ಆ್ಯಪ್ನಗರ

ಮತಯಂತ್ರದಲ್ಲಿ ದೋಷ : ಲೊಟ್ಟೆಗೊಲ್ಲಹಳ್ಳಿಯಲ್ಲಿ ಸೋಮವಾರ ಮರುಮತದಾನ

ಹೆಬ್ಬಾಳ ಕ್ಷೇತ್ರದ ಲೊಟ್ಟೆಗೊಲ್ಲಹಳ್ಳಿಯ ಆರ್.ಎಂ.ವಿ 2ನ ಹಂತದ ಗಾಂಧಿ ವಿದ್ಯಾಲಯ ಮತಗಟ್ಟೆಯಲ್ಲಿ ಇವಿಎಂ ಯಂತ್ರಗಳಲ್ಲಿ ದೋಷ ಕಂಡು ಬಂದ ಕಾರಣ ಮತದಾನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಸೋಮವಾರ ಇಲ್ಲಿ ಮರುಮತದಾನ ನಡೆಯಲಿದೆ.

Vijaya Karnataka Web 13 May 2018, 12:24 pm
ಬೆಂಗಳೂರು: ಹೆಬ್ಬಾಳ ಕ್ಷೇತ್ರದ ಲೊಟ್ಟೆಗೊಲ್ಲಹಳ್ಳಿಯ ಆರ್.ಎಂ.ವಿ 2ನ ಹಂತದ ಗಾಂಧಿ ವಿದ್ಯಾಲಯ ಮತಗಟ್ಟೆಯಲ್ಲಿ ಇವಿಎಂ ಯಂತ್ರಗಳಲ್ಲಿ ದೋಷ ಕಂಡು ಬಂದ ಕಾರಣ ಮತದಾನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಸೋಮವಾರ ಇಲ್ಲಿ ಮರುಮತದಾನ ನಡೆಯಲಿದೆ.
Vijaya Karnataka Web evm


ಮತಯಂತ್ರದಲ್ಲಿ ನಿರ್ದಿಷ್ಟ ಅಭ್ಯರ್ಥಿಯ ಹೆಸರಿನ ಮುಂದಿನ ಚಿಹ್ನೆಯ ಮುಂದಿನ ಗುಂಡಿ ಒತ್ತಿದರೆ, ಅದು ಬೇರೆ ಅಭ್ಯರ್ಥಿಗೆ ಚಲಾವಣೆಯಾಗುತ್ತಿತ್ತು . ವಿವಿಪ್ಯಾಟ್‌ನಲ್ಲೂ ಬೇರೆ ಅಭ್ಯರ್ಥಿಯ ಚಿಹ್ನೆ ಕಾಣಿಸಿಕೊಳ್ಳುತ್ತಿತ್ತು ಎಂದು ಅನೇಕ ಮತದಾರರು ದೂರಿದ್ದರು.

ಆ ಬಳಿಕ ಮತಗಟ್ಟೆ ಅಧಿಕಾರಿಗಳೇ ಖುದ್ದಾಗಿ ಪರಿಶೀಲಿಸಿದಾಗ ಮತಯಂತ್ರದಲ್ಲಿ ಲೋಪವಿದ್ದುದು ಖಚಿತವಾಯಿತು. ಅಷ್ಟರಲ್ಲಾಗಲೇ 49 ಮತಗಳು ಚಲಾವಣೆಯಾಗಿದ್ದವು. ಬಳಿಕ ಬಿಇಎಲ್‌ ತಂತ್ರಜ್ಞರನ್ನು ಸ್ಥಳಕ್ಕೆ ಕರೆಯಿಸಿ ಪರಿಶೀಲಿಸಿದಾಗ ಮತಯಂತ್ರದಲ್ಲಿ ಲೋಪವಿರುವುದು ಕಂಡು ಬಂತು.

ಬಳಿಕ ಮತದಾನ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಯಿತು, ಸೋಮವಾರಕ್ಕೆ ಮುಂದೂಡಲಾಯಿತು. ಹಕ್ಕು ಚಲಾವಣೆಗಾಗಿ ಮತಗಟ್ಟೆಗೆ ಬಂದವರಿಗೆ ‘ಇಲ್ಲಿನ ಮತ ಯಂತ್ರ ಕೆಟ್ಟು ಹೋಗಿದೆ’ ಎಂದು ಅಧಿಕಾರಿಗಳು ಹಿಂದಕ್ಕೆ ಕಳುಹಿಸಿದ್ದರು.

ಮೇ.12 ರಂದು ಮತದಾನ ಮಾಡಿದವರೂ ಸಹ ಮೇ.14 ರಂದು ಮರುಮತದಾನ ಮಾಡಬೇಕು. ಮರುಮತದಾನದ ಅವಧಿಯನ್ನು ಬೆಳಿಗ್ಗೆ 7 ರಿಂದ ಸಂಜೆ 6 ವರೆಗೆ ನಿಗದಿಪಡಿಸಲಾಗಿದೆ. ಇಂಕ್ ಬಗ್ಗೆ ಶೀಘ್ರವೇ ನಿರ್ಧಾರ ಪ್ರಕಟಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌