ಆ್ಯಪ್ನಗರ

ಜೆಡಿಎಸ್‌ನ 37 ಶಾಸಕರು ಒಟ್ಟಾಗಿರಿ, ಆಪರೇಷನ್‌ ಕಮಲಕ್ಕೆ ಒಳಗಾಗದಿರಿ: ದೇವೇಗೌಡ

ತುಮಕೂರಿನ ಶಾಸಕರು ಹಾಗೂ ಮುಖಂಡರು ಮತ್ತು ಕಾರ್ಯಕರ್ತರು ಇನ್ನೂ ಸ್ವಲ್ಪ ಶ್ರಮವಹಿಸಿ ಕೆಲಸ ಮಾಡಿದ್ದರೆ ಗೆಲ್ಲಬಹುದಾಗಿತ್ತು. ಸೋತಿರುವುದಕ್ಕೆ ಪಶ್ಚಾತ್ತಾಪ ಬೇಡ. ಕಾರ್ಯಕರ್ತರು ಧೃತಿಗೆಡದೇ ಪಕ್ಷ ಸಂಘಟಿಸಿ

Vijaya Karnataka Web 24 May 2019, 8:54 pm
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಭಾರಿ ಸೋಲು ಉಂಟಾಗಿದ್ದರೂ ಕಾರ್ಯಕರ್ತರು ಯಾರೂ ಧೃತಿಗೆಡಬಾರದು. ಎಲ್ಲ 37 ಶಾಸಕರು ಒಟ್ಟಾಗಿರಬೇಕು. ಯಾವುದೇ ಕಾರಣಕ್ಕೂ ಆಪರೇಷನ್‌ ಕಮಲಕ್ಕೆ ಒಳಗಾಗಬಾರದು ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌ಡಿ ದೇವೇಗೌಡ ಮನವಿ ಮಾಡಿದ್ದಾರೆ.
Vijaya Karnataka Web ದೇವೇಗೌಡ
ದೇವೇಗೌಡ


ಜೆಡಿಎಸ್‌ ಶಾಸಕಾಂಗ ಸಭೆಗೆ ಹಾಜರಾಗಿದ್ದ ದೇವೇಗೌಡ, ಕಾರ್ಯಕರ್ತರನ್ನು ಹುರಿದುಂಬಿಸಿದರು.

ತುಮಕೂರಿನ ಶಾಸಕರು ಹಾಗೂ ಮುಖಂಡರು ಮತ್ತು ಕಾರ್ಯಕರ್ತರು ಇನ್ನೂ ಸ್ವಲ್ಪ ಶ್ರಮವಹಿಸಿ ಕೆಲಸ ಮಾಡಿದ್ದರೆ ಗೆಲ್ಲಬಹುದಾಗಿತ್ತು. ಸೋತಿರುವುದಕ್ಕೆ ಪಶ್ಚಾತ್ತಾಪ ಬೇಡ.
ಕಾರ್ಯಕರ್ತರು ಧೃತಿಗೆಡದೇ ಪಕ್ಷ ಸಂಘಟಿಸಿ ಎಂದು ಹೇಳಿದರು.

ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಯಾವುದೇ ಕಾರಣಕ್ಕೂ ಮೈತ್ರಿ ಸರ್ಕಾರ ಪತನವಾಗುವುದಿಲ್ಲ. ಸಿಎಂ ಕುಮಾರಸ್ವಾಮಿ ಮುಂದುವರಿಯಲಿದ್ದಾರೆ. ಯಾವುದೇ ಆತಂಕ ಬೇಡ ಎಂದು ದೇವೇಗೌಡರು ಧೈರ್ಯ ತುಂಬಿದರು.

ನಂತರ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮಾತನಾಡಿದರು.

ಬಹುತೇಕ ಶಾಸಕರು ಅಧಿಕಾರಿಗಳ ವರ್ಗಾವಣೆ ಹಾಗೂ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈತ್ರಿ ಸರಕಾರ ಎಲ್ಲ ಶಾಸಕರ ಕೆಲಸಗಳನ್ನು ಆದ್ಯತೆಯ ಮೇರೆಗೆ ಮಾಡಿಕೊಡಲಿದೆ ಎಂದು ಭರವಸೆ ನೀಡಿದರು.

ಹಿರಿಯ ಸಚಿವ ಜಿ ಟಿ ದೇವೇಗೌಡರು ಅನೌಪಚಾರಿಕ ಸಂಪುಟ ಸಭೆಯಲ್ಲಿ ನಡೆದ ವಿಷಯಗಳನ್ನು ವಿವರಿಸಿದರು.

ಸುಮಾರು 3 ಗಂಟೆಗಳ ಕಾಲ ಪಕ್ಷದ ಸಂಘಟನೆ ಹಾಗೂ ಮೈತ್ರಿ ಸರಕಾರ ಆಡಳಿತದ ಬಗ್ಗೆ ಹಾಗೂ ಜನಪರ ಕಾರ್ಯಗಳ ಬಗ್ಗೆ ಚರ್ಚೆ ಮಾಡಿದ್ದಾಗಿ ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ