ಆ್ಯಪ್ನಗರ

ಹೈಕಮಾಂಡ್‌ ದಲಿತ ಸಿಎಂ ಮಾಡಿದರೆ ನನ್ನ ವಿರೋಧವಿಲ್ಲ: ಸಿದ್ದರಾಮಯ್ಯ

ದಲಿತ ಸಿಎಂ ಕೂಗಿಗೆ ನನ್ನ ವಿರೋಧವಿಲ್ಲ. ಈ ಬಗ್ಗೆ ಹೈ ಕಮಾಂಡ್ ತೀರ್ಮಾನ ಮಾಡಿದ್ರೆ ನನ್ನ ತಕರಾರಿಲ್ಲ. ಆದರೆ, ದಲಿತ ಸಿಎಂ ಒಮ್ಮೆಲೇ ಮಾಡಲು ಸಾಧ್ಯವಿಲ್ಲ, ಇದಕ್ಕೆ ಶಾಸಕರ ಸಮ್ಮತಿ ಬೇಕು ಎಂದು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Vijaya Karnataka Web 13 May 2018, 1:52 pm
ಮೈಸೂರು: ದಲಿತ ಸಿಎಂ ಕೂಗಿಗೆ ನನ್ನ ವಿರೋಧವಿಲ್ಲ. ಈ ಬಗ್ಗೆ ಹೈ ಕಮಾಂಡ್ ತೀರ್ಮಾನ ಮಾಡಿದ್ರೆ ನನ್ನ ತಕರಾರಿಲ್ಲ. ಆದರೆ, ದಲಿತ ಸಿಎಂ ಒಮ್ಮೆಲೇ ಮಾಡಲು ಸಾಧ್ಯವಿಲ್ಲ, ಇದಕ್ಕೆ ಶಾಸಕರ ಸಮ್ಮತಿ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Vijaya Karnataka Web CM


ರಾಜ್ಯ ಚುನಾವಣಾ ಫಲಿತಾಂಶ ಲೋಕಸಭೆಯ ಚುನಾವಣೆಗಷ್ಟೇ ಅಲ್ಲ. ದೇಶದ ಇತರೆ ರಾಜ್ಯಗಳ ಚುನಾವಣೆಗೆ ಅಡಿಗಲ್ಲು. ಲೋಕಸಭೆ ಚುನಾವಣೆಗೆ ಮುಂಚಿತವಾಗಿ, ರಾಜಸ್ಥಾನ,ಮಧ್ಯಪ್ರದೇಶ ಚುನಾವಣೆ ಬರಲಿದೆ. ಆ ಚುನಾವಣೆಗಳನ್ನ ಗೆದ್ದು ದೇಶವನ್ನು ಹಿಡಿತಕ್ಕೆ ತಗೆದುಕೊಳ್ಳುತ್ತೇವೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು, ನಾನು ಎರಡೂ ಕಡೆಗಳಲ್ಲಿ ಗೆಲ್ಲುವೆ. ಬಾದಾಮಿಯಲ್ಲಿ ಹೆಚ್ಚು ಬಹುಮತ ಬರಲಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕೂಡ ಗೆಲ್ಲುವೆ, ಆದ್ರೆ ನಿರೀಕ್ಷೆ ಮಟ್ಟದ ಲೀಡ್ ಬರದಿರಬಹುದು ಎಂದು ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ. ಹಾಗೂ, ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಜಿ.ಟಿ.ದೇವೇಗೌಡ ಹೆಚ್ಚು ಹಣ ಖರ್ಚು ಮಾಡಿದ್ದಾರೆ. ಆದ್ರೆ ಹಣ ಎಲ್ಲಿಂದ ಬಂತು ಅಂತಾ ನನಗೆ ಗೊತ್ತಿಲ್ಲ. ಹಾಗೆ, ಜನತೆ ಹಣಕ್ಕೆ ಹೆಚ್ಚು ಮನ್ನಣೆ ಕೊಡ್ತಾರೆ ಅಂತಾ ನನಗೆ ಅನಿಸಲ್ಲ ಎಂದು ಹೇಳಿದ್ದಾರೆ.

ಇನ್ನೊಂದೆಡೆ, ಸಮಿಶ್ರ ಸರ್ಕಾರದ ಬಗ್ಗೆ ವಿವಿಧ ಸರ್ವೆಗಳ ಬಗ್ಗೆ ಸಿಎಂ ಪ್ರತಿಕ್ರಿಯೆ ನೀಡಿದ್ದು, ಸಮಿಶ್ರ ಸರ್ಕಾರ ಬರತ್ತೆ ಅನ್ನೋ ಸಮೀಕ್ಷೆ ಸತ್ಯ ಇರಬಹುದು. ಆದರೆ, ಸಂಪೂರ್ಣ ನಂಬಲು ಸಾಧ್ಯವಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ