ಆ್ಯಪ್ನಗರ

ಉಪ ಚುನಾವಣೆ ಫಲಿತಾಂಶ: ಚಿಂಚೋಳಿಯಲ್ಲಿ ಬಿಜೆಪಿಗೆ, ಕುಂದಗೋಳದಲ್ಲಿ ಕಾಂಗ್ರೆಸ್‌ ಪಾಲಿಗೆ ಜಯದ ಮಾಲೆ

ಸಿ ಎಸ್ ಶಿವಳ್ಳಿ ಅವರ ನಿಧನದಿಂದ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆದಿದೆ. ಉಮೇಶ್‌ ಜಾಧವ್ ಕಾಂಗ್ರೆಸ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರ ಹಿನ್ನಲೆಯಲ್ಲಿ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆದಿದೆ.

Vijaya Karnataka Web 23 May 2019, 4:14 pm
ಧಾರವಾಡ/ಕಲಬುರಗಿ: ಪರಿಶಿಷ್ಟ ಜಾತಿಯ ಮೀಸಲು ಕ್ಷೇತ್ರವಾದ ಕಲಬುರಗಿ ಜಿಲ್ಲೆ ಚಿಂಚೋಳಿ ಉಪಚುನಾವಣೆಯಲ್ಲಿ ಉಮೇಶ್‌ ಜಾಧವ್ ಪುತ್ರ ಡಾ. ಅವಿನಾಶ್‌ ಜಾಧವ್ ಕಾಂಗ್ರೆಸ್ ಹಾಗೂ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಸುಭಾಷ್ ರಾಥೋಡ್ ವಿರುದ್ಧ ಭಾರಿ ಮುನ್ನಡೆ ಸಾಧಿಸುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.
Vijaya Karnataka Web by election


ಉಮೇಶ್‌ ಜಾಧವ್ ಕಾಂಗ್ರೆಸ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರ ಹಿನ್ನಲೆಯಲ್ಲಿ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆದಿದೆ.

ಕುಂದಗೋಳ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಚಿಕ್ಕಣವರ ವಿರುದ್ಧ ಸ್ಪರ್ಧಿಸಿದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಜಯ ಸಾಧಿಸಿದ್ದಾರೆ.

ಸಿ ಎಸ್ ಶಿವಳ್ಳಿ ಅವರ ನಿಧನದಿಂದ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆದಿದೆ.

ಉಪಚುನಾವಣೆಯ ಫಲಿತಾಂಶ ರಾಜ್ಯ ಸರಕಾರದ ಮೈತ್ರಿ ಆಡಳಿತದ ಮೇಲೆ ಪರಿಣಾಮ ಬೀಳಲಿದೆ:
ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಭಾರಿ ಸವಾಲಾಗಿ ಪರಿಣಮಿಸಿತ್ತು. ಉಭಯ ಪಕ್ಷಗಳ ರಾಜಕೀಯ ಭವಿಷ್ಯ ನಿರ್ಧರಿಸುವಲ್ಲಿ ಇಲ್ಲಿನ ಫಲಿತಾಂಶ ಮುಖ್ಯವಾಗಿತ್ತು.

ಈ ಎರಡೂ ಕ್ಷೇತ್ರಗಳು ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದು ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್‌ ಪುತ್ರ ಕೈಲಾಸ್‌ನಾಥ್‌ ಪಾಟೀಲ್‌ ಅವರನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಲಿಂಗಾಯತ ಮತಗಳ ಸೆಳೆಯಲು ಪ್ರಯತ್ನಿಸಿದರೆ, ಕುಂದಗೋಳದಲ್ಲಿ ಸಚಿವ ಡಿ.ಕೆ.ಶಿವಕುಮಾರ್‌ ರಣತಂತ್ರ ರೂಪಿಸಿ ಕುಸುಮಾವತಿ ಶಿವಳ್ಳಿ ಅವರನ್ನು ಕಣಕ್ಕೆ ಇಳಿಸಿದ್ದರು.

ಈ ಎರಡು ಕ್ಷೇತ್ರಗಳ ಗೆಲುವು ಬಯಸಿದ ಬಿಜೆಪಿಗೆ ಸಿಕ್ಕಿದ್ದು ಒಂದು ಕ್ಷೇತ್ರ

ರಾಜ್ಯದಲ್ಲಿ ಜನಾದೇಶ ಮೈತ್ರಿ ಸರಕಾರದ ಪರವಾಗಿಲ್ಲ ಎಂಬುದನ್ನು ಸಾಬೀತು ಮಾಡುವುದಕ್ಕೆ ಈ ಎರಡು ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಬಿಜೆಪಿಗೆ ಅನಿವಾರ್ಯವಾಗಿತ್ತು. ಈ ಹಿನ್ನೆಲೆಯಲ್ಲಿ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಈ ಎರಡೂ ಕ್ಷೇತ್ರದ ಮೇಲೆ ನಿಗಾ ಇಟ್ಟಿದ್ದರು. ಎರಡೂ ಕ್ಷೇತ್ರಗಳಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿತ್ತು.

ಕುಂದಗೋಳದಲ್ಲಿ ಲಿಂಗಾಯತರು ಹಾಗೂ ಕುರುಬ ಸಮುದಾಯದವರ ಮತ ನಿರ್ಣಾಯಕವಾಗಿರುವುದರಿಂದ ಕುಸುಮಾವತಿ ಶಿವಳ್ಳಿಯವರಿಗೆ ಕಾಂಗ್ರೆಸ್‌ ಪಕ್ಷ ಸೀಟು ನೀಡಿತು.

ಗೆಲ್ಲಲೇಬೇಕೆಂದು ಹಠಕ್ಕೆ ಬಿದದ್ದ ಬಜೆಪಿ ಜಗದೀಶ್‌ ಶೆಟ್ಟರ್‌, ಕೆ.ಎಸ್‌.ಈಶ್ವರಪ್ಪ, ಬಿ.ಶ್ರೀರಾಮುಲು ಅವರಿಗೆ ಕುಂದಗೋಳದ ಉಸ್ತುವಾರಿ ನೀಡಿದ್ದರು. ವಿ.ಸೋಮಣ್ಣ, ಎನ್‌.ರವಿಕುಮಾರ್‌, ಬಾಬುರಾವ್‌ಚಿಂಚನಸೂರ್‌ಗೆ ಚಿಂಚೋಳಿ ಉಸ್ತುವಾರಿ ನೀಡಲಾಗಿತ್ತು.

ಈ ಎರಡು ಕ್ಷೇತ್ರದಲ್ಲಿ ಗೆದ್ದರೆ ಸರಕಾರ ರಚಿಸುವ ಬಿಜೆಪಿಯ ಪ್ರಯತ್ನಕ್ಕೆ ಮುಂದಾಗುವ ಯೋಚನೆಯಲ್ಲಿದ್ದ ಬೆಜೆಪಿಗೆ ಒಂದು ಸ್ಥಾನ ಲಭಿಸಿದರೆ ಮತ್ತೊಂದು ಕಾಂಗ್ರೆಸ್ ಪಾಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ