ಆ್ಯಪ್ನಗರ

ರಾಜಕೀಯವಾಗಿ ನನ್ನ ಮುಗಿಸಲು ಶಾ, ಮೋದಿ ಸುಪಾರಿ: ಖರ್ಗೆ ಗಂಭೀರ ಆರೋಪ

ತಮ್ಮನ್ನು ರಾಜಕೀಯವಾಗಿ ಮುಗಿಸಿಬಿಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಬಿಜೆಪಿ ಮುಖಂಡರಿಗೆ ಸುಪಾರಿ ನೀಡಿದ್ದಾರೆ ಎಂದು ಲೋಕಸಭೆಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

Vijaya Karnataka Web 24 Apr 2018, 4:42 pm
ಕಲಬುರಗಿ: ತಮ್ಮನ್ನು ರಾಜಕೀಯವಾಗಿ ಮುಗಿಸಿಬಿಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಬಿಜೆಪಿ ಮುಖಂಡರಿಗೆ ಸುಪಾರಿ ನೀಡಿದ್ದಾರೆ ಎಂದು ಲೋಕಸಭೆಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
Vijaya Karnataka Web Mallikarjuna Kharge


ಅಫಜಲಪುರ ಕಾಂಗ್ರೆಸ್ ಸಮಾವೇಶದಲ್ಲಿ ಈ ಹೇಳಿಕೆ ನೀಡಿರುವ ಅವರು, ಸಂಸತ್ತಿನಲ್ಲಿ ಪ್ರಧಾನಿ ಹೇಳಿಕೆ ಉಲ್ಲೇಖಿಸಿ 'ಖರ್ಗೆಜಿ ಬಹುತ್ ಬಡಾ ಭಾಷಣ ದಿಯಾ ಅಂತ ಪ್ರಧಾನಿ ಮೋದಿ ಹೇಳುತ್ತಾರೆ; ಖರ್ಗೆ ಅವರನ್ನು ಕರ್ನಾಟಕ ಚುನಾವಣೆ ಬಳಿಕ ಮುಗಿಸಿಬಿಡುತ್ತೇವೆ ಎನ್ನುತ್ತಿದ್ದಾರೆ' ಎಂದು ದೂರಿದರು.

'ಪ್ರಧಾನಿ ಮೋದಿ, ಅಮಿತ್ ಶಾ ಕರ್ನಾಟಕದ ಬಿಜೆಪಿಗೆ ಸುಪಾರಿ ಕೊಟ್ಟಿದ್ದಾರೆ; ಆದರೆ ಸುಪಾರಿಗೆಲ್ಲ ನಾನು ಹೆದರಲ್ಲ, ಹಲವು ಚುನಾವಣೆಗಳನ್ನು ಎದುರಿಸಿದ್ದೇನೆ. ನಿಮ್ಮ ಆಶೀರ್ವಾದ, ಜನರ ಶಕ್ತಿ ಮುಂದೆ ದುಡ್ಡಿನ ಶಕ್ತಿ ಕೆಲಸ ಮಾಡುವುದಿಲ್ಲ' ಎಂದು ಖರ್ಗೆ ಸವಾಲು ಹಾಕಿದರು.

ನಾವು ದುಡ್ಡಿಗಾಗಿ ರಾಜಕಾರಣ ಮಾಡುವರಲ್ಲ, ಅಭಿವೃದ್ಧಿಗಾಗಿ ರಾಜಕಾರಣ ಮಾಡುತ್ತೇವೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌