ಆ್ಯಪ್ನಗರ

ಇಂದು ರಾತ್ರಿ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಲಿರುವ ಚಂದ್ರಬಾಬು ನಾಯ್ಡು

ದಿಢೀರ್ ಬೆಳವಣಿಗೆಯಲ್ಲಿ ಚಂದ್ರಬಾಬು ನಾಯ್ಡು ಅವರು ದೇವೇಗೌಡರನ್ನು ಭೇಟಿ ಮಾಡಲು ಇಂದು ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮೇ 23ರಂದು ಲೋಕಸಭೆ ಚುನಾವಣೆ ಫಲಿತಾಂಶ ಹಿನ್ನೆಲೆ ಮಹತ್ವದ ಚರ್ಚೆ ನಡೆಸಲಿದ್ದಾರೆ.

Vijaya Karnataka Web 21 May 2019, 7:18 pm
ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಹತ್ವದ ಬೆಳವಣಿಗೆಯೊಂದರಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮಂಗಳವಾರ ರಾತ್ರಿ (ಮೇ 21,2019) ಬೆಂಗಳೂರಿನಲ್ಲಿ ದೇವೇಗೌಡರನ್ನು ಭೇಟಿ ಮಾಡಲಿದ್ದಾರೆ.
Vijaya Karnataka Web chandrababu naidu devegowda


ಲೋಕಸಭೆ ಚುನಾವಣೆ ಫಲಿತಾಂಶ ಹತ್ತಿರವಿರುವುದರಿಂದ ಚಂದ್ರಬಾಬು ನಾಯ್ಡು ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಇಂದು ಮಧ್ಯಾಹ್ನ ಸಮಾನ ಮನಸ್ಕರಿಗೆ ಭೋಜನ ಕೂಟ ಏರ್ಪಡಿಸಿದ್ದರು. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹ ಈ ಭೋಜನ ಕೂಟದಲ್ಲಿ ಭಾಗವಹಿಸಬೇಕಾಗಿತ್ತು. ಆದರೆ, ಅಂತಿಮ ಕ್ಷಣದಲ್ಲಿ ಕುಮಾರಸ್ವಾಮಿ ದಿಲ್ಲಿ ಪ್ರವಾಸ ರದ್ದು ಮಾಡಿದ್ದರು.

ಬಳಿಕ, ದಿಢೀರ್ ಬೆಳವಣಿಗೆಯಲ್ಲಿ ಚಂದ್ರಬಾಬು ನಾಯ್ಡು ಅವರು ದೇವೇಗೌಡರನ್ನು ಭೇಟಿ ಮಾಡಲು ಇಂದು ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮೇ 23ರಂದು ಲೋಕಸಭೆ ಚುನಾವಣೆ ಫಲಿತಾಂಶ ಹಿನ್ನೆಲೆ ಹಾಗೂ ಎಕ್ಸಿಟ್‌ ಪೋಲ್‌ನಲ್ಲಿ ಹೊರಹೊಮ್ಮಿರುವ ಫಲಿತಾಂಶದ ಹಿನ್ನೆಲೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ