ಆ್ಯಪ್ನಗರ

Balachandra Jarkiholi: ಈಗ ಸಮೀಕ್ಷೆ ಬರಲಿ, ಏಪ್ರಿಲ್‌ 25ರ ಬಳಿಕ ಸ್ಪಷ್ಟ ಚಿತ್ರಣ ಸಿಗುತ್ತೆ: ಬಾಲಚಂದ್ರ ಜಾರಕಿಹೊಳಿ

Balachandra Jarkiholi On Belagavi Politics: ಕರ್ನಾಟಕ ರಾಜಕೀಯದಲ್ಲಿ ಬೆಳಗಾವಿ ಪ್ರಮುಖವಾಗಿದ್ದು, 18 ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆಯ ರಾಜಕೀಯ ಮೂರು ಪಕ್ಷಗಳಿಗೂ ಪ್ರಮುಖವಾಗಿದೆ. ಅದರಲ್ಲೂ ಬಿಜೆಪಿಗೆ ಈ ಜಿಲ್ಲೆ ಸದ್ಯ ಚಿನ್ನದ ಗಣಿಯಾಗಿದೆ. ಆದರೆ, ಬಣ ರಾಜಕೀಯದಿಂದ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಗೊತ್ತಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ಬಾಲಚಂದ್ರ ಜಾರಕಿಹೊಳಿ, ಬಣ ರಾಜಕೀಯ, ಭಿನ್ನಾಭಿಪ್ರಾಯ ಎಲ್ಲಾ ಪಕ್ಷದಲ್ಲಿ ಇರುತ್ತದೆ. ಎಲ್ಲವನ್ನೂ ವರಿಷ್ಠರು ಸರಿ ಮಾಡುತ್ತಾರೆ ಎಂದು ಹೇಳಿದ್ದಾರೆ. ಅದಲ್ಲದೇ, ಸರ್ವೇ ಬಗ್ಗೆ ಮಾತನಾಡಿದ್ದು, ಏಪ್ರಿಲ್‌ 25ರ ಬಳಿಕ ಎಲ್ಲ ಬದಲಾಗಲಿದೆ ಎಂದಿದಾರೆ.

Edited byಅವಿನಾಶ ವಗರನಾಳ | Vijaya Karnataka Web 31 Mar 2023, 2:31 pm

ಹೈಲೈಟ್ಸ್‌:


  • ಈಗ ಸಮೀಕ್ಷೆಗಳು ಬರ್ತಿವೆ, ಏಪ್ರಿಲ್‌ 25ರ ಬಳಿಕ ಸ್ಪಷ್ಟ ಚಿತ್ರಣ ಸಿಗುತ್ತೆ!
  • ಮೀಸಲಾತಿ, ಅಭ್ಯರ್ಥಿಗಳ ಘೋಷಣೆ ಬಳಿಕ ಕ್ಲಿಯರ್‌ ಪಿಕ್ಚರ್‌ ಸಿಗಲಿದೆ ಎಂದ ಬಾಲಚಂದ್ರ ಜಾರಕಿಹೊಳಿ
  • ಭಿನ್ನಾಭಿಪ್ರಾಯವನ್ನು ವರಿಷ್ಠರು ಸರಿ ಮಾಡುತ್ತಾರೆ ಎಂದ ಕೆಎಂಎಫ್‌ ಅಧ್ಯಕ್ಷ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web balachandra jarkiholi
ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ (ಸಂಗ್ರಹ ಚಿತ್ರ)
ಬೆಳಗಾವಿ: ಯಾರು ಜಗಳ ಆಡಬಾರದು ಎಂಬುದು ಎಲ್ಲರ ಇಚ್ಛೆ ಇದೆ. ಎಲ್ಲರನ್ನೂ ಹೇಗಾದ್ರು ಮಾಡಿ ಒಂದು ಮಾಡೋಣ. ಕೋರ್‌ ಕಮಿಟಿ ಸಭೆಯಲ್ಲಿ ರಮೇಶ್‌ ಜಾರಕಿಹೊಳಿ, ಲಕ್ಷ್ಮಣ್‌ ಸವದಿ ಹಾಗೂ ಶಶಿಕಲಾ ಜೊಲ್ಲೆಯವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿ ಅವರು, ಅಥಣಿ ಕ್ಷೇತ್ರದಲ್ಲಿ ಲಕ್ಷ್ಮಣ್‌ ಸವದಿ VS ರಮೇಶ ಜಾರಕಿಹೊಳಿ ಫೈಟ್‌ ವಿಚಾರಕ್ಕೆ ಪ್ರತಿಕ್ರಿಯಿಸಿ, ಎಲ್ಲ ಪಕ್ಷದಲ್ಲಿ ಆಕಾಂಕ್ಷಿಗಳು ಬಹಳ ಜನ ಇದ್ದಾರೆ. ಟಿಕೆಟ್ ಫೈನಲ್ ಆದ ಬಳಿಕ ಅಸಮಾಧಾನ ಸಹಜ. ಹೈಕಮಾಂಡ್ ಏನ್ ನಿರ್ಧಾರ ಕೈಗೊಳ್ಳುತ್ತದೆ ಅದನ್ನು ಎಲ್ಲರೂ ಕೇಳಬೇಕು. ರಮೇಶ್‌ ಜಾರಕಿಹೊಳಿ, ಲಕ್ಷ್ಮಣ್‌ ಸವದಿ ಜೊತೆಗೆ ಹೈಕಮಾಂಡ್ ಮಾತುಕತೆ ನಡೆಸಿರಬೇಕು ಎಂದು ಹೇಳಿದರು.

ಸರ್ವೇ ಆಧಾರದ ಮೇಲೆ 18 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಮಾಡಲಾಗುತ್ತದೆ. ಹೈಕಮಾಂಡ್ ಘೋಷಣೆ ಮಾಡಿದ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರಯತ್ನ ಮಾಡಬೇಕು. ಕೆಲ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್ ಫೈನಲ್ ಮಾಡಲಿದೆ. ಶಾಂತಿ, ಸಮಾಧಾನದಿಂದ ಚುನಾವಣೆ ಆಗಬೇಕು ಎನ್ನುವ ಭಯಕೆ ನಮ್ಮದು. ಬಣ ರಾಜಕೀಯ, ಭಿನ್ನಾಭಿಪ್ರಾಯ ಎಲ್ಲಾ ಪಕ್ಷದಲ್ಲಿ ಇರುತ್ತದೆ. ಎಲ್ಲವನ್ನೂ ವರಿಷ್ಠರು ಸರಿ ಮಾಡುತ್ತಾರೆ ಎಂದರು.

Pralhad Joshi: ರಮೇಶ್‌ ಜಾರಕಿಹೊಳಿ, ಲಕ್ಷ್ಮಣ್‌ ಸವದಿಗೆ ಬಹಿರಂಗವಾಗಿ ಮಾತಾಡದಂತೆ ಸೂಚನೆ ಕೊಟ್ಟಿದ್ದೇವೆ: ಪ್ರಹ್ಲಾದ್‌ ಜೋಶಿ
ಮಾಧ್ಯಮಗಳಲ್ಲಿ ಬಣ ರಾಜಕೀಯದ ಬಗ್ಗೆ ನೋಡಿದ್ದೇನೆ. ಯಾರು ಯಾರನ್ನು ಸೋಲಿಸಲು ಆಗಲ್ಲ. ಗೆಲ್ಲಿಸಲು ಸಹ ಆಗಲ್ಲ, ಅವರ ಕ್ಷೇತ್ರದಲ್ಲಿ ಅವರು ಗಟ್ಟಿಯಾಗಿ ಇರುತ್ತಾರೆ. ಸೋಲು ಅನ್ನುವುದು ನಮ್ಮ ಕಡೆ ಇಲ್ಲ. ಕ್ಷೇತ್ರದ ಜನರಿಂದಲೇ ಮಾತ್ರ ಸೋಲಿಸಲು, ಗೆಲ್ಲಿಸಲು ಸಾಧ್ಯ. ಹೊರಗಿನವರು ಬಂದು ಸೋಲಿಸಲು ಆಗಲ್ಲ. ಪಕ್ಷದ ಹಿತದೃಷ್ಟಿಯಿಂದ ಪ್ರತಿಷ್ಠೆ ಆಗಬಾರದು ಎಂದು ಹೇಳಿದರು.

BS Yediyurappa: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆ ಸುಳಿವು ನೀಡಿದ ಬಿಎಸ್‌ ಯಡಿಯೂರಪ್ಪ
ಕೋರ್ ಕಮಿಟಿ ಸಭೆಯಲ್ಲಿ ಜಿಲ್ಲೆಯಲ್ಲಿನ ಗೊಂದಲ ಇತ್ಯರ್ಥ ಮಾಡಲು ಯತ್ನ ಮಾಡಲಾಗುವುದು. ಇನ್ನೊಂದು ಸಲ ಲಕ್ಷ್ಮಣ್‌ ಸವದಿ, ರಮೇಶ್‌ ಜಾರಕಿಹೊಳಿ ಹಾಗೂ ಶಶಿಕಲಾ ಜೊಲ್ಲೆಗೆ ಬೆಂಗಳೂರಿನಲ್ಲಿ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಮನವಿ ಮಾಡುತ್ತೇನೆ. ಚುನಾವಣೆಗೆ ಇನ್ನೂ 40 ದಿನ ಮಾತ್ರ ಉಳಿದಿದೆ. ಎಲ್ಲಾ ಭಿನ್ನಾಭಿಪ್ರಾಯ ಮರೆತು ಕೆಲಸ ಮಾಡಬೇಕು. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನ ಮಾಡಬೇಕು. ಯಾರು ಜಗಳ ಆಡಬಾರದು ಎಂಬುದು ಎಲ್ಲರ ಇಚ್ಛೆ ಇದೆ. ಮೂರ್ನಾಲ್ಕು ಜನ ನಾಯಕರಿಗೆ ನಾವು ಮನವಿ ಮಾಡುತ್ತೇವೆ‌. ಎಲ್ಲರನ್ನೂ ಹೇಗಾದ್ರು ಮಾಡಿ ಒಂದು ಮಾಡೋಣ ಎಂದು ತಿಳಿಸಿದರು.

ಚುನಾವಣೆಯಲ್ಲಿ ಕುಣಿಯುತ್ತಿದೆ ಕುರುಡು ಕಾಂಚಾಣ: ಇತ್ತೀಚಿನ ದಿನಗಳಲ್ಲಿ ಚುನಾವಣೆ ನಡೆಸುವುದೇ ಕಷ್ಟ ಎಂದ ಜಗದೀಶ್ ಶೆಟ್ಟರ್
ಮೀಸಲಾತಿ, ಅಭ್ಯರ್ಥಿಗಳ ಘೋಷಣೆ ಬಳಿಕ ಕ್ಲಿಯರ್‌ ಪಿಕ್ಚರ್‌!
ಶಾಸಕ ಎನ್ ವೈ ಗೋಪಾಲಕೃಷ್ಣ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್‌ನಿಂದ ಬಂದಿದ್ದರು ವಾಪಸ್ ಹೋಗಿದ್ದಾರೆ. ಇನ್ನೂ ಯಾರು ಪಕ್ಷ ಬಿಟ್ಟು ಹೋಗಲ್ಲ. ಗೆಲ್ಲುವ ಪಕ್ಷ ಬಿಟ್ಟು ಹೋಗಲು ಯಾರು ಇಚ್ಛೆ ಪಡುತ್ತಾರೆ. ಎಷ್ಟು ಸ್ಥಾನ ಬರ್ತಾವೇ ಅಂತ ನಾನು ಶಾಸ್ತ್ರ ಹೇಳಲಾ? ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರ್ತೇವೆ. ಕೆಲ ಸರ್ವೇಗಳು ಬರುತ್ತಿವೆ. ಈಗ ಮೀಸಲಾತಿ, ಅಭ್ಯರ್ಥಿಗಳ ಘೋಷಣೆ ಬಳಿಕ ಕ್ಲಿಯರ್ ಪಿಚ್ಚರ್ ಸಿಗಲಿದೆ. ಏಪ್ರಿಲ್ 25ರಂದು ಎಲ್ಲಾ ಸ್ಪಷ್ಟವಾಗಲಿದೆ. ಬಿಜೆಪಿ ರಾಜ್ಯದಲ್ಲಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳಿದರು.


13 ಕ್ಷೇತ್ರಗಳನ್ನು ಉಳಿಸಿಕೊಳ್ಳುತ್ತೇವೆ!
ಬಿಎಸ್‌ ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡುವ ಪ್ರಶ್ನೆಯೇ ಇಲ್ಲ. ಕೇಂದ್ರದಲ್ಲಿ ಎರಡು ಸ್ಥಾನ ನೀಡಲಾಗಿದೆ. ಕಳೆದ ಚುನಾವಣೆಯಲ್ಲಿ 10 ಕ್ಷೇತ್ರದಲ್ಲಿ ಬಿಜೆಪಿ, 8 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಆಪರೇಷನ್ ಕಮಲ ಮೂಲಕ ಮೂರು ಜನ ಶಾಸಕರು ಬಿಜೆಪಿ ಬಂದಿದ್ದಾರೆ. ಈ ಚುನಾವಣೆಯಲ್ಲಿ 13 ಸ್ಥಾನ ಉಳಿಸಿಕೊಳ್ಳುವ ಯತ್ನ ನಡೆದಿದೆ. ಕ್ಷೇತ್ರವಾರು ಮತದಾನ ಮಾಡಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಒಳ್ಳೆಯ ವ್ಯವಸ್ಥೆ ಇದು ಎಂದು ನಾವು ಭಾವಿಸಿದ್ದೇನೆ. ಕ್ಷೇತ್ರದಲ್ಲಿ ಇರುವ ಭಿನ್ನಾಭಿಪ್ರಾಯ ಗೊತ್ತಾಗಲಿದೆ ಎಂದು ತಿಳಿಸಿದರು.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ