ಆ್ಯಪ್ನಗರ

ರಾಜಕೀಯ ಬಿಸಿ, ಸಿಎಂ ದಿಲ್ಲಿ ಭೇಟಿ ರದ್ದು

ಮತಗಟ್ಟೆ ಸಮೀಕ್ಷೆ ವರದಿಗಳು ಬಂದ ನಂತರ ಕುಮಾರಸ್ವಾಮಿ ಹಿರಿಯ ನಾಯಕರ ಜತೆ ನಿರಂತರ ಸಭೆ ನಡೆಸುತ್ತಿದ್ದಾರೆ. ಮಂಗಳವಾರ ದೇವೇಗೌಡರ ನಿವಾಸಕ್ಕೆ ತೆರಳಿ ಹಲವು ಗಂಟೆಗಳ ಕಾಲ ಕುಮಾರಸ್ವಾಮಿ ಮಾತುಕತೆ ನಡೆಸಿದರು.

Vijaya Karnataka Web 21 May 2019, 4:32 pm
ಬೆಂಗಳೂರು: ವಿದ್ಯುನ್ಮಾನ ಮತಯಂತ್ರಗಳ ವಿಷಯ ಕುರಿತು ದೆಹಲಿಯಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ತೆರಳಬೇಕಿದ್ದ ಕಾರ್ಯಕ್ರಮವನ್ನು ರದ್ದು ಪಡಿಸಿದ್ದಾರೆ.
Vijaya Karnataka Web ಎಚ್‌ ಡಿ ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ


ಮುಖ್ಯಮಂತ್ರಿ ಅವರ ದೆಹಲಿ ಭೇಟಿ ಕಾರ್ಯಕ್ರಮ ರದ್ದಾಗಿರುವುದಾಗಿ ಮುಖ್ಯಮಂತ್ರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ಈ ಮೊದಲು ನಿಗದಿಯಾದ ಕಾರ್ಯಕ್ರಮದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಬೇಕಿತ್ತು.

ಇವಿಎಂಗಳ ಬಗ್ಗೆ 21 ಪ್ರತಿಪಕ್ಷಗಳ ನಾಯಕರ ನಿಯೋಗ ಮಂಗಳವಾರ ಚುನಾವಣೆ ಆಯೋಗವನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಮತಗಟ್ಟೆ ಸಮೀಕ್ಷೆ ವರದಿಗಳು ಬಂದ ನಂತರ ಕುಮಾರಸ್ವಾಮಿ ಹಿರಿಯ ನಾಯಕರ ಜತೆ ನಿರಂತರ ಸಭೆ ನಡೆಸುತ್ತಿದ್ದಾರೆ. ಮಂಗಳವಾರ ದೇವೇಗೌಡರ ನಿವಾಸಕ್ಕೆ ತೆರಳಿ ಹಲವು ಗಂಟೆಗಳ ಕಾಲ ಎಚ್‌ಡಿ ಕುಮಾರಸ್ವಾಮಿ ಮಾತುಕತೆ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ