯಗಳಿವೆ.

ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯಾಗಿದೆ. ಅಭ್ಯರ್ಥಿಗಳು ಎಲ್ಲಾ ಕೇಂದ್ರೀಯ ವಿಶ್ವವಿದ್ಯಾನಿಲಯಗಳಲ್ಲಿ ಮತ್ತು ಇತರೆ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಈ ಪ್ರವೇಶ ಪರೀಕ್ಷೆ ಕಡ್ಡಾಯವಾಗಿದೆ.

CUET UG 2023 : ಇಂದಿನಿಂದ ಸಿಯುಇಟಿ ಯುಜಿ ಅರ್ಜಿ ಪ್ರಕ್ರಿಯೆ ಆರಂಭ.. ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ಸಲ್ಲಿಸುವ ಮೊದಲು ಯಾವ ವಿಶ್ವವಿದ್ಯಾಲಯಕ್ಕೆ ಪ್ರವೇಶ ಪಡೆಯುತ್ತೇವೆ ಎಂಬುದನ್ನ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಮೊದಲು ಪರಿಶೀಲಿಸಿಕೊಳ್ಳಿ. ಒಬ್ಬ ಅರ್ಜಿದಾರರು ಮೂರು ವಿಶ್ವವಿದ್ಯಾಲಯಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಮೂರಕ್ಕಿಂತ ಹೆಚ್ಚು ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷೆ ತೆಗೆದುಕೊಳ್ಳಬೇಕಾದರೆ ಹೆಚ್ಚುವರಿ ಮೊತ್ತವನ್ನು ಪಾವತಿಸಬೇಕಾಗುತ್ತದೆ.

PC-Pexels.com

ಅರ್ಜಿ ಸಲ್ಲಿಸುವುದು ಹೇಗೆ?

  • ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ cuet.samarth.ac.in ಅಥವಾ nta.ac.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಸಿಯುಇಟಿ ಯುಜಿ 2023 ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ತೆರೆದ ಪುಟದಲ್ಲಿ ನಿಮ್ಮ ವಿವರಗಳನ್ನು ನಮೂದಿಸಿ ನೋಂದಾಯಿಸಿಕೊಳ್ಳಿ.
  • ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಅಗತ್ಯ ದಾಖಲೆಗಳನ್ನು ಅಪ್ಲೋಡ್‌ ಮಾಡಿ.
  • ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಿ, ಅರ್ಜಿ ನಮೂನೆಯನ್ನು ಸಲ್ಲಿಸಿ.
  • ಅರ್ಜಿ ಸಲ್ಲಿಸಿದ ಮೇಲೆ ಅರ್ಜಿ ನಮೂನೆಯನ್ನು ಭವಿಷ್ಯದ ಉಲ್ಲೇಖಕ್ಕಾಗಿ ಡೌನ್‌ಲೋಡ್‌ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಿ.

PC-Pexels.com
Career After 12th Science : ಸೈನ್ಸ್‌ ವಿದ್ಯಾರ್ಥಿಗಳಿಗೆ ಇಲ್ಲಿವೆ ಬೆಸ್ಟ್‌ ಡಿಪ್ಲೊಮ ಕೋರ್ಸ್‌ಗಳು.. ಬೇಗ ಉದ್ಯೋಗ ಪಡೆಯಬಹುದು

ಅರ್ಜಿ ಶುಲ್ಕ

  • ಸಾಮಾನ್ಯ ಅಭ್ಯರ್ಥಿಗಳಿಗೆ - ರೂ. 750/-.
  • ಓಬಿಸಿ ಅಭ್ಯರ್ಥಿಗಳಿಗೆ - ರೂ. 700/-.
  • ಎಸ್ಸಿ / ಎಸ್‌ಟಿ/ ಪಿಡಬ್ಲ್ಯೂಬಿಡಿ/ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ - ರೂ.650/-.
  • ವಿದೇಶಿ ವಿದ್ಯಾರ್ಥಿಗಳಿಗೆ - ರೂ. 3,750/-.PC-Pexels.com

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು

ಪ್ರಮುಖ ದಿನಾಂಕಗಳು

  • ಅರ್ಜಿ ಪ್ರಕ್ರಿಯೆ ಆರಂಭ ದಿನಾಂಕ - 09-02-2023.
  • ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ - 12-03-2023.
  • ಅರ್ಜಿ ತಿದ್ದುಪಡಿಗೆ ಅವಕಾಶ ದಿನಾಂಕ - 15-03-2023 ರಿಂದ 18-03-2023ರವರೆಗೆ.
  • ಸಿಯುಇಟಿ ಯುಜಿ 2023 ಪರೀಕ್ಷಾ ಕೇಂದ್ರ ಮಾಹಿತಿ ಬಿಡುಗಡೆ ದಿನಾಂಕ - 30-04-2023.
  • ಸಿಯುಇಟಿ ಯುಜಿ 2023 ಪ್ರವೇಶ ಪತ್ರ ಬಿಡುಗಡೆ ದಿನಾಂಕ - ಮೇ ಎರಡನೇ ವಾರ.
  • ಸಿಯುಇಟಿ ಯುಜಿ 2023 ಪರೀಕ್ಷೆ ದಿನಾಂಕ - ಮೇ 21 ರಿಂದ 31, 2023ರ ವರೆಗೆ ಹಾಗೂ ಜೂನ್ 1 ರಿಂದ ಜೂನ್ 7,2023 ರ ವರೆಗೆ ನಡೆಯಲಿವೆ.PC-Pexels.com

ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ

ಭಾರತದ ಒಟ್ಟು 86 ವಿಶ್ವವಿದ್ಯಾನಿಲಯಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಯಲಿದೆ. ಅದರಲ್ಲಿ 43 ಕೇಂದ್ರೀಯ ವಿಶ್ವವಿದ್ಯಾಲಯಗಳು, 13 ರಾಜ್ಯ ವಿಶ್ವವಿದ್ಯಾಲಯಗಳು, 12 ಡೀಮ್ಡ್‌ ಮತ್ತು 18 ಖಾಸಗಿ ವಿಶ್ವವಿದ್ಯಾಲಯಗಳಿವೆ.

ಸಿಯುಇಟಿ ಯುಜಿ 2023 ಪ್ರವೇಶ ಪರೀಕ್ಷೆಯು ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆಯಾಗಿದೆ. ಈ ಪರೀಕ್ಷೆಯನ್ನು 13 ಭಾಷೆಗಳಲ್ಲಿ ನಡೆಸಲಾಗುತ್ತದೆ. ಇಂಗ್ಲಿಷ್, ಹಿಂದಿ, ಪಂಜಾಬಿ, ತಮಿಳು, ತೆಲುಗು, ಕನ್ನಡ, ಮಲಯಾಳಂ, ಮರಾಠಿ, ಗುಜರಾತಿ, ಒಡಿಯಾ, ಬೆಂಗಾಲಿ, ಅಸ್ಸಾಮಿ ಮತ್ತು ಉರ್ದು ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಇದಲ್ಲದೇ ಅಭ್ಯರ್ಥಿಗಳು ಫ್ರೆಂಚ್‌, ಜರ್ಮನ್‌, ಜಪಾನೀಸ್, ರಷ್ಯನ್, ಬೋಡೋ, ಸಂತಾಲಿ ಸೇರಿದಂತೆ ಇತರೆ 19 ವಿದೇಶಿ ಭಾಷೆಗಳನ್ನು ಆಯ್ಕೆ ಮಾಡಿಕೊಂಡು ಪರೀಕ್ಷೆ ಬರೆಯಬಹುದಾಗಿದೆ.

PC-Pexels.com

ಲೇಖಕರ ಬಗ್ಗೆ
ಮುರಳಿಧರ. ಯಡಚಿ
" ಲೇಖಕರ ವಿವರ: ಮುರಳೀಧರ ಯಡಚಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 5 ವರ್ಷ 6 ತಿಂಗಳ ಅನುಭವ ಹೊಂದಿದ್ದಾರೆ. ಅವರು ಕ್ರೀಡೆ, ರಾಜಕೀಯ, ದಿನನಿತ್ಯದ ಅಪ್‌ಡೇಟ್‌ ಸುದ್ದಿ ಮತ್ತು ಶಿಕ್ಷಣ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ. ಪ್ರಸ್ತುತ, ಕಳೆದ 11 ತಿಂಗಳಿಂದ ಶಿಕ್ಷಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಮುರಳೀಧರ ಯಡಚಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಅವರು ತಮ್ಮ ವೃತ್ತಿಜೀವನದಲ್ಲಿ ಹಲವಾರು ಪ್ರಮುಖ ಸುದ್ದಿಗಳನ್ನು ಬ್ರೇಕ್‌ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದು ಮಾಧ್ಯಮಗಳಲ್ಲಿ ವ್ಯಾಪಕವಾಗಿ ವರದಿಯಾಗಿದೆ. ಮುರಳೀಧರ ಯಡಚಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಮುರಳೀಧರ ಯಡಚಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಕ್ರಿಕೆಟ್ ಆಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ಅವರ ಉತ್ತಮ ಗುಣಮಟ್ಟದ ಕೆಲಸಕ್ಕೆ ಈ ಹವ್ಯಾಸಗಳು ಸಹಾಯಕವಾಗಿವೆ. ಒಟ್ಟಾರೆ ಹೇಳುವುದಾದರೆ, ಮುರಳೀಧರ ಯಡಚಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ. "... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌