ಆ್ಯಪ್ನಗರ

ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್‌

ಧಾರವಾಡ ಪಶ್ಚಿಮ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್‌ ‌ಕಿತ್ತೂರ ನಾಮಪತ್ರ ವಾಪಸ್ ಪಡೆದಿದ್ದಾರೆ.

Vijaya Karnataka Web 27 Apr 2018, 6:15 pm
ಧಾರವಾಡ: ಧಾರವಾಡ ಪಶ್ಚಿಮ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್‌ ‌ಕಿತ್ತೂರ ನಾಮಪತ್ರ ವಾಪಸ್ ಪಡೆದಿದ್ದಾರೆ.
Vijaya Karnataka Web evm

ಈ ಕ್ಷೇತ್ರದಿಂದ ಎರಡು ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.

ಗುರುರಾಜ್ ಹುಣಶಿಮರದ ಅವರ ನಾಮಪತ್ರವನ್ನು ಪರಿಶೀಲನೆ ವೇಳೆ ರದ್ದು ಮಾಡಲಾಗಿತ್ತು. ಅಲ್ತಾಫ ಕಿತ್ತೂರ ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಫಶ್ಚಿಮ ವಿಧಾನಸಭೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಇಲ್ಲ.

ಮಡಿಕೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ನಾಪಂಡ‌ ಮುತ್ತಪ್ಪ ನಾಮ ಪತ್ರ ಹಿಂದಕ್ಕೆ ಪಡೆದಿದ್ದಾರೆ. ಪಕ್ಷದ ‌ಮುಖಂಡರು ಮನವೊಲಿಸಿದ ಹಿನ್ನೆಲೆಯಲ್ಲಿ ಅವರು ಈ ಕ್ರಮಕ್ಕೆ ಮುಂದಾಗಿದ್ದರು.

ಬಾದಾಮಿಯಲ್ಲಿ ಬಿಜೆಪಿ ಬಂಡಾಯ ಶಮನಗೊಂಡಿದೆ.
ಪಕ್ಷಕ್ಕೆ ಬಂಡಾಯದ ಬಿಸಿ ಮುಟ್ಟಿಸಿದ್ದ ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ ನಾಮ ಪತ್ರ ವಾಪಸ್ ಪಡೆದಿದ್ದಾರೆ. ಡಮ್ಮಿ ಅಭ್ಯರ್ಥಿ ಯಾಗಿದ್ದ ಮಹಾಂತೇಶ ಮಮದಾಪುರ ಕೂಡ ನಾಮ ಪತ್ರ ಹಿಂದಕ್ಕೆ ಪಡೆದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ11 ನಾಮಪತ್ರ ವಾಪಸ್ ಪಡೆಯಲಾಗಿದೆ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನೆಲಮಂಗಲದದ ಕಣಕ್ಕಿಳಿದಿದ್ದ ಅಂಜನಮೂರ್ತಿ, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿದ್ದ ಹೊಂಬಯ್ಯ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ.

ಜಮಖಂಡಿಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ನಿಶ್ಚಿತ

ಜಮಖಂಡಿಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ಕಣಕ್ಕಿಳಿಯುವುದು ನಿಶ್ಚಿತ ವಾಗಿದೆ.ಬಿಜೆಪಿ ಬಂಡಾಯ ಹಾಗೂ ಪಕ್ಷೇತರರಾಗಿ ಸಂಗಮೇಶ ನಿರಾಣಿ ನಾಮಪತ್ರ ಸಲ್ಲಿಸಿದ್ದರು‌. ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿಯವರಿಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಅವರು ನಾಮಪತ್ರ ಸಲ್ಲಿಸಿದ್ದರು. ಮುಖಂಡರ ಮನವೊಲಿಕೆ ಯತ್ನಗಳ ಮಧ್ಯೆಯೂ ಕಣದಲ್ಲಿದ್ದಾರೆ. ಸಂಗಮೇಶ ಅವರು ಮಾಜಿ ಶಾಸಕ, ಬೀಳಗಿ ಬಿಜೆಪಿ ಅಭ್ಯರ್ಥಿ ಮುರಗೇಶ ನಿರಾಣಿ ಅವರ ಸಹೋದರ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌