ಆ್ಯಪ್ನಗರ

ದೇಶದ್ರೋಹಿಗಳಿಗೆ ನೆರವು, ಕಾಂಗ್ರೆಸ್ ಪ್ರಣಾಳಿಕೆ ಹಿಂಪಡೆಯಲಿ: ಸಿ.ಟಿ ರವಿ

ನಗರದ ಬಿಜೆಪಿ ಚುನಾವಣೆ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತ ಅವಧಿಗಿಂತಲೂ ಬಿಜೆಪಿ ಆಡಳಿತದ ಅವಧಿಯಲ್ಲಿ ದೇಶ ಸುರಕ್ಷಿತವಾಗಿದೆ. ಕಾಶ್ಮೀರ ಮತ್ತು ಛತ್ತೀಸ್‌ಗಢ ಹೊರತುಪಡಿಸಿದರೆ ದೇಶದ ಬೇರೆಲ್ಲೂ ಭಯೋತ್ಪಾದಕರ ದಾಳಿ, ನಕ್ಸಲ್ ದಾಳಿ ನಡೆದಿಲ್ಲ. ಹೀಗಿರುವಾಗ ಕಾಂಗ್ರೆಸ್‌ನ ಪ್ರಣಾಳಿಕೆ ಭಯೋತ್ಪಾದನಾ ಚಟುವಟಿಕೆಗಳಿಗೆ ಪರೋಕ್ಷವಾಗಿ ಪ್ರೋತ್ಸಾಹ ನೀಡಿದಂತಾಗಲಿದೆ. ಈ ಕಾರಣದಿಂದ ತಕ್ಷಣ ಪ್ರಣಾಳಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಅವರು ಆಗ್ರಹಿಸಿದರು.

Vijaya Karnataka Web 22 Apr 2019, 3:14 pm
ಮಂಗಳೂರು: ದೇಶದ್ರೋಹದ ಕಾನೂನನ್ನು ಸಡಿಲಗೊಳಿಸುವ ಮತ್ತು ಕಾಶ್ಮೀರದಲ್ಲಿ ಸೈನಿಕರಿಗೆ ನೀಡಿದ ಪರಮಾಧಿಕಾರವನ್ನು ಹಿಂದಕ್ಕೆ ಪಡೆಯುವ ಕಾಂಗ್ರೆಸ್ ಪ್ರಣಾಳಿಕೆ ದೇಶದಲ್ಲಿ ಮತ್ತೆ ಆಂತಕವಾದ ಹೆಚ್ಚಿಸಲು ನೆರವಾಗಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ತಕ್ಷಣ ತನ್ನ ಪ್ರಣಾಳಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ. ಆಗ್ರಹಿಸಿದ್ದಾರೆ.
Vijaya Karnataka Web CT Ravi new


ನಗರದ ಬಿಜೆಪಿ ಚುನಾವಣೆ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತ ಅವಧಿಗಿಂತಲೂ ಬಿಜೆಪಿ ಆಡಳಿತದ ಅವಧಿಯಲ್ಲಿ ದೇಶ ಸುರಕ್ಷಿತವಾಗಿದೆ. ಕಾಶ್ಮೀರ ಮತ್ತು ಛತ್ತೀಸ್‌ಗಢ ಹೊರತುಪಡಿಸಿದರೆ ದೇಶದ ಬೇರೆಲ್ಲೂ ಭಯೋತ್ಪಾದಕರ ದಾಳಿ, ನಕ್ಸಲ್ ದಾಳಿ ನಡೆದಿಲ್ಲ. ಹೀಗಿರುವಾಗ ಕಾಂಗ್ರೆಸ್‌ನ ಪ್ರಣಾಳಿಕೆ ಭಯೋತ್ಪಾದನಾ ಚಟುವಟಿಕೆಗಳಿಗೆ ಪರೋಕ್ಷವಾಗಿ ಪ್ರೋತ್ಸಾಹ ನೀಡಿದಂತಾಗಲಿದೆ. ಈ ಕಾರಣದಿಂದ ತಕ್ಷಣ ಪ್ರಣಾಳಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಅವರು ಆಗ್ರಹಿಸಿದರು.

ದೇಶದ ಜನರ ಇಚ್ಛೆಗೆ ವಿರುದ್ಧವಾಗಿ ಕಾಂಗ್ರೆಸ್ ನಡೆದುಕೊಂಡರೆ ಜನರೇ ಉತ್ತರ ನೀಡಲಿದ್ದಾರೆ. ಉಗ್ರವಾದಕ್ಕೆ ನೆರವು ನೀಡುವ, ತುಕುಡೇ ಗ್ಯಾಂಗ್‌ನ್ನು ಬೆಂಬಲಿಸುವ ಮನಸ್ಥಿತಿಯ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಬೇಕು ಎಂದು ಅವರು ಆಗ್ರಹಿಸಿದರು.

ಐಟಿ ದಾಳಿ ನಡೆದಾಗ ರಾಜ್ಯದಲ್ಲಿ ಮೈತ್ರಿ ಕೂಟಗಳು ಒಟ್ಟಾಗಿ ಬೀದಿಗೆ ಬಂದು ಹೋರಾಟ ನಡೆಸಿದ್ದವು. ಆದರೆ ಐಟಿ ದಾಳಿ ಏನು ಭಯೋತ್ಪಾದನಾ ದಾಳಿಯಾ ಎಂದು ಪ್ರಶ್ನಿಸಿದ ಸಿ.ಟಿ. ರವಿ, ಅಕ್ರಮ ಹಣ ಸಂಪಾದನೆಗೆ ಎರಡೂ ಪಕ್ಷದ ನಾಯಕರು ಅಜೆಂಡಾ ರೂಪಿಸಿರುವುದು ಗುಟ್ಟಾಗಿ ಉಳಿದಿಲ್ಲ. ರಾಜ್ಯದ ಐದು ಪ್ರಮುಖ ಕಾಮಗಾರಿಗಳ ಕಂಪ್ಲೀಷನ್ ಸರ್ಟಿಫಿಕೇಟ್ ಬಾರದೆ ಗುತ್ತಿಗೆದಾರರಿಗೆ ಹಣ ಸಂದಾಯ ಮಾಡಲಾಗಿದೆ. ಮುಂಜೆ ಬಿಜೆಪಿ ಸರಕಾರ ಬಂದಲ್ಲಿ ಈ ಬಗ್ಗೆ ಸಮಗ್ರ ತನಿಖೆ ಮಾಡಿಸುತ್ತೇವೆ ಎಂದು ಎಚ್ಚರಿಸಿದರು.

ರಾಹುಲ್ ಗಾಂಧಿ ಅವರ ಪೌರತ್ವ ವಿಚಾರದಲ್ಲಿ ಕಾಂಗ್ರೆಸ್ ಸ್ಪಷ್ಟನೆ ನೀಡಬೇಕು. ಎರಡು ಬೇರೆ ಬೇರೆ ಹೆಸರುಗಳಲ್ಲಿ ರಾಹುಲ್ ಗಾಂಧಿ ದಾಖಲೆ ಹೊಂದಿರುವ ಬಗ್ಗೆ ದಾಖಲೆಗಳಿವೆ. ಈ ಎರಡು ಜನ ಒಬ್ಬರೇ ಎಂಬ ಬಗ್ಗೆ ದೇಶದ ಜನರಿಗೆ ಉತ್ತರ ನೀಡಬೇಕು ಎಂದು ಸಿ.ಟಿ. ರವಿ ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌