ಆ್ಯಪ್ನಗರ

ನಮ್ಮೂರಿಗೆ ಕಾಲಿಡಬೇಡಿ: ಮೋಟಮ್ಮ ಪುತ್ರಿಗೆ ಗ್ರಾಮಸ್ಥರ ತರಾಟೆ

ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಟಮ್ಮ ಪರವಾಗಿ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಅವರ ಮಗಳನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ನಡೆದಿದೆ.

Vijaya Karnataka Web 28 Apr 2018, 6:47 pm
ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಟಮ್ಮ ಪರವಾಗಿ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಅವರ ಮಗಳನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ನಡೆದಿದೆ.
Vijaya Karnataka Web Motamma new


ಎಂಎಲ್‌ಸಿಯಾಗಿ, ಶಾಸಕಿಯಾಗಿ ನಿಮ್ಮ ತಾಯಿ‌ ನಮಗೆ ಏನು ಮಾಡಿದ್ದಾರೆ ಎಂದು ಗ್ರಾಮಸ್ಥರು ಪ್ರಶ್ನಿಸಿದರು. ಗ್ರಾಮಸ್ಥರ ಪ್ರಶ್ನೆಗೆ ಮೊದಲು ಕಕ್ಕಾಬಿಕ್ಕಿಯಾದ ನಯನ ಮೋಟಮ್ಮ, ಬಳಿಕ ಗ್ರಾಮಸ್ಥರ ಜತೆ ವಾಗ್ವಾದಕ್ಕೆ ನಿಂತರು. ಆಗ ಗ್ರಾಮಸ್ಥರು, ಈ ಗ್ರಾಮಕ್ಕೆ ಕಾಲಿಡಬೇಡಿ ಎಂದು ನಯನ ಮೋಟಮ್ಮ ಅವರಿಗೆ ತಾಕೀತು ಮಾಡಿದರು.


ಅದೇನು ಮಾಡುತ್ತೀರೋ ನೋಡೋಣ ಎಂದು ನಯನ ಮೋಟಮ್ಮ ಗ್ರಾಮಕ್ಕೆ ಪ್ರವೇಶಿಸಿದರು. ಆಗ ಮಾತಿಗೆ ಮಾತು ಬೆಳೆದು ಕಾಂಗ್ರೆಸ್‌ ಕಾರ್ಯಕರ್ತರು ಗ್ರಾಮಸ್ಥರ ಮೇಲೆ ಹಲ್ಲೆಗೆ ಮುಂದಾದರು. ಗ್ರಾಮದ ಒಳಗೆ ಕಾಂಗ್ರೆಸ್ ಪರ ಪ್ರಚಾರಕ್ಕೆ ಬರದಂತೆ ಆವತಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಆವತಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ