ಆ್ಯಪ್ನಗರ

ಕುಮಾರಸ್ವಾಮಿ ಏನೆಂದು ಜನತೆಗೆ ಗೊತ್ತಿದೆ: ಎಚ್‌ಡಿಕೆ

ಕುಮಾರಸ್ವಾಮಿ ಹೊರಗಿನವರು ಎಂದು ಕ್ಷೇತ್ರದ ತುಂಬೆಲ್ಲ ಸುದ್ದಿ ಹಬ್ಬಿಸಲಾಗುತ್ತಿದೆ. ಆದರೆ ಕುಮಾರಸ್ವಾಮಿ ಎಂದರೆ ಏನು ಎಂದು ಜನತೆಗೆ ಗೊತ್ತಿದೆ. ಹೀಗಾಗಿ ಜನರು ತಮ್ಮನ್ನು ಬೆಂಬಲಿಸುತ್ತಾರೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದ್ದಾರೆ.

Vijaya Karnataka Web 29 Apr 2018, 10:37 pm
ರಾಮನಗರ: ಕುಮಾರಸ್ವಾಮಿ ಹೊರಗಿನವರು ಎಂದು ಕ್ಷೇತ್ರದ ತುಂಬೆಲ್ಲ ಸುದ್ದಿ ಹಬ್ಬಿಸಲಾಗುತ್ತಿದೆ. ಆದರೆ ಕುಮಾರಸ್ವಾಮಿ ಎಂದರೆ ಏನು ಎಂದು ಜನತೆಗೆ ಗೊತ್ತಿದೆ. ಹೀಗಾಗಿ ಜನರು ತಮ್ಮನ್ನು ಬೆಂಬಲಿಸುತ್ತಾರೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದ್ದಾರೆ.
Vijaya Karnataka Web ಎಚ್‌.ಡಿ ಕುಮಾರಸ್ವಾಮಿ


ಚನ್ನಪಟ್ಟಣ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ಬಂದಿದ್ದ ಸಂದರ್ಭ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ರಾಮನಗರ ಜಿಲ್ಲೆಯವನು, ಬಿಡದಿಯ ಕೇತಗಾನಹಳ್ಳಿ ಭೂಮಿ ಹೊಂದಿದ್ದೇನೆ. ಜತೆಗೆ ಮಾಗಡಿ ಕ್ಷೇತ್ರದ ಮತದಾರನಾಗಿದ್ದೇನೆ ಎಂದು ತಿಳಿಸಿದ್ದಾರೆ.

ರಾಮನಗರ ಜಿಲ್ಲೆಯ ಜನತೆ ಕಳೆದ 25 ವರ್ಷದಿಂದ ನನ್ನನ್ನು ಬೆಳೆಸಿದ್ದಾರೆ, ಆದರೆ ಯಾರೋ ಕಿಡಿಗೇಡಿಗಳು ನಾನು ಹೊರಗಿನವನು ಎಂದ್ರೆ ಚನ್ನಪಟ್ಟಣ ಕ್ಷೇತ್ರದ ಮತದಾರರ ಅವರ ಮಾತಿಗೆ ಕಿವಿಕೊಡುವುದಿಲ್ಲ ಎಂದಿದ್ದಾರೆ.

ಎಚ್ಡಿಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ಮಾಡಿದ್ದಾರೆಂಬ ಸಿದ್ದರಾಮಯ್ಯ ಹೇಳಿಕೆಗೆ ಕೆಂಡಾಮಂಡಲವಾದ ಕುಮಾರಸ್ವಾಮಿ, ನಾನು ಅಮಿತ್ ಶಾ ಭೇಟಿ ಮಾಡಿಲ್ಲ, ಅಂತಹ ಪರಿಸ್ಥಿತಿ ನನಗೆ ಬಂದಿಲ್ಲ. ಆರೋಪ ಮಾಡುವ ಮೊದಲು ಸಿದ್ದರಾಮಯ್ಯ ಬಳಿ ದಾಖಲೆ ಇದ್ದರೆ ಬಿಡುಗಡೆ ಮಾಡಲಿ, ಅವರ ಯೋಗ್ಯತೆಗೆ ಸರಿಯಾಗಿ ಮಾಡನಾಡಲಿ ಎಂದು ಕಿಡಿಕಾರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌