ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್, ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ ಕಾಂಗ್ರೆಸ್ ಹಿರಿಯ ನಾಯಕ ರೋಷನ್ ಬೇಗ್ಗೆ ನೋಟಿಸ್ ಜಾರಿ ಮಾಡಲಾಗಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ. ಘೋರ್ಪಡೆ ನೋಟಿಸ್ ಜಾರಿ ಮಾಡಿದ್ದಾರೆ.
ಪಕ್ಷದ ಹಿರಿಯ ನಾಯಕರನ್ನು ಬಫೂನ್, ಅರೋಗೆಂಟ್, ಫ್ಲಾಪ್ ಶೋ ಎಂದೆಲ್ಲ ಟೀಕಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಪಕ್ಷಕ್ಕೆ ತೀವ್ರ ಧಕ್ಕೆ ಉಂಟು ಮಾಡಿದೆ. ಇದು ಪಕ್ಷದ ಸಿದ್ಧಾಂತಕ್ಕೆ ನಡೆದುಕೊಂಡ ಧೋರಣೆಯಾಗಿದೆ ಎಂದು ನೋಟಿಸ್ ಜಾರಿ ಮಾಡಲಾಗಿದೆ.
ಈ ನಡವಳಿಕೆಯು ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇಂಥ ಹೇಳಿಕೆಗಳ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದ್ದು, ಒಂದು ವಾರದೊಳಗೆ ಸಮಜಾಯಿಷಿ ನೀಡಬೇಕೆಂದು ಸೂಚಿಸಲಾಗಿದೆ ಎಂದು ನೋಟಿಸ್ನಲ್ಲಿ ಸ್ಪಷ್ಟಪಡಿಸಲಾಗಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ. ಘೋರ್ಪಡೆ ನೋಟಿಸ್ ಜಾರಿ ಮಾಡಿದ್ದಾರೆ.
ಪಕ್ಷದ ಹಿರಿಯ ನಾಯಕರನ್ನು ಬಫೂನ್, ಅರೋಗೆಂಟ್, ಫ್ಲಾಪ್ ಶೋ ಎಂದೆಲ್ಲ ಟೀಕಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಪಕ್ಷಕ್ಕೆ ತೀವ್ರ ಧಕ್ಕೆ ಉಂಟು ಮಾಡಿದೆ. ಇದು ಪಕ್ಷದ ಸಿದ್ಧಾಂತಕ್ಕೆ ನಡೆದುಕೊಂಡ ಧೋರಣೆಯಾಗಿದೆ ಎಂದು ನೋಟಿಸ್ ಜಾರಿ ಮಾಡಲಾಗಿದೆ.
ಈ ನಡವಳಿಕೆಯು ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇಂಥ ಹೇಳಿಕೆಗಳ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದ್ದು, ಒಂದು ವಾರದೊಳಗೆ ಸಮಜಾಯಿಷಿ ನೀಡಬೇಕೆಂದು ಸೂಚಿಸಲಾಗಿದೆ ಎಂದು ನೋಟಿಸ್ನಲ್ಲಿ ಸ್ಪಷ್ಟಪಡಿಸಲಾಗಿದೆ.