ಆ್ಯಪ್ನಗರ

ಛತ್ತೀಸ್‌ಗಢದಲ್ಲಿ ಭೂಪೇಶ್‌ಗೆ ಪಟ್ಟಾಭಿಷೇಕ: ಕಾಂಗ್ರೆಸ್‌

ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯನ್ನಾಗಿ ಭೂಪೇಶ್‌ ಬಾಘೇಲ್‌ ಅವರನ್ನು ಕೈ ಹೈಕಮಾಂಡ್‌ ಘೋಷಿಸಲಿದೆ. ಭಾನುವಾರ ರಾಯ್ಪುರದಲ್ಲಿ ಈ ಸಂಬಂಧ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಧಿಕೃತ ಘೋಷಣೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಛತ್ತೀಸ್‌ಗಢ ಕಾಂಗ್ರೆಸ್‌ ಅಧ್ಯಕ್ಷರಾಗಿ ಅವರು ಕಾರ್ಯನಿರ್ವಹಿಸುತ್ತಿದ್ದರು.

Times Now 16 Dec 2018, 10:58 am
[This story originally published in Timesnownews.com on dec 16, 2018]
Vijaya Karnataka Web baghel


ರಾಯ್ಪುರ: ಛತ್ತೀಸ್‌ಗಢ ಕಾಂಗ್ರೆಸ್‌ ಅಧ್ಯಕ್ಷ ಭೂಪೇಶ್‌ ಬಾಘೆಲ್‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಕೈ ನಾಯಕರು ತೀರ್ಮಾನಿಸಿದ್ದಾರೆ.

ಹೊಸದಿಲ್ಲಿಯ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ನಿವಾಸದಲ್ಲಿ ನಡೆದ ಸಭೆಯ ಬಳಿಕ ರಾಯ್ಪುರದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿದ್ದು, ಒಮ್ಮತ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದ್ದು, ಮಧ್ಯಾಹ್ನದ ವೇಳೆಗೆ ಕಾಂಗ್ರೆಸ್ ಅಧಿಕೃತವಾಗಿ ಘೋಷಣೆ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಕುರ್ಚಿಯ ರೇಸ್‌ನಲ್ಲಿದ್ದ ಈ ವರೆಗೆ ವಿಧಾನಸಭೆಯ ವಿಪಕ್ಷ ನಾಯಕನ ಸ್ಥಾನದಲ್ಲಿದ್ದ ಟಿಎಸ್‌ ಸಿಂಗ್ದೇವ್ ಹಾಗೂ ಬಾಘೇಲ್‌ ಅವರೊಂದಿಗೆ ರಾಹುಲ್‌ ಮಾತುಕತೆ ನಡೆಸಿ, ಸಿಎಂ ಸ್ಥಾನವನ್ನು ಬಾಘೇಲ್‌ಗೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಒಬಿಸಿ ವರ್ಗದ ಕುರ್ಮಿಗೆ ಸೇರಿದ ನಾಯಕರಾಗಿರುವ ಬಾಘೇಲ್‌, ಈ ಹಿಂದೆ ಮಧ್ಯಪ್ರದೇಶದಲ್ಲಿ ದಿಗ್ವಿಜಯ್‌ಸಿಂಗ್‌ ಕ್ಯಾಬಿನೆಟ್‌ನಲ್ಲಿ ಹಾಗೂ 2000ದಲ್ಲಿ ಅಜಿತ್‌ ಜೋಗಿ ನೇತೃತ್ವದ ಛತ್ತೀಸ್‌ಗಢ ಸರಕಾರದಲ್ಲಿ ಸಾರಿಗೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಪಟನ್‌ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಾಘೇಲ್‌, ಬಿಜೆಪಿಯ ಮೋತಿಲಾಲ್‌ ಸಾಹು ಅವರನ್ನು 27,477 ಮತಗಳ ಅಂತರದಿಂದ ಸೋಲಿಸಿದ್ದಾರೆ.
2008ರ ಚುನಾವಣೆಯಲ್ಲಿ ಸೋಲುಂಡಿದ್ದ ಬಾಘೇಲ್‌, 2013ರಲ್ಲಿ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೇರಿದ್ದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ 68 ಸೀಟುಗಳನ್ನು ಪಡೆಯುವ ಮೂಲಕ ಬಹುಮತ ಸಾಧಿಸಿತ್ತು.


ರಾಹುಲ್‌ ಗಾಂಧಿ ಛತ್ತೀಸ್‌ಗಢ ನಾಯಕರೊಂದಿಗೆ ನಡೆದ ಸಭೆ ಕುರಿತು ಟ್ವಿಟರ್‌ನಲ್ಲೂ ಮಾಹಿತಿ ಹಂಚಿಕೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌