ಆ್ಯಪ್ನಗರ

ಪಕ್ಷದ ಜತೆಗಿರಿ: ಆನಂದ್‌ ಸಿಂಗ್‌‌ ಬಳಿ ಡಿಕೆಶಿ ಮನವಿ

ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಪಕ್ಷದೊಂದಿಗಿರಿ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರು ಶಾಸಕ ಆನಂದ್ ಸಿಂಗ್ ಬಳಿ ಮನವಿ ಮಾಡಿದ್ದಾರೆ.

Vijaya Karnataka Web 22 May 2018, 11:37 am
ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಪಕ್ಷದೊಂದಿಗಿರಿ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರು ಶಾಸಕ ಆನಂದ್ ಸಿಂಗ್ ಬಳಿ ಮನವಿ ಮಾಡಿದ್ದಾರೆ.
Vijaya Karnataka Web dks


ನಗರದ ಹಿಲ್ಟನ್ ಹೋಟೆಲ್‌ನಲ್ಲಿ ಕಾಂಗ್ರೆಸ್ ನಾಯಕರ ಮಹತ್ವದ ಸಭೆ ನಡೆದಿದ್ದು, ಡಿಕೆಶಿ ಹಾಗೂ ಆನಂದ್ ಸಿಂಗ್ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು.

'ನೀವು ಹಿರಿಯ ಶಾಸಕರಾಗಿದ್ದು, ಪಕ್ಷದಲ್ಲಿ ನಿಮಗೆ ಸೂಕ್ತ ಸ್ಥಾನಮಾನ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ಬಿಜೆಪಿ ಜತೆ ಹೋಗದಂತೆ' ಡಿ.ಕೆ.ಶಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

'ನಿಮಗೆ ಬೆದರಿಕೆ ಇದ್ದರೆ, ನಿಮ್ಮ ಜತೆ ನಾವು ಇರುತ್ತೇವೆ. ನನ್ನ ಮೇಲೂ ಐಟಿ ದಾಳಿ ನಡೆದಿದೆ. ಅದಕ್ಕೆಲ್ಲ ಹೆದರಿಕೊಂಡರೆ, ಇವತ್ತು ಏನಾಗುತ್ತಿತ್ತು? ಯಾವುದೇ ಕಾರಣಕ್ಕೂ ನೀವು ಭಯಪಡುವ ಅವಶ್ಯಕತೆ ಇಲ್ಲ' ಎಂದು ಸಿಂಗ್‌ಗೆ ಧೈರ್ಯ ತುಂಬುವ ಕೆಲಸವನ್ನು ಮಾಡಿದ್ದಾರೆ ಡಿ.ಕೆ.ಶಿವಕುಮಾರ್.

ಯಡಿಯೂರಪ್ಪ ವಿಶ್ವಾಸಮತಯಾಚಿಸುವ ಸಂದರ್ಭದಲ್ಲಿ ಆನಂದ್ ಸಿಂಗ್ ಬಿಜೆಪಿ ಜತೆ ಹೋಗುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌