ಆ್ಯಪ್ನಗರ

ಲಿಂಗಾಯತರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ: ಕಾಂಗ್ರೆಸ್ ಮುಖಂಡನ ವಿರುದ್ಧ ಆಕ್ರೋಶ

ದಾವಣಗೆರೆ ತಾಲೂಕಿನ ನೇರ್ಲಗಿ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಲಿಂಗಾಯತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ನಡೆದಿದೆ. ಈ ಹಿನ್ನೆಲೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಹಲವರು ರಾಮಪ್ಪ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Vijaya Karnataka Web 24 Apr 2019, 2:59 pm
ದಾವಣಗೆರೆ: ಲಿಂಗಾಯತರಿಗೆ ಕಾಂಗ್ರೆಸ್ ಮುಖಂಡರೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾಗಿದ್ದ ವೈ.ರಾಮಪ್ಪ ಲಿಂಗಾಯತರಿಗೆ ಬೈದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
Vijaya Karnataka Web congress flag


ದಾವಣಗೆರೆ ತಾಲೂಕಿನ ನೇರ್ಲಗಿ ಗ್ರಾಮದಲ್ಲಿ ಮಂಗಳವಾರ ( ಏಪ್ರಿಲ್ 23,2019) ಈ ಘಟನೆ ನಡೆದಿದೆ. ಈ ಗ್ರಾಮದ ಲಿಂಗಾಯತ ಮುಖಂಡರ ಮುಂದೆ ಬಹಿರಂಗವಾಗಿ ರಾಮಪ್ಪ ಬೈದಾಡಿದ್ದಾರೆ.

ಜಿಲ್ಲೆಯಲ್ಲಿ ಎಲ್ಲ ಕಡೆ ನೀವೇ ಅಧಿಕಾರ ಮಾಡಬೇಕಾ? ನಿಮಗೆ ಈಶ್ವರ ಬಂದು ಲಿಂಗ ಕಟ್ಟಿದ್ದಾನಾ?. ಈ ಬಾರಿ ಹಿಂದುಳಿದವರಿಗೆ ಅಧಿಕಾರ ಕೊಡಿ ಎಂದು ರಾಮಪ್ಪ ಅವಾಜ್ ಹಾಕಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಎಚ್ ಬಿ ಮಂಜಪ್ಪ ಪರ ಮತಹಾಕಿಸುವ ವೇಳೆ ಈ ವರ್ತನೆ ತೋರಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು, ಲಿಂಗಾಯತರನ್ನ ರಾಮಪ್ಪ ಹೀನಾಯವಾಗಿ ಬೈದಾಡಿರುವ ವೀಡಿಯೋ ವೈರಲ್‌ ಆಗಿದ್ದು, ಕಾಂಗ್ರೆಸ್ ಮುಖಂಡ ರಾಮಪ್ಪ ವಿರುದ್ಧ ಲಿಂಗಾಯತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಹಲವರು ರಾಮಪ್ಪ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಫೇಸ್‌ಬುಕ್‌ನಲ್ಲಿ ರಾಮಪ್ಪ ವಿರುದ್ಧ ಅಕ್ರೋಶ


ದೇಶಾದ್ಯಂತ ಲೋಕಸಭೆ ಚುನಾವಣೆಯ ಕಾವೇರಿದ್ದು, ಮಂಗಳವಾರ ( ಏಪ್ರಿಲ್ 23,2019) ಕರ್ನಾಟಕದ ಉತ್ತರ ಕರ್ನಾಟಕ ಭಾಗ ಸೇರಿ 14 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಈ ವೇಳೆ ಕಾಂಗ್ರೆಸ್ ಉಖಂಡ ರಾಮಪ್ಪ ಲಿಂಗಾಯತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ