ಆ್ಯಪ್ನಗರ

ರಮೇಶ್‌ ಜಾರಕಿಹೊಳಿ ಪಕ್ಷಕ್ಕೆ ಬರುವ ವಿಚಾರ ಗೊತ್ತಿಲ್ಲ, ನಾನು ತಲೆ ಹಾಕಿಲ್ಲ: ಬಿಎಸ್‌ವೈ

ಕಾಂಗ್ರೆಸ್‌ ನಾಯಕರ ಜಗಳದ ಬಗ್ಗೆ ನಾನು ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಅವರಲ್ಲಿ ಭಿನ್ನಾಭಿಪ್ರಾಯಗಳಿದ್ದು ಕೆಲವು ಹೊರಬಂದರೆ ಬರಲಿ. ನಂತರ ಅವರ ನಿರ್ಧಾರ ಏನಿರುತ್ತದೋ ನೋಡೋಣ ಎಂದಷ್ಟೇ ಯಡಿಯೂರಪ್ಪ ಹೇಳಿದರು.

Vijaya Karnataka Web 24 Apr 2019, 9:49 pm
ಶಿವಮೊಗ್ಗ: ಕಾಂಗ್ರೆಸ್‌ನ ರಮೇಶ್ ಜಾರಕಿಹೊಳಿ ಪಕ್ಷಕ್ಕೆ ಬರುವ ವಿಚಾರ ನನಗೇನು ಮಾಹಿತಿ ಇಲ್ಲ. ಇದರಲ್ಲಿ ನಾನು ತಲೆ ಹಾಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿ.ಎಸ್. ಯಡಿಯೂರಪ್ಪ ಮಾತನಾಡಿದರು.

ಕಾಂಗ್ರೆಸ್‌ ನಾಯಕರ ಜಗಳದ ಬಗ್ಗೆ ನಾನು ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಅವರಲ್ಲಿ ಭಿನ್ನಾಭಿಪ್ರಾಯಗಳಿದ್ದು ಕೆಲವು ಹೊರಬಂದರೆ ಬರಲಿ. ನಂತರ ಅವರ ನಿರ್ಧಾರ ಏನಿರುತ್ತದೋ ನೋಡೋಣ ಎಂದಷ್ಟೇ ಹೇಳಿದರು.

ಶಿವಮೊಗ್ಗದಲ್ಲಿ ಗೆಲ್ಲುವ ವಾತಾವರಣ ಸ್ಪಷ್ಟವಾಗಿದೆ. ಸಭೆಯಲ್ಲಿ ಕೋರ್ ಕಮಿಟಿ ಸದಸ್ಯರು ಈ ಬಗ್ಗೆ ವರದಿ ನೀಡಿದ್ದಾರೆ. ಸುಮಾರು ಒಂದೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇವೆ. ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಕೂಲಂಕಶವಾಗಿ ಚರ್ಚೆ ನಡೆಸಲಾಗಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್, ದೇವೆಗೌಡರು ಸೇರಿದಂತೆ, ಅನೇಕ ನಾಯಕರು ಕ್ಷೇತ್ರಕ್ಕೆ ಬಂದು ಹೋಗಿದ್ದಾರೆ. ಇವರು ಬಂದು ಹೋದ ತಕ್ಷಣ ಫಲಿತಾಂಶ ಬದಲಿಸಲು ಸಾಧ್ಯವಿಲ್ಲ ಎಂದು ಬಿಎಸ್‌ವೈ ತಿಳಿಸಿದರು.

ಕುಂದಗೊಳ ಹಾಗೂ ಚಿಂಚೋಳಿಯಲ್ಲಿ ನಡೆಯಲಿರುವ ವಿಧಾನಸಭೆ ಉಪ ಚುನಾವಣೆಗಾಗಿ, ಗುರುವಾರ ಬೆಂಗಳೂರಿನಲ್ಲಿ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌