ಬೆಂಗಳೂರು: ಸಂಖ್ಯಾಬಲದ ಕೊರತೆ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಶನಿವಾರ ಸಂಜೆ 4 ಗಂಟೆಗೆ ರಾಜ್ಯ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವ ಅಗ್ನಿಪರೀಕ್ಷೆ ಎದುರಿಸಲಿದೆ.
ಬಹುಮತ ಸಾಬೀತಿಗೆ ರಾಜ್ಯಪಾಲರು 15 ದಿನ ನೀಡಿದ್ದರೂ, ಸುಪ್ರೀಂಕೋರ್ಟ್ ಶುಕ್ರವಾರ ನಡೆದ ವಿಚಾರಣೆಯಲ್ಲಿ ಶನಿವಾರ 4 ಗಂಟೆಗೆ ಬಹುಮತ ಸಾಬೀತಿ ಮಾಡಬೇಕು ಎಂದು ಆದೇಶ ನೀಡಿದ್ದರಿಂದ ಬಿಜೆಪಿಗೆ 'ತುರ್ತು' ಪರಿಸ್ಥಿತಿ ಎದುರಾಗಿದೆ. ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಕಲಾಪ ಆರಂಭಗೊಳ್ಳಲಿದ್ದು, ರಾಜ್ಯಪಾಲರಿಂದ ನಿಯೋಜಿತರಾದ ಹಂಗಾಮಿ ಸ್ಪೀಕರ್ ಕೆ.ಜಿ. ಬೋಪಯ್ಯ ಅವರು ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಸಂಜೆ 4 ಗಂಟೆಗೆ ಸುಪ್ರೀಂಕೋರ್ಟ್ ಸೂಚನೆಯಂತೆ ಬಹಿರಂಗ ಮತದಾನ ನಡೆಯಲಿದೆ.
ಬಿಜೆಪಿ 104 ಶಾಸಕರನ್ನು ಹೊಂದಿದ್ದರೆ, ಪಕ್ಷೇತರರೂ ಸೇರಿ ಕಾಂಗ್ರೆಸ್-ಜೆಡಿಎಸ್ ಕೂಟದ ಬಲ 118 ಆಗಿದೆ. ಬಹುಮತಕ್ಕೆ 111 ಶಾಸಕರ ಬಲ ಬೇಕಾಗಿದ್ದು ಬಿಜೆಪಿ ಗೇಮ್ಪ್ಲಾನ್ ಏನು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಒಂದೊಮ್ಮೆ ಬಿಜೆಪಿ ಬಹುಮತ ಸಾಬೀತಿಗೆ ವಿಫಲವಾದರೆ ಕಾಂಗ್ರೆಸ್-ಜೆಡಿಎಸ್ ಸರಕಾರ ರಚಿಸಲು ಹಾದಿಯಾಗುತ್ತದೆ.
ಬಹುಮತ ಸಾಬೀತಿಗೆ ರಾಜ್ಯಪಾಲರು 15 ದಿನ ನೀಡಿದ್ದರೂ, ಸುಪ್ರೀಂಕೋರ್ಟ್ ಶುಕ್ರವಾರ ನಡೆದ ವಿಚಾರಣೆಯಲ್ಲಿ ಶನಿವಾರ 4 ಗಂಟೆಗೆ ಬಹುಮತ ಸಾಬೀತಿ ಮಾಡಬೇಕು ಎಂದು ಆದೇಶ ನೀಡಿದ್ದರಿಂದ ಬಿಜೆಪಿಗೆ 'ತುರ್ತು' ಪರಿಸ್ಥಿತಿ ಎದುರಾಗಿದೆ. ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಕಲಾಪ ಆರಂಭಗೊಳ್ಳಲಿದ್ದು, ರಾಜ್ಯಪಾಲರಿಂದ ನಿಯೋಜಿತರಾದ ಹಂಗಾಮಿ ಸ್ಪೀಕರ್ ಕೆ.ಜಿ. ಬೋಪಯ್ಯ ಅವರು ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಸಂಜೆ 4 ಗಂಟೆಗೆ ಸುಪ್ರೀಂಕೋರ್ಟ್ ಸೂಚನೆಯಂತೆ ಬಹಿರಂಗ ಮತದಾನ ನಡೆಯಲಿದೆ.
ಬಿಜೆಪಿ 104 ಶಾಸಕರನ್ನು ಹೊಂದಿದ್ದರೆ, ಪಕ್ಷೇತರರೂ ಸೇರಿ ಕಾಂಗ್ರೆಸ್-ಜೆಡಿಎಸ್ ಕೂಟದ ಬಲ 118 ಆಗಿದೆ. ಬಹುಮತಕ್ಕೆ 111 ಶಾಸಕರ ಬಲ ಬೇಕಾಗಿದ್ದು ಬಿಜೆಪಿ ಗೇಮ್ಪ್ಲಾನ್ ಏನು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಒಂದೊಮ್ಮೆ ಬಿಜೆಪಿ ಬಹುಮತ ಸಾಬೀತಿಗೆ ವಿಫಲವಾದರೆ ಕಾಂಗ್ರೆಸ್-ಜೆಡಿಎಸ್ ಸರಕಾರ ರಚಿಸಲು ಹಾದಿಯಾಗುತ್ತದೆ.