ಆ್ಯಪ್ನಗರ

ಸ್ಪಷ್ಟ ಬಹುಮತವಿಲ್ಲದ್ದಕ್ಕೆ ಸಿಎಂ ತ್ಯಾಗದ ಮಾತು: ರವಿ ಟೀಕೆ

ಕಾಂಗ್ರೆಸ್‌ಗೆ ಬಹುಮತ ಖಚಿತವಿಲ್ಲ ಎಂದು ಗೊತ್ತಾದ ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ದಲಿತ ಮುಖ್ಯಮಂತ್ರಿ ದಾಳ ಉರುಳಿಸಿ ತ್ಯಾಗದ ಮಾತನ್ನಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟೀಕಿಸಿದ್ದಾರೆ.

Vijaya Karnataka 15 May 2018, 7:41 am
ಚಿಕ್ಕಮಗಳೂರು: ಕಾಂಗ್ರೆಸ್‌ಗೆ ಬಹುಮತ ಖಚಿತವಿಲ್ಲ ಎಂದು ಗೊತ್ತಾದ ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ದಲಿತ ಮುಖ್ಯಮಂತ್ರಿ ದಾಳ ಉರುಳಿಸಿ ತ್ಯಾಗದ ಮಾತನ್ನಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟೀಕಿಸಿದ್ದಾರೆ.
Vijaya Karnataka Web ctr


ಚುನಾವಣೆ ಪ್ರಚಾರದುದ್ದಕ್ಕೂ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಹೇಳಿದ್ದರು. ಅವರ ನೇತೃತ್ವದಲ್ಲಿ ನಡೆದಿರುವ ಈ ಚುನಾವಣೆಯಲ್ಲಿ ಬಹುಮತ ಬರುವುದಿಲ್ಲ ಎಂದು ಅವರೇ ಒಪ್ಪಿಕೊಂಡಿದ್ದಾರೆ. ಈಗ ದಲಿತ ಸಿಎಂ ದಾಳ ಉರುಳಿಸಿರುವ ಸಿದ್ದರಾಮಯ್ಯ ಅವರಿಗೆ ನಿಜ ಕಾಳಜಿ ಇದ್ದಿದ್ದರೆ ಈ ಹಿಂದೆ ಡಾ.ಜಿ.ಪರಮೇಶ್ವರ್‌ ಅವರನ್ನು ಮಂತ್ರಿ ಮಾಡಲು ಗೋಳಾಡಿಸುತ್ತಿರಲಿಲ್ಲ. 5 ವರ್ಷದಲ್ಲಿ ಡಿಸಿಎಂ ಹುದ್ದೆಯನ್ನೂ ಸೃಷ್ಟಿಸಲಿಲ್ಲ. ಅತಂತ್ರ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಗೊತ್ತಾದೊಡನೆ ಈಗ ದಲಿತ ಸಿಎಂ ವಿಚಾರ ಹರಿಯಬಿಟ್ಟು ತ್ಯಾಗದ ಮಾತನ್ನಾಡುತ್ತಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌