ಆ್ಯಪ್ನಗರ

ಡಾಬಾದಲ್ಲಿ ಕೈ, ಕಮಲ ಕಾರ್ಯಕರ್ತರ ಗಲಾಟೆ

ನರಗುಂದ ಪಟ್ಟಣದಲ್ಲಿ ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.

Vijaya Karnataka Web 20 Apr 2018, 10:55 am
ಗದಗ: ನರಗುಂದ ಪಟ್ಟಣದಲ್ಲಿ ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.
Vijaya Karnataka Web clash


ಕಾಂಗ್ರೆಸ್‌ನ ಹಾಲಿ ಶಾಸಕ ಬಿ.ಆರ್ ಯಾವಗಲ್ ಪುತ್ರರು ಹಾಗೂ ಬೆಂಬಲಿಗರು ಬಿಜೆಪಿ ಅಭ್ಯರ್ಥಿ ಸಿ‌.ಸಿ ಪಾಟೀಲ್ ಪುತ್ರರು ಹಾಗೂ ಬೆಂಬಲಿಗರ ಮಧ್ಯೆ ಗಲಾಟೆ ನಡೆದಿದೆ.

ನರಗುಂದ ಪಟ್ಟಣದ ಕಾಂಗ್ರೆಸ್ ಮುಖಂಡ ರಾಜು‌ ಕಲಾಲ ಎಂಬವರ ಹೋಟೆಲ್ (ಡಾಬಾ) ದಲ್ಲಿ ಮಧ್ಯರಾತ್ರಿವರೆಗೂ ಮತದಾರರಿಗೆ ಊಟ ಹಾಗೂ ಡ್ರಿಂಕ್ಸ್ ನೀಡುತ್ತಿದ್ದಾರೆ ಎನ್ನಲಾಗಿದೆ.

ಬಿಜೆಪಿ ಕಾರ್ಯಕರ್ತರು ಊಟದ ನೆಪದಲ್ಲಿ ಬಂದು ಜಗಳ ಮಾಡಿ ಹಲ್ಲೆ ಮಾಡಿ ಡಾಬಾ ಧ್ವಂಸ ಮಾಡಿದ್ದಾರೆ ಎಂಬುದು ಕಾಂಗ್ರೆಸ್‌ ಕಾರ್ಯಕರ್ತರು ಆರೋಪಿಸಿದ್ದಾರೆ. ಎರಡೂ ಪಕ್ಷದ ಕಾರ್ಯಕರ್ತರರು ಗಾಯಗೊಂಡಿದ್ದು, ನರಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ