ಆ್ಯಪ್ನಗರ

ಬಿರಿಯಾನಿ ಕೊಟ್ಟು ಜನರನ್ನು ಬಳಸಿಕೊಳ್ಳುವ ಜಮೀರ್ ಅಹ್ಮದ್ ಎಂದ HDK

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಜಮೀರ್ ಅಹ್ಮದ್ ಖಾನ್ ಆಕ್ಷೇಪಾರ್ಹ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

Vijaya Karnataka Web 30 Apr 2018, 3:31 pm
ಚಿಕ್ಕಮಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಜಮೀರ್ ಅಹ್ಮದ್ ಖಾನ್ ಆಕ್ಷೇಪಾರ್ಹ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
Vijaya Karnataka Web hdk


ಜಿಲ್ಲೆಯ ಕೊಪ್ಪದಲ್ಲಿ ಮಾತನಾಡಿದ ಅವರು, 'ಬಿರಿಯಾನಿ ಹಾಗೂ ಹಣ ಕೊಟ್ಟು ಜನರನ್ನು ಬಳಸಿಕೊಳ್ಳುವ ಜಮೀರ್ ಅಹ್ಮದ್ ಖಾನ್ ಅವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಇಂಥ ವ್ಯಕ್ತಿಗಳ ಬಾಯಿಯಿಂದ ಬರುವುದೇ ಕೇಳು ಮಟ್ಟದ ಭಾಷೆಯೇ ಹೊರತು, ಒಳ್ಳೆಯ ಭಾಷೆ ನಿರೀಕ್ಷಿಸಲು ಸಾಧ್ಯವಿಲ್ಲ. ಇನ್ನು 10 ದಿನ ಮಾತನಾಡಿಕೊಳ್ಳುತ್ತಾರೆ ಅಷ್ಟೇ. ಖುಷಿಯಾಗಿ ಮಾತನಾಡಿಕೊಳ್ಳಲಿ ಬಿಡಿ' ಎಂದು ಹೇಳಿದರು.

ಸಿಎಂ ಹೇಳಿಕೆ ಒಂಭತನೇ ಅದ್ಭುತ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಎಚ್.ಡಿ.ಕುಮಾರಸ್ವಾಮಿ ಮಾತುಕತೆ ಬಗ್ಗೆ ಪ್ರತಿಕ್ರಿಯೆ ನೀಡಿದರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಒಂಭತನೇ ಅದ್ಭುತ ಎಂದು ಛೇಡಿಸಿದ್ದಾರೆ.

ಚುನಾವಣಾ ಸೋಲಿನ ಭೀತಿಗೊಳಗಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಚಳಿ ಜ್ವರ ಶುರುವಾಗಿದೆ. ಜೆಡಿಎಸ್ ಬಗ್ಗೆ ಮಾತನಾಡಲು ಮುಖ್ಯಮಂತ್ರಿಗಳ ಬಳಿ ಯಾವುದೇ ವಿಷಯವಿಲ್ಲ. ಅಮಿತ್ ಶಾ ಅವರನ್ನು ಕಟ್ಟಿಕೊಂಡು ನಮಗೇನು ಆಗಬೇಕಿದೆ. ಸಿದ್ದರಾಮಯ್ಯ ಹೇಳಿಕೆ ನೀಡಿದ ಸಂದರ್ಭದಲ್ಲಿ ಮಹಾಲಕ್ಷ್ಮೀ ಲೇಔಟ್‌ನಲ್ಲಿ ಪ್ರಚಾರ ಮಾಡುತ್ತಿದ್ದೆ. ಇಂಥ ಸಂದರ್ಭದಲ್ಲಿ ಶಾ ಜೊತೆ ವಿಶೇಷ ವಿಮಾನದಲ್ಲಿ ದಿಲ್ಲಿಗೆ ಹೋಗಿ ವಾಪಸ್ ಬರಲು ಹೇಗೆ ಸಾಧ್ಯ? ಇದು ಕಪೋಲ ಕಲ್ಪಿತ ಸುದ್ದಿ ಎಂದು ಕುಮಾರಸ್ವಾಮಿ ಸಮಜಾಯಿಸಿ ನೀಡಿದರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌