ಆ್ಯಪ್ನಗರ

ಬಿಎಸ್‌ವೈಗೆ ನಿಮ್ಮ ಬಗ್ಗೆ ಸಾಫ್ಟ್‌ ಕಾರ್ನರ್‌: ಮಹತ್ವ ನೀಡಬೇಕಿಲ್ಲ ಎಂದ ಸಿದ್ದು

ಯಡಿಯೂರಪ್ಪನವರಿಗೆ ಸಿದ್ದರಾಮಯ್ಯ ಮೇಲೆ ಸಾಫ್ಟ್ ಕಾರ್ನರ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಅವರು ರಾಜಕೀಯವಾಗಿ ಮಾತನಾಡಿದ್ದಾರೆ. ಅದೆಲ್ಲಾ ಮಾಮೂಲು, ಅದಕ್ಕೆ ಮಹತ್ವ ಕೊಡುವುದು ಬೇಡ ಎಂದು ಹೇಳಿದರು.

Vijaya Karnataka Web 24 May 2018, 2:25 pm
ಬೆಂಗಳೂರು: ಯಡಿಯೂರಪ್ಪನವರಿಗೆ ಸಿದ್ದರಾಮಯ್ಯ ಮೇಲೆ ಸಾಫ್ಟ್ ಕಾರ್ನರ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಅವರು ರಾಜಕೀಯವಾಗಿ ಮಾತನಾಡಿದ್ದಾರೆ. ಅದೆಲ್ಲಾ ಮಾಮೂಲು, ಅದಕ್ಕೆ ಮಹತ್ವ ಕೊಡುವುದು ಬೇಡ ಎಂದು ಹೇಳಿದರು.
Vijaya Karnataka Web 7 - Copy


ಸುರೇಶ್‌ ಕುಮಾರ್‌ ಅವರು ಸ್ಪೀಕರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ವೇಳೆ ಬಿಜೆಪಿಯ ಬಳಿ ಸಂಖ್ಯಾಬಲವಿದೆ ಎಂದು ಹೇಳಿರುವುದಕ್ಕೆ ಪ್ರತ್ಯುತ್ತರ ನೀಡಿದ ಸಿದ್ದರಾಮಯ್ಯ, ಯಡಿಯೂರಪ್ಪನವರು ಬಹುಮತ ಸಾಬೀತು ಮಾಡಲಾಗದೆ ರಾಜೀನಾಮೆ ನೀಡಿದ್ದಾರೆ. ಇವರ ಬಳಿ ಏನೂ ಇಲ್ಲ ಎಂದರು.

ರಮೇಶ್‌ ಕುಮಾರ್‌ ಒಮ್ಮತದ ಅಭ್ಯರ್ಥಿ, ಇವರ ಗೆಲುವು ಖಚಿತ. ಬಿಜೆಪಿಯವರು ನಾಮಪತ್ರ ವಾಪಸ್ ಪಡೆಯುತ್ತಾರೆ ಎಂದುಕೊಂಡಿದ್ದೇವೆ. ರಮೇಶ್‌ಕುಮಾರ್‌ಗೆ ಸಭಾಧ್ಯಕ್ಷರಾಗಿ ಅನುಭವ ಇದೆ. ಕಾನೂನು ಜ್ಞಾನವಿದೆ. ಐದು ವರ್ಷ ಸಮ್ಮಿಶ್ರ ಸರಕಾರನ್ನು ಚೆನ್ನಾಗಿ ನಡೆಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ