ಶಿವಮೊಗ್ಗ: 17ನೇ ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಸಂಭ್ರಮಾಚರಣೆಯಲ್ಲಿ ತೊಡಗಿರುವ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಾಲಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಎಲ್ಲಿದಿರಪ್ಪ ಎಂದು ಪ್ರಶ್ನಿಸುವ ಮೂಲಕ ವ್ಯಂಗ್ಯವಾಡಿದ್ದಾರೆ.
ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಸಂಭ್ರಮಾಚರಣೆ ಸಭೆಯಲ್ಲಿ ಅವರು ಮಾತನಾಡಿರುವ ಅವರು, ಜಾತಿ ಲೆಕ್ಕಚಾರ ಇಟ್ಟುಕೊಂಡು ಚುನಾವಣೆ ಮಾಡಿದ ಮೈತ್ರಿ ಪಕ್ಷಗಳಿಗೆ ಜನ ಸರಿಯಾದ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಬುಡ ಸಮೇತ ಕಿತ್ತು ಹಾಕುತ್ತೇವೆ ಎನ್ನುತ್ತಿದ್ದ ಮೈತ್ರಿ ಪಕ್ಷಗಳಿಗೆ ಭಾರೀ ಮುಖಭಂಗವಾಗಿದೆ. ಈಗ ಆ ಪಕ್ಷದ ನಾಯಕರೆಲ್ಲ ಎಲ್ಲಿದ್ದಾರಪ್ಪ? ಎಂದು ಪ್ರಶ್ನಿಸಿದರು.
ಪಾಪ ಎಚ್.ಡಿ.ಕುಮಾರಸ್ವಾಮಿ ಹಣೆಬರಹದಲ್ಲಿ ಒಂದು ವರ್ಷ ಅವಧಿಗೆ ಮಾತ್ರ ಮುಖ್ಯಮಂತ್ರಿ ಎಂದು ಬರೆದಿರಬೇಕು ಕುಟುಕಿದ ಈಶ್ವರಪ್ಪ, ಇನ್ನೊಂದು ವಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಸಂಭ್ರಮಾಚರಣೆ ಸಭೆಯಲ್ಲಿ ಅವರು ಮಾತನಾಡಿರುವ ಅವರು, ಜಾತಿ ಲೆಕ್ಕಚಾರ ಇಟ್ಟುಕೊಂಡು ಚುನಾವಣೆ ಮಾಡಿದ ಮೈತ್ರಿ ಪಕ್ಷಗಳಿಗೆ ಜನ ಸರಿಯಾದ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಬುಡ ಸಮೇತ ಕಿತ್ತು ಹಾಕುತ್ತೇವೆ ಎನ್ನುತ್ತಿದ್ದ ಮೈತ್ರಿ ಪಕ್ಷಗಳಿಗೆ ಭಾರೀ ಮುಖಭಂಗವಾಗಿದೆ. ಈಗ ಆ ಪಕ್ಷದ ನಾಯಕರೆಲ್ಲ ಎಲ್ಲಿದ್ದಾರಪ್ಪ? ಎಂದು ಪ್ರಶ್ನಿಸಿದರು.
ಪಾಪ ಎಚ್.ಡಿ.ಕುಮಾರಸ್ವಾಮಿ ಹಣೆಬರಹದಲ್ಲಿ ಒಂದು ವರ್ಷ ಅವಧಿಗೆ ಮಾತ್ರ ಮುಖ್ಯಮಂತ್ರಿ ಎಂದು ಬರೆದಿರಬೇಕು ಕುಟುಕಿದ ಈಶ್ವರಪ್ಪ, ಇನ್ನೊಂದು ವಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.