ಆ್ಯಪ್ನಗರ

ನಿಖಿಲ್ ಎಲ್ಲಿದ್ದೀಯಪ್ಪಾ? ವ್ಯಂಗ್ಯವಾಡಿದ ಬಿಜೆಪಿ

ಮಂಡ್ಯ ಲೋಕಸಭಾ ಚುನಾವಣೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಭಾರಿ ಮುನ್ನಡೆಯೊಂದಿಗೆ ಗೆಲುವು ದಾಖಲಿಸುವುದು ಖಚಿತವೆನಿಸಿದೆ. ಈ ನಡುವೆ ನಿಖಿಲ್ ಕುಮಾರಸ್ವಾಮಿಯನ್ನು ಬಿಜೆಪಿ ಟ್ರೋಲ್‌ಗೆ ಗುರಿಯಾಗಿಸಿದೆ.

Vijaya Karnataka Web 23 May 2019, 2:38 pm
ಮಂಡ್ಯ: ಲೋಕಸಭಾ ಚುನಾವಣೆ 2019ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸ್ಪಷ್ಟ ಬಹುಮತದತ್ತ ಮುನ್ನಡೆದಿದೆ. ಅತ್ತ ರಾಜ್ಯದಲ್ಲೂ ಬಿಜೆಪಿ ಭರ್ಜರಿ ಗೆಲುವಿನತ್ತ ಮುಖ ಮಾಡಿದೆ.
Vijaya Karnataka Web nikhil-ellidiyappa


ಈ ನಡುವೆ ಇಡೀ ರಾಜ್ಯದ ಕುತೂಹಳ ಕೆರಳಿಸಿರುವ ಮಂಡ್ಯ ಲೋಕಸಭಾ ಚುನಾವಣಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲುವು ದಾಖಲಿಸುವುದು ಬಹುತೇಕ ನಿಚ್ಚಳವೆನಿಸಿದೆ.

ಸುಮಲತಾ ಹಾಗೂ ಸಿಎಂ ಕುಮಾರಸ್ವಾಮಿ ಪುತ್ರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಡುವೆ ನೇರ ಹಣಾಹಣಿ ನಡೆದಿತ್ತು. ಆದರೆ ಜೆಡಿಎಸ್ ಲೆಕ್ಕಾಚಾರಗಳನ್ನೆಲ್ಲ ತಲೆಕೆಳಗಾಗಿಸುಸಿರುವ ಸುಮಲತಾ ಗೆಲುವಿನತ್ತ ಮುನ್ನುಗಿದ್ದಾರೆ. ಈಗಾಗಲೇ 40000ಕ್ಕೂ ಹೆಚ್ಚು ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಈ ನಡುವೆ ಕರ್ನಾಟಕ ಬಿಜೆಪಿ ಟ್ವಿಟರ್ ಪುಟದಲ್ಲಿ ನಿಖಿಲ್‌ ಎಲ್ಲೀದ್ದಿಯಪ್ಪಾ ಎಂದು ಹೇಳು ಮೂಲಕ ವ್ಯಂಗ್ಯವಾಡಲಾಗಿದೆ. ಇದಕ್ಕೆ ಬಿಜೆಪಿ ಅಭಿಮಾನಿಗಳು ಟ್ರೋಲ್ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌