ಆ್ಯಪ್ನಗರ

ಕೈ ಎರಡಂಕಿ ದಾಟಲ್ಲ ಎಂದ ಯಡಿಯೂರಪ್ಪ

'ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎರಡಂಕಿ ದಾಟುವುದಿಲ್ಲವೆಂದು ಜೆಡಿಎಸ್‌ ನಾಯಕ ದೇವೇಗೌಡರು ಬಾಯಿ ತಪ್ಪಿ ಹೇಳಿದ್ದಾರೆ. ಇನ್ನೂ ಎಲ್ಲಿಂದ ಸ್ಪರ್ಧಿಸಬೇಕೆಂಬುದರ ಬಗ್ಗೆ ಗೊಂದಲದಲ್ಲೇ ಮುಳುಗಿದ್ದಾರೆ,'' ಎಂದರು.

Vijaya Karnataka 23 Mar 2019, 10:01 am
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಈ ಸಲ ರಾಜ್ಯದಲ್ಲಿ ಎರಡಂಕಿ ದಾಟುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.
Vijaya Karnataka Web BSY 1200


ಕಾಂಗ್ರೆಸ್‌ನ ಹಿರಿಯ ನಾಯಕ ಡಾ.ಮಾಲಕರೆಡ್ಡಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ''ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎರಡಂಕಿ ದಾಟುವುದಿಲ್ಲವೆಂದು ಜೆಡಿಎಸ್‌ ನಾಯಕ ದೇವೇಗೌಡರು ಬಾಯಿ ತಪ್ಪಿ ಹೇಳಿದ್ದಾರೆ. ಇನ್ನೂ ಎಲ್ಲಿಂದ ಸ್ಪರ್ಧಿಸಬೇಕೆಂಬುದರ ಬಗ್ಗೆ ಗೊಂದಲದಲ್ಲೇ ಮುಳುಗಿದ್ದಾರೆ,'' ಎಂದರು.

ಕಲಬುರಗಿಯಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣವಿದ್ದು ಪಕ್ಷದ ಅಭ್ಯರ್ಥಿ ಡಾ.ಉಮೇಶ್‌ ಜಾಧವ್‌ ನಿಶ್ವಿತವಾಗಿಯೂ ಗೆಲ್ಲಲಿದ್ದಾರೆ. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುಮಲತಾ ಅಂಬರೀಷ್‌ ಅವರಿಗೆ ಬೆಂಬಲಿಸಲು ಕೇಂದ್ರದ ವರಿಷ್ಠರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದರು. ಇದಕ್ಕೂ ಮುನ್ನ ಯಡಿಯೂರಪ್ಪ ಅವರು ಲೋಕಸಭಾ ಚುನಾವಣೆಗಾಗಿ ನೂತನ ಬಿಜೆಪಿ ಮಾಧ್ಯಮ ಕೇಂದ್ರವನ್ನು ಉದ್ಘಾಟಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌