ಆ್ಯಪ್ನಗರ

ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಬಿಕ್ಕಟ್ಟು: 50:50 ಅಧಿಕಾರ ಹಂಚಿಕೆಗೆ ಶಿವಸೇನೆ ಪಟ್ಟು

ಮಹಾರಾಷ್ಟ್ರದಲ್ಲಿ ಚುನಾವಣೆ ಫಲಿತಾಂಶ ಹೊರಬಂದು ಬಿಜೆಪಿ, ಶಿವಸೇನೆ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ದೊರಕಿದ್ದರೂ ಸರಕಾರ ರಚನೆ ಬಿಕ್ಕಟ್ಟು ಮುಂದುವರಿದಿದೆ.

Vijaya Karnataka Web 28 Oct 2019, 6:43 pm
ಮುಂಬಯಿ: ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಶಿವಸೇನಾ ಮೈತ್ರಿಕೂಟ ಬಹುಮತ ಪಡೆದಿದ್ದರೂ ಸಹ ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಎರಡೂ ಪಕ್ಷಗಳಲ್ಲಿ ಅಸಮಾಧಾನವಿದ್ದು, ಬಿಗಿಪಟ್ಟು ಮುಂದುವರಿಸಿವೆ.
Vijaya Karnataka Web ಬಿಜೆಪಿ ಶಿವಸೇನಾ
ಬಿಜೆಪಿ ಶಿವಸೇನಾ


50:50 ಅಧಿಕಾರ ಹಂಚಿಕೆ ಸೂತ್ರ ರೂಪಿಸಬೇಕೆಂದು ಶಿವಸೇನೆ ಪಟ್ಟು ಮುಂದುವರಿಸಿದೆ.

ಈ ಮಧ್ಯೆ ಮೂವರು ಪಕ್ಷೇತರ ಶಾಸಕರ ಬೆಂಬಲ ಹೊಂದಿರುವುದಾಗಿ ಬಿಜೆಪಿ ತಿಳಿಸಿದೆ. ಚುನಾವಣೆಯಲ್ಲಿ ಜಯಗಳಿಸಿರುವ ಬಿಜೆಪಿಯ ಬಂಡಾಯ ಅಭ್ಯರ್ಥಿಗಳಾದ ಗೀತಾ ಜೈನ್ ಮತ್ತು ರಾಜೇಂದ್ರ ರಾವತ್ ಪಕ್ಷೇತರ ಶಾಸಕ ರವಿರಾಣಾ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮತ್ತೊಂದೆಡೆ ವಿದರ್ಭ ಭಾಗದಿಂದ ಚುನಾಯಿತರಾಗಿರುವ ಬಚ್ಚುಕಾಡು ಮತ್ತು ರಾಜಕುಮಾರ್ ಪಟೇಲ್ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿದ ಬಳಿಕ ಶಿವಸೇನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮುಂಬೈನಲ್ಲಿ ಈ ತಿಂಗಳ 30 ರಂದು ಬಿಜೆಪಿ ಅಧ್ಯಕ್ಷ ಅಮಿತ್ ಷಾ ಮತ್ತು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ನಡುವೆ ನಿರ್ಣಾಯಕ ಸಭೆ ನಡೆದ ಬಳಿಕವಷ್ಟೇ ಅಧಿಕಾರ ಹಂಚಿಕೆಯ ಚಿತ್ರಣ ಸ್ಪಷ್ಟವಾಗುವ ಸಾಧ್ಯತೆಯಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌