ಆ್ಯಪ್ನಗರ

ಬೆಂಗಳೂರು ದಕ್ಷಿಣ: ಮುಗಿಯದ ಬಿಜೆಪಿ ಸಸ್ಪೆನ್ಸ್‌, ತೇಜಸ್ವಿನಿ ಅನಂತಕುಮಾರ್ ನಿವಾಸಕ್ಕೆ ನೂರಾರು ಹಿತೈಷಿಗಳ ದಂಡು

ನೂರಾರು ಹಿತೈಷಿಗಳು ಇಂದು ನಮ್ಮ ಮನೆಗೆ ಆಗಮಿಸಿದ್ದರು. ಅನಂತ ಕುಮಾರ್‌ ಜಿ ಯಾವತ್ತೂ 'ದೇಶ ಮೊದಲು, ಪಕ್ಷ ನಂತರ, ನಾನು ಕೊನೆಗೆ' ಎಂಬ ತತ್ವದಲ್ಲಿ ನಂಬಿಕೆ ಇಟ್ಟಿದ್ದರು. ನಾವೆಲ್ಲರೂ ಅದಕ್ಕೆ ಬದ್ಧರಾಗಿದ್ದು ಪಕ್ಷದ ಕೇಂದ್ರ ನಾಯಕತ್ವದ ನಿರ್ಧಾರಕ್ಕೆ ಬದ್ಧರಾಗಿ ಜತೆಯಾಗಿ ದುಡಿಯೋಣ' ಎಂದು ತೇಜಸ್ವಿನಿ ಅನಂತಕುಮಾರ್ ಹೇಳಿದ್ದಾರೆ.

Vijaya Karnataka Web 25 Mar 2019, 5:28 pm
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಭಾವ್ಯ ಬಿಜೆಪಿ ಅಭ್ಯರ್ಥಿ ತೇಜಸ್ವಿನಿ ಅನಂತ ಕುಮಾರ್‌ ಅವರ ನಿವಾಸಕ್ಕೆ ನೂರಾರು ಬಿಜೆಪಿ ಕಾರ್ಯಕರ್ತರು ಭೇಟಿ ನೀಡಿ ಬೆಂಬಲ ಸೂಚಿಸಿದರು.
Vijaya Karnataka Web Tejaswini Ananth Kumar


ಈ ವಿಷಯವನ್ನು ಸ್ವತಃ ತೇಜಸ್ವಿನಿ ಅನಂತ ಕುಮಾರ್ ಅವರೇ ಈ ಬಗ್ಗೆ ಟ್ವೀಟ್‌ ಮಾಡಿದ್ದು, ನೂರಾರು ಹಿತೈಷಿಗಳು ಶುಭ ಕೋರಿರುವುದನ್ನು ಬಹಿರಂಗಪಡಿಸಿದ್ದಾರೆ.

ನೂರಾರು ಹಿತೈಷಿಗಳು ಇಂದು ನಮ್ಮ ಮನೆಗೆ ಆಗಮಿಸಿದ್ದರು. ಅನಂತ ಕುಮಾರ್‌ ಜಿ ಯಾವತ್ತೂ 'ದೇಶ ಮೊದಲು, ಪಕ್ಷ ನಂತರ, ನಾನು ಕೊನೆಗೆ' ಎಂಬ ತತ್ವದಲ್ಲಿ ನಂಬಿಕೆ ಇಟ್ಟಿದ್ದರು. ನಾವೆಲ್ಲರೂ ಅದಕ್ಕೆ ಬದ್ಧರಾಗಿದ್ದು ಪಕ್ಷದ ಕೇಂದ್ರ ನಾಯಕತ್ವದ ನಿರ್ಧಾರಕ್ಕೆ ಬದ್ಧರಾಗಿ ಜತೆಯಾಗಿ ದುಡಿಯೋಣ' ಎಂದು ತೇಜಸ್ವಿನಿ ಅನಂತಕುಮಾರ್ ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುತ್ತಾರೆ ಎಂಬ ವದಂತಿಗಳು ಕೆಲವು ದಿನಗಳಿಂದ ವ್ಯಾಪಕವಾಗಿದೆ. ಅದಕ್ಕೆ ಪುಷ್ಟಿ ನೀಡುವಂತೆ ಬಿಜೆಪಿ ಬೇರೆ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದರೂ ಬೆಂಗಳೂರು ದಕ್ಷಿಣಕ್ಕೆ ಯಾರು ಎಂಬ ಗುಟ್ಟು ಬಿಟ್ಟುಕೊಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಈ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಕುತೂಹಲದಿಂದ ಕಾಯುತ್ತಿದ್ದಾರೆ. ಇದೇ ಕಾರಣಕ್ಕೆ ತೇಜಸ್ವಿನಿ ಅನಂತಕುಮಾರ್ ಅವರ ಟ್ವೀಟ್‌ಗೂ ಮಹತ್ವ ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌