ಆ್ಯಪ್ನಗರ

ಅಭ್ಯರ್ಥಿ ನಾಮಪತ್ರ: ಕಾದು ಕುಳಿತ ಸಂಸದ ಡಿಕೆ ಸುರೇಶ್

ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ನಾಮಪತ್ರ ಸಲ್ಲಿಸುವ ಸಂದರ್ಭ, ಅವರೊಂದಿಗೆ ಬಂದ ಸಂಸದ ಡಿಕೆ ಸುರೇಶ್ ಮತ್ತು ವಿಧಾನಪರಿಷತ್ ಸದಸ್ಯ ಸಿ ಎಂ ಲಿಂಗಪ್ಪ ಅವರು ಚುನಾವಣಾಧಿಕಾರಿಯ ಕೊಠಡಿ ಬಾಗಿಲ ಬಳಿ ಹತ್ತು ನಿಮಿಷ ಕಾದು ಕುಳಿತರು.

Vijaya Karnataka Web 23 Apr 2018, 4:22 pm
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ನಾಮಪತ್ರ ಸಲ್ಲಿಸುವ ಸಂದರ್ಭ, ಅವರೊಂದಿಗೆ ಬಂದ ಸಂಸದ ಡಿಕೆ ಸುರೇಶ್ ಮತ್ತು ವಿಧಾನಪರಿಷತ್ ಸದಸ್ಯ ಸಿ ಎಂ ಲಿಂಗಪ್ಪ ಅವರು ಚುನಾವಣಾಧಿಕಾರಿಯ ಕೊಠಡಿ ಬಾಗಿಲ ಬಳಿ ಹತ್ತು ನಿಮಿಷ ಕಾದು ಕುಳಿತರು.
Vijaya Karnataka Web mp  dk suresh.


ರಾಮನಗರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಜಿಪಂ ಅಧ್ಯಕ್ಷ ಇಕ್ಬಾಲ್ ಹುಸೇನ್ ಬೆಳಗ್ಗೆ 11 ಗಂಟೆಯಿಂದ 1ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಸಮಯ ಪಡೆದಿದ್ದರು. ಅವರು ಬರುವಾಗ ಚುನಾವಣಾಧಿಕಾರಿ ಕಚೇರಿಯಲ್ಲಿ ಜೆಡಿಯು ಅಭ್ಯರ್ಥಿ ರವಿ ನಾಮಪತ್ರ ಸಲ್ಲಿಸುತ್ತಿದ್ದರು.

ಬಾಗಿಲ ಬಳಿ ಬಂದ ಸಂಸದ ಡಿಕೆ ಸುರೇಶ್ ಅಧಿಕಾರಿಗಳಿಗೆ ನಿಗದಿತ ಸಮಯದಲ್ಲಿ ತಾವು ಬಂದಿದ್ದು ಒಳ ಪ್ರವೇಶಿಸಲು ಅವಕಾಶ ಕೊಡುವಂತೆ ತಿಳಿಸಿದರು. ಪೊಲೀಸ್ ಅಧಿಕಾರಿಯೊಬ್ಬರು ಈ ವಿಚಾರವನ್ನು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಡಾ. ನಾಗರಾಜ್ ಗಮನಕ್ಕೆ ತಂದರು.

ಜೆಡಿಯು ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಪೂರ್ಣಗೊಂಡ ಬಳಿಕ ಒಳಬಿಡುವಂತೆ ಚುನಾವಣಾಧಿಕಾರಿ ಸೂಚಿಸಿದರು. ಸುಮಾರು ಹತ್ತು ನಿಮಿಷದ ಬಳಿಕ ಚುನಾವಣಾಧಿಕಾರಿ ಕಚೇರಿ ಪ್ರವೇಶಿಸಲು ಅವಕಾಶ ದೊರೆಯಿತು. ನಂತರ ಸಂಸದ ಸಹಿತ ಎಲ್ಲರೂ ಒಳಪ್ರವೇಶಿಸಿ ಅಭ್ಯರ್ಥಿ ಇಕ್ಬಾಲ್ ಹುಸೇನ್‌ಗೆ ಸಾಥ್ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌