ಆ್ಯಪ್ನಗರ

ಫಲಿತಾಂಶ ಹೊರಬಂದ ಮೇಲೆ ನೋಡೋಣ: ದೇವೇಗೌಡ

ಹಾಸನ: ಚುನಾವಣೆಯ ಫಲಿತಾಂಶ ಹೊರ ಬಂದ ಬಳಿಕ ಮುಂದಿನ ವಿಚಾರಗಳ ಬಗ್ಗೆ ಚರ್ಚಿಸುವುದಾಗಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.

Vijaya Karnataka Web 14 May 2018, 3:00 pm
ಹಾಸನ: ಚುನಾವಣೆಯ ಫಲಿತಾಂಶ ಹೊರ ಬಂದ ಬಳಿಕ ಮುಂದಿನ ವಿಚಾರಗಳ ಬಗ್ಗೆ ಚರ್ಚಿಸುವುದಾಗಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.
Vijaya Karnataka Web HDD


ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ದಲಿತ ಸಿಎಂ ಕುರಿತ ವಿಚಾರದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಚುನಾವಣೆಗಳು ಪೂರ್ಣಗೊಂಡಿದೆ. ಏನೇ ನಿರ್ಧಾರ ತೆಗೆದುಕೊಳ್ಳಬೇಕಾದರೂ ಫಲಿತಾಂಶ ಹೊರ ಬರಬೇಕು. ಫಲಿತಾಂಶ ಹೊರ ಬಂದ ಬಳಿಕ ಮುಂದಿನ ವಿಚಾರದ ಬಗ್ಗೆ ನಿರ್ಧಾರ ಕೈಗೊಳ್ಳೋಣ. ಈಗ ಯಾವುದೇ ಆತುರವಿಲ್ಲ ಎಂದು ಅವರು ಹೇಳಿದ್ದಾರೆ.

ದಲಿತ ಸಿಎಂ ಕುರಿತು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ ಈ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ, ಮೊದಲು ಫಲಿತಾಶ ಹೊರಬರಲಿ, ನಂತರ ಇದರ ಬಗ್ಗೆ ಮಾತನಾಡುತ್ತೇನೆ ಎಂದಷ್ಟೇ ತಮ್ಮ ಎಂದಿನ ಶೈಲಿಯಲ್ಲಿ ಉತ್ತರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌