ಆ್ಯಪ್ನಗರ

ಬಹುಮತ ಬರದಿದ್ದರೆ ರಾಜಕೀಯ ನಿವೃತ್ತಿ ಎಂದಿದ್ದ ಎಚ್‌ಡಿಕೆ: ವಿಕ ವರದಿ ಆಗ್ತಿದೆ ವೈರಲ್‌...

ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಅವರು ಚುನಾವಣೆಗೆ ಮುನ್ನ ನೀಡಿದ ಈ ಹೇಳಿಕೆಯ ವಿಕ ವರದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

Vijaya Karnataka Web 16 May 2018, 3:16 pm
ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಅವರು ಚುನಾವಣೆಗೆ ಮುನ್ನ ನೀಡಿದ ಈ ಹೇಳಿಕೆಯ ವಿಜಯ ಕರ್ನಾಟಕ ವರದಿ ಈಗ ವಾಟ್ಸ್‌ ಆ್ಯಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.
Vijaya Karnataka Web ಎಚ್‌.ಡಿ ಕುಮಾರಸ್ವಾಮಿ


ಜೆಡಿಎಸ್‌ ಪಕ್ಷಕ್ಕೆ ಸ್ಪಷ್ಟ ಬಹುಮತ ಬರದಿದ್ದರೆ ರಾಜಕೀಯ ನಿವೃತ್ತಿ ಪಡೆದುಕೊಳ್ಳುತ್ತೇನೆಯೇ ಹೊರತು ಯಾರೊಂದಿಗೂ ಮೈತ್ರಿ ಇಲ್ಲ ಎಂದು ಎಚ್‌ಡಿಕೆ ಚಿಕ್ಕಬಳ್ಳಾಪುರದಲ್ಲಿ ಹೇಳಿಕೆ ನೀಡಿದ್ದರು.


ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಇದೀಗ, 38 ಸ್ಥಾನಗಳನ್ನು ಪಡೆದಿರುವ ಜೆಡಿಎಸ್‌, 78 ಸ್ಥಾನಗಳನ್ನು ಪಡೆದ ಕಾಂಗ್ರೆಸ್ ಬೆಂಬಲದೊಂದಿಗೆ ಸರಕಾರ ರಚಿಸುವ ಪ್ರಯತ್ನದಲ್ಲಿದೆ. ಈ ಹಿನ್ನೆಲೆಯಲ್ಲಿ ಎಚ್‌ಡಿಕೆ ಹೇಳಿಕೆ ಕುರಿತ ವಿಕ ವರದಿಗೆ ಇಮೋಜಿಗಳನ್ನು ಸೇರಿಸಿದ ಚಿತ್ರಗಳು ವೈರಲ್‌ ಆಗುತ್ತಿವೆ.

ಕನ್ನಡದ ಖಾಸಗಿ ಸುದ್ದಿ ವಾಹಿನಿಯೊಂದರ ಕಾರ್ಯಕ್ರಮದಲ್ಲೂ ಎಚ್‌ಡಿಕೆ ಇದೇ ಮಾತು ಹೇಳಿದ್ದರು. ಕಾಂಗ್ರೆಸ್‌ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ; ಜೆಡಿಎಸ್ ಸ್ವಂತ ಬಲದಿಂದಲೇ ಸರಕಾರ ರಚಿಸುತ್ತದೆ. ಒಂದೊಮ್ಮೆ ಅತಂತ್ರ ಪರಿಸ್ಥಿತಿ ಎದುರಾದರೆ ಮತ್ತೊಮ್ಮೆ ಜನರ ಮುಂದೆ ಚುನಾವಣೆಗೆ ಹೋಗುತ್ತೇನೆಯೇ ಹೊರತು ಮೈತ್ರಿ ಇಲ್ಲ ಎಂದು ಎಚ್‌ಡಿ ಕುಮಾರಸ್ವಾಮಿ ಪ್ರತಿಪಾದಿಸಿದ್ದರು. ಕಾರ್ಯಕ್ರಮ ನಿರ್ವಾಹಕರು, ಕಾಂಗ್ರೆಸ್‌ನವರೇ ಬೆಂಬಲ ಕೊಡುವುದಾಗಿ ಮುಂದೆ ಬಂದರೆ ಆಗ ಏನು ಮಾಡುವಿರಿ ಎಂಬ ನಿರ್ದಿಷ್ಟ ಪ್ರಶ್ನೆ ಕೇಳಿದ್ದರು. ಆಗಲೂ ಕುಮಾರಸ್ವಾಮಿ ಇದೇ ಉತ್ತರ ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ