ಆ್ಯಪ್ನಗರ

ಮಂಡ್ಯ: ನಿಖಿಲ್ ಬೆಂಬಲಿಗರ ಮೇಲೆ ಹಲ್ಲೆಗೆ ಯತ್ನ

ಶುಕ್ರವಾರ ರಾತ್ರಿ ನಡೆದ ಪ್ರಚಾರ ಸಭೆಯಲ್ಲಿ ಡಿ ಬಾಸ್ ಡಿ ಬಾಸ್ ಎಂದು ನಟ ದರ್ಶನ್ ಅಭಿಮಾನಿಗಳು ಘೋಷಣೆ ಕೂಗಿದ ಘಟನೆಯೂ ನಡೆಯಿತು.

Vijaya Karnataka Web 22 Mar 2019, 10:24 pm
ಮಂಡ್ಯ: ಕೆ.ಆರ್.ಪೇಟೆ ತಾಲೂಕು ಅಕ್ಕಿಹೆಬ್ಬಾಳು ಬಳಿಯ ಸೋಮನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ರೋಡ್ ಷೋ ವೇಳೆ ನಿಖಿಲ್ ಹಿಂಬಾಲಿಸುತ್ತಿದ್ದ ಕಾರ್ ಮೇಲೆ ಕಲ್ಲು ತೂರಾಟ ನಡೆದಿದೆ.
Vijaya Karnataka Web ಕಾರು ಮೇಲೆ ಕಲ್ಲು ತೂರಾಟ
ಕಾರು ಮೇಲೆ ಕಲ್ಲು ತೂರಾಟ


ಜೆಡಿಎಸ್ ಮುಖಂಡ ಜಗದೀಶ್ ಎಂಬುವರ ಕಾರ್ ಮೇಲೆ ಕಲ್ಲು ತೂರಾಟ ನಡೆದಿದೆ. 10 ಜನರ ತಂಡವು ಕಲ್ಲು ತೂರಿ ಹಲ್ಲೆಗೆ ಯತ್ನಿಸಿದೆ.

ಘಟನೆಯಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಕತ್ತಲಾಗಿದ್ದರಿಂದ ಕಲ್ಲು ತೂರಿದವರು ಯಾರೆಂಬುದು ಸ್ಪಷ್ಟವಾಗಿರಲಿಲ್ಲ. ಆದಾಗ್ಯೂ ಕಲ್ಲುತೂರಾಟ ಆರೋಪದ ಮೇಲೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದರು.

ಆದರೆ, ಸ್ಥಳೀಯರು ಅವರ ಮೇಲಿನ ಆರೋಪವನ್ನು ತಳ್ಳಿ ಹಾಕಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದಿದ್ದ ಇಬ್ಬರನ್ನೂ ಪೊಲೀಸರು ಬಿಟ್ಟು ಕಳುಹಿಸಿದರು.

ಜೆಡಿಎಸ್ ಪ್ರಚಾರ ಸಭೆಯಲ್ಲಿ ನಟ ದರ್ಶನ್ ಪರ ಜೈಕಾರ

ಕೆ.ಆರ್.ಪೇಟೆ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದ ಪ್ರಚಾರ ಸಭೆಯಲ್ಲಿ ಡಿ ಬಾಸ್ ಡಿ ಬಾಸ್ ಎಂದು ನಟ ದರ್ಶನ್ ಅಭಿಮಾನಿಗಳು ಘೋಷಣೆ ಕೂಗಿದ ಘಟನೆಯೂ ನಡೆಯಿತು.

ಈ ಸಂದರ್ಭದಲ್ಲಿ ದರ್ಶನ್ ಅಭಿಮಾನಿಗಳು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಮಧ್ಯ ಪ್ರವೇಶಿಸಿದ ಪೊಲೀಸರು ಎರಡೂ ಕಡೆಯವರನ್ನು ಸಮಾಧಾನಪಡಿಸಿದರು. ಈ ವೇಳೆ ಜೆಡಿಎಸ್ ಕಾರ್ಯಕರ್ತರು ನಿಖಿಲ್ ಕುಮಾರಸ್ವಾಮಿ ಪರ ಘೋಷಣೆ ಕೂಗಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ