ಆ್ಯಪ್ನಗರ

ಬಿಜೆಪಿ ಪಾದಯಾತ್ರೆಯಲ್ಲಿ ಅಪ್ರಾಪ್ತರು: ಶಾಸಕ ರಘುಪತಿ ಭಟ್ ವಿರುದ್ಧ ಪ್ರಕರಣ ದಾಖಲು

ಯಾವುದೇ ಅನುಮತಿ ಪಡೆದುಕೊಳ್ಳದೇ ಪಾದಯಾತ್ರೆ ಹಮ್ಮಿಕೊಂಡಿದ್ದರು. ಈ ಪಾದಯಾತ್ರೆಯಲ್ಲಿ ಹೆಚ್ಚಿನ ಅಪ್ರಾಪ್ತ ಮಕ್ಕಳನ್ನು ಸೇರಿಸಿಕೊಂಡಿದ್ದು, ಕಾನೂನು ಉಲ್ಲಂಘನೆಯಾಗಿದೆ.

Vijaya Karnataka Web 17 Apr 2019, 6:47 pm
ಉಡುಪಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಪ್ರಾಪ್ತ ಮಕ್ಕಳೊಂದಿಗೆ ಅಕ್ರಮ ಕೂಟ ಸೇರಿಸಿ ಕೋಡಿಬೆಂಗ್ರೆಯಿಂದ ಗುಜ್ಜರಬೆಟ್ಟುವರೆಗೆ ಪಾದಯಾತ್ರೆ ನಡೆಸಿದ್ದ ಶಾಸಕ ಕೆ. ರಘುಪತಿ ಭಟ್ ಸಹಿತ ಇತರರ ವಿರುದ್ಧ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Vijaya Karnataka Web ಪಾದಯಾತ್ರೆ
ಪಾದಯಾತ್ರೆ


ಶಾಸಕ ಕೆ. ರಘುಪತಿ ಭಟ್ ಚುನಾವಣಾ ಆಯೋಗದಿಂದ ಯಾವುದೇ ಅನುಮತಿ ಪಡೆದುಕೊಳ್ಳದೇ ಮಂಗಳವಾರ ಸಂಜೆ 5.30 ಕ್ಕೆ ಕೋಡಿಬೆಂಗ್ರೆ ಪರಿಸರದಲ್ಲಿ ಅಕ್ರಮ ಕೂಟ ಸೇರಿಸಿದ್ದರು.

ಬಳಿಕ ಯಾವುದೇ ಅನುಮತಿ ಪಡೆದುಕೊಳ್ಳದೇ ಪಾದಯಾತ್ರೆ ಹಮ್ಮಿಕೊಂಡಿದ್ದರು. ಈ ಪಾದಯಾತ್ರೆಯಲ್ಲಿ ಹೆಚ್ಚಿನ ಅಪ್ರಾಪ್ತ ಮಕ್ಕಳನ್ನು ಸೇರಿಸಿಕೊಂಡಿದ್ದು, ಕಾನೂನು ಉಲ್ಲಂಘನೆಯಾಗಿದೆ.

ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಪಾದಯಾತ್ರೆ ಹಾಗೂ ಅಪ್ರಾಪ್ತ ಮಕ್ಕಳ ಬಳಕೆಗೆ ಸಂಬಂಧಿಸಿ ಶಾಸಕ ಕೆ.ರಘುಪತಿ ಭಟ್ ಹಾಗೂ ಇತರರ ಮೇಲೆ ಅಕ್ರಮ ಕೂಟ, ಬಾಲ ಕಾರ್ಮಿಕ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್‍ನಡಿ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌