ಆ್ಯಪ್ನಗರ

ಅಭಿವೃದ್ಧಿ ಹರಿಕಾರ ಅರವಿಂದ್ ಕೇಜ್ರಿವಾಲ್‌ರನ್ನು ಭಯೋತ್ಪಾದಕ ಎಂದಿದ್ದಕ್ಕೆ ಬಿಜೆಪಿಗೆ ತಕ್ಕ ಪಾಠ: ಎಚ್‌ಡಿಕೆ

ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಇಡೀ ಕೇಂದ್ರ ಸರಕಾರವೇ ಚಾಣಕ್ಯ ತಂತ್ರ ಹೂಡಿ, ಬಲ ಪ್ರದರ್ಶನ ಮಾಡಿದರೂ, ಮತದಾರ ನಿಲುವು ಬದಲಿಸಲಿಲ್ಲ. ಜನತಾ ನ್ಯಾಯಾಲಯದ ತೀರ್ಪು ಸ್ವಾಗರ್ತಾ ಎಂದು ಟ್ವೀಟಿಸಿದ್ದಾರೆ.

Vijaya Karnataka Web 11 Feb 2020, 3:57 pm
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಅಭೂತಪೂರ್ವ ಗೆಲುವು ದಾಖಲಿಸಿದೆ ಇದು ಜನ ಸಾಮಾನ್ಯರು ಅಭಿವೃದ್ಧಿಗೆ ನೀಡಿದ ಬೆಂಬಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
Vijaya Karnataka Web ಎಚ್‌ಡಿ ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ


ವಿಧಾನಸಭಾ ಚುನಾವಣೆ ಫಲಿತಾಂಶ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ ಎಚ್‌ಡಿ ಕುಮಾರಸ್ವಾಮಿ.


ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಯಶಸ್ಸು ಪಡೆದಿರುವ ಅರವಿಂದ್‌ ಕೇಜ್ರಿವಾಲ್‌, ಆಮ್‌ ಆದ್ಮಿ ಪಕ್ಷಕ್ಕೆ ಅಭಿನಂದನೆಗಳು ಎಂದು ಟ್ವೀಟ್‌ ಮಾಡಿದ್ದಾರೆ.


ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಇಡೀ ಕೇಂದ್ರ ಸರಕಾರವೇ ಚಾಣಕ್ಯ ತಂತ್ರ ಹೂಡಿ, ಬಲ ಪ್ರದರ್ಶನ ಮಾಡಿದರೂ, ಮತದಾರ ನಿಲುವು ಬದಲಿಸಲಿಲ್ಲ. ಜನತಾ ನ್ಯಾಯಾಲಯದ ತೀರ್ಪು ಸ್ವಾಗರ್ತಾ ಎಂದು ಟ್ವೀಟಿಸಿದ್ದಾರೆ.


ಅಭಿವೃದ್ಧಿ ಹರಿಕಾರ ಅರವಿಂದ್‌ ಕೇಜ್ರಿವಾಲ್‌ರನ್ನು ಭಯೋತ್ಪಾದಕ ಎಂದು ಬಿಜೆಪಿ ನಾಯಕರು ಟೀಕಿಸಿದ್ದಕ್ಕೆ ಜನರು ತಕ್ಕ ಕಲಿಸಿದ್ದಾರೆ ಎಂದು ಎಚ್‌ಡಿ ಕುಮಾರಸ್ವಾಮಿ ತಮ್ಮ ಟ್ವೀಟ್‌ ಸಂದೇಶದಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌