ಆ್ಯಪ್ನಗರ

ಡಿಕೆಶಿ ಹಣದ ದುರಹಂಕಾರ ನಡೆಯಲ್ಲ: ಪ್ರಹ್ಲಾದ್ ಜೋಶಿ

ಕುಂದಗೋಳ ತಾಲೂಕು ಹಿರೇಹರಕುಣಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡ್ರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕ್ಷೇತ್ರದ ಮತದಾರ ಇದಾವುದನ್ನೂ ನೋಡುವುದಿಲ್ಲ. ಇವರನ್ನು ಮನೆಗೆ ಕಳಿಸುತ್ತಾರೆ ಎಂದರು. ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರಕಾರ ಇದ್ದರೂ ಕೂಡ ಅವರೆಲ್ಲ ಹೊಡೆದಾಡುತ್ತಿದ್ದಾರೆ. ಕುಂದಗೋಳ ಕ್ಷೇತ್ರದಲ್ಲೂ ಕೂಡ ತೋರಿಕೆಗೆ ಮಾತ್ರ ಮೈತ್ರಿ ಅಭ್ಯರ್ಥಿ ಇದ್ದಾರೆ ಎಂದು ಹೇಳಿದರು.

Vijaya Karnataka Web 12 May 2019, 5:12 pm
ಕುಂದಗೋಳ (ಹುಬ್ಬಳ್ಳಿ): ಡಿ. ಕೆ. ಶಿವಕುಮಾರ ಹಣದ ಚೀಲ ಹಿಡಿದುಕೊಂಡು ಜನರನ್ನು ಖರೀದಿಸುವ ದುರಹಂಕಾರದಿಂದ ಕ್ಷೇತ್ರಕ್ಕೆ ಬಂದಿದ್ದಾರೆ ಎಂದು ಸಂಸದ ಪ್ರಹ್ಲಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ.
Vijaya Karnataka Web Prahlad Joshi


ಕುಂದಗೋಳ ತಾಲೂಕು ಹಿರೇಹರಕುಣಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡ್ರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕ್ಷೇತ್ರದ ಮತದಾರ ಇದಾವುದನ್ನೂ ನೋಡುವುದಿಲ್ಲ. ಇವರನ್ನು ಮನೆಗೆ ಕಳಿಸುತ್ತಾರೆ ಎಂದರು.

ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರಕಾರ ಇದ್ದರೂ ಕೂಡ ಅವರೆಲ್ಲ ಹೊಡೆದಾಡುತ್ತಿದ್ದಾರೆ. ಕುಂದಗೋಳ ಕ್ಷೇತ್ರದಲ್ಲೂ ಕೂಡ ತೋರಿಕೆಗೆ ಮಾತ್ರ ಮೈತ್ರಿ ಅಭ್ಯರ್ಥಿ ಇದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಭೀಕರ ಬರಗಾಲವಿದೆ, ಆದರೆ ಜನರ ಸಮಸ್ಯೆ ನಿರ್ಲಕ್ಷ್ಯ ಮಾಡಿ ಚುನಾವಣೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಕುಂದಗೋಳ ಕ್ಷೇತ್ರದಲ್ಲಿ ಚಿಕ್ಕನಗೌಡರ ಗೆದ್ದರೆ ಬಿಎಸ್ ವೈ ಸಿಎಂ ಆಗತಾರೆ. ಹೀಗಾಗಿ ಚಿಕ್ಕನಗೌಡರ ಅವರನ್ನು 10 ಪಟ್ಟು ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸುವಂತೆ ಮನವಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ