ಆ್ಯಪ್ನಗರ

ದಿಲ್ಲಿ ಚುನಾವಣೆ: ಅರವಿಂದ್ ಕೇಜ್ರಿವಾಲ್ ಎದುರಾಳಿಯಾಗಿ ನಿಂತ ಕರ್ನಾಟಕದ ಸ್ವಾಮೀಜಿ

ದಿಲ್ಲಿ ವಿಧಾನಸಭೆ ಚುನಾವಣೆ ರಂಗೇರಿದ್ದು ಎಲ್ಲಾ ಪಕ್ಷಗಳು ಭರದ ಸಿದ್ದತೆಗಳನ್ನು ನಡೆಸುತ್ತಿವೆ. ಈ ನಡುವೆ ಆಪ್ ಪಕ್ಷದ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕರ್ನಾಟಕದ ಸ್ವಾಮೀಜಿ ಒಬ್ಬರು ಸ್ಪರ್ಧಿಸಿ ಕುತೂಹಲ ಮೂಡಿಸಿದ್ದಾರೆ. ಆ ಕನ್ನಡಿಗ ಸ್ವಾಮೀಜಿ ಯಾರು ಎಂಬ ಮಾಹಿತಿ ಇಲ್ಲಿದೆ.

Vijaya Karnataka Web 22 Jan 2020, 12:43 pm
ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಸ್ಪರ್ಧಿಸಿರುವ ಹೊಸದಿಲ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಕರ್ನಾಟಕದ ಸ್ವಾಮೀಜಿಯೊಬ್ಬರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
Vijaya Karnataka Web venkateshwara maha swamiji


ವಿಜಯಪುರ(ಬಿಜಾಪುರ) ಜಿಲ್ಲೆ ಚಡಚಣ ತಾಲೂಕಿನ ಬರಡೊಲಾ ಗ್ರಾಮದ ಶ್ರೀ ವೆಂಕಟೇಶ್ವರ ಸ್ವಾಮೀಜಿ ಅವರು ಜ.14 ರಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ, ತಮ್ಮ ಬಳಿ ಕೇವಲ 9 ರೂಪಾಯಿ ನಗದು ಇದ್ದು 99,999 ರೂಪಾಯಿ ಸಾಲ ಹೊಂದಿರುವುದಾಗಿ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಎನ್‌ಸಿಪಿ ಟಿಕೆಟ್‌ ಆಕಾಂಕ್ಷಿ ಆಗಿದ್ದ ಇವರು, ಆ ಪಕ್ಷದ ಟಿಕೆಟ್‌ ದೊರೆಯದ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದಾರೆ.

ಗ್ರಾಮ ಪಂಚಾಯತಿ ಚುನಾವಣೆಯಿಂದ ಲೋಕಸಭೆ ಚುನಾವಣೆವರೆಗೂ ಸ್ಪರ್ಧಿಸಿರುವ ಇವರು ಒಟ್ಟು 18 ಚುನಾವಣೆಗಳಲ್ಲಿ ಅದೃಷ್ಟ ಪರೀಕ್ಷಿಸಿದ್ದಾರೆ. ಕರ್ನಾಟಕ ಮಾತ್ರವಲ್ಲದೇ ಗುಜರಾತ್‌, ಉತ್ತರ ಪ್ರದೇಶ, ಮಹಾರಾಷ್ಟ್ರ, ಗೋವಾಗಳಲ್ಲಿಯೂ ಸ್ಪರ್ಧಿಸಿದ್ದಾರೆ. ಫೆಬ್ರವರಿ 8ರಂದು ದೆಹಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಫೆಬ್ರವರಿ 11ರಂದು ಫಲಿತಾಂಶ ಹೊರಬರಲಿದೆ. ಬಿಜೆಪಿಯಿಂದ ಸುನೀಲ್ ಯಾದವ್, ಕಾಂಗ್ರೆಸ್‌ನಿಂದ ರೂಮೇಶ್ ಸಬರ್‌ವಾಲ್ ಅರವಿಂದ್ ಕೇಜ್ರಿವಾಲ್ ಎದುರಾಳಿಗಳಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌