ಬೆಂಗಳೂರು: ಬಿಜೆಪಿಗೆ ಸರಕಾರ ರಚನೆಗೆ ಆಹ್ವಾನ ನೀಡಿರುವುದನ್ನು ಮತ್ತು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದನ್ನು ಖಂಡಿಸಿ ರಾಜ್ಯದ ನಾನಾ ಕಡೆ ಜೆಡಿಎಸ್ ಮತ್ತು ಕಾಂಗ್ರೆಸ್ ಪ್ರತಿಭಟನೆ ನಡೆಸಿವೆ.
ವಿಧಾನಸೌಧದ ಬಳಿ ಗಾಂಧಿ ಪ್ರತಿಮೆ ಎದುರು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಎರಡೂ ಪಕ್ಷಗಳವರು ಧರಣಿ ನಡೆಸಿದರು.
ರಾಜ್ಯಪಾಲರ ನಡೆ ಖಂಡಿಸಿ ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು. ಚಾಮರಾಜನಗರದಲ್ಲೂ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.
ಬೆಳಗಾವಿ ಕ್ಲಬ್ ರಸ್ತೆಯ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೂತನ ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.
ರಾಜ್ಯಪಾಲರ ನಡೆಯನ್ನು ಖಂಡಿಸಿ ಮಂಡ್ಯದ ಪಾಂಡವಪುರ ತಾಲೂಕು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸ್ಪಷ್ಟಬಹುಮತ ಇಲ್ಲದ ಬಿಜೆಪಿ ಪಕ್ಷದಕ್ಕೆ ಸರಕಾರ ರಚನೆ ಮಾಡಲು ಅವಕಾಶ ನೀಡಿದ್ದಾರೆ ಎಂದು ರಾಜ್ಯಪಾಲ ವಜೂಭಾಯಿವಾಲ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀರಂಗಪಟ್ಟಣ- ಜೇವರ್ಗಿ ಮುಖ್ಯ ರಸ್ತೆಯಲ್ಲಿ ಹೆದ್ದಾರಿಗೆ ತಡೆ ಮಾಡಿ ಪ್ರತಿಭಟನೆ ನಡೆಸಿದರು. ಮದ್ದೂರು ತಾಲೂಕಿನ ಕೊಪ್ಪದಲ್ಲಿ ಜೆಡಿಎಸ್ನಿಂದ ಪ್ರತಿಭಟನೆ ನಡೆಯಿತು.
ಮಂಡ್ಯದ ಸಂಜಯ ಸರ್ಕಲ್ನಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಪಾಲ ವಜುಭಾಯಿ ವಾಲಾ ಅವರ ಪದಚ್ಯುತಿಗೆ ಆಗ್ರಹಿಸಿ ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದೆ.
ವಿಧಾನಸೌಧದ ಬಳಿ ಗಾಂಧಿ ಪ್ರತಿಮೆ ಎದುರು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಎರಡೂ ಪಕ್ಷಗಳವರು ಧರಣಿ ನಡೆಸಿದರು.
ರಾಜ್ಯಪಾಲರ ನಡೆ ಖಂಡಿಸಿ ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು. ಚಾಮರಾಜನಗರದಲ್ಲೂ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.
ಬೆಳಗಾವಿ ಕ್ಲಬ್ ರಸ್ತೆಯ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೂತನ ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.
ರಾಜ್ಯಪಾಲರ ನಡೆಯನ್ನು ಖಂಡಿಸಿ ಮಂಡ್ಯದ ಪಾಂಡವಪುರ ತಾಲೂಕು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸ್ಪಷ್ಟಬಹುಮತ ಇಲ್ಲದ ಬಿಜೆಪಿ ಪಕ್ಷದಕ್ಕೆ ಸರಕಾರ ರಚನೆ ಮಾಡಲು ಅವಕಾಶ ನೀಡಿದ್ದಾರೆ ಎಂದು ರಾಜ್ಯಪಾಲ ವಜೂಭಾಯಿವಾಲ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀರಂಗಪಟ್ಟಣ- ಜೇವರ್ಗಿ ಮುಖ್ಯ ರಸ್ತೆಯಲ್ಲಿ ಹೆದ್ದಾರಿಗೆ ತಡೆ ಮಾಡಿ ಪ್ರತಿಭಟನೆ ನಡೆಸಿದರು. ಮದ್ದೂರು ತಾಲೂಕಿನ ಕೊಪ್ಪದಲ್ಲಿ ಜೆಡಿಎಸ್ನಿಂದ ಪ್ರತಿಭಟನೆ ನಡೆಯಿತು.
ಮಂಡ್ಯದ ಸಂಜಯ ಸರ್ಕಲ್ನಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಪಾಲ ವಜುಭಾಯಿ ವಾಲಾ ಅವರ ಪದಚ್ಯುತಿಗೆ ಆಗ್ರಹಿಸಿ ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದೆ.