ಆ್ಯಪ್ನಗರ

ಇವಿಎಂ ತಿರುಚಬಹುದು ಎಂದು ಬಿಜೆಪಿಯೇ ಹೇಳಿತ್ತು: ಸಿದ್ದರಾಮಯ್ಯ

ಇವಿಎಂ ದುರ್ಬಳಕೆ ಆಗಿರುವ ಸಾಧ್ಯತೆ ಇದೆ. ಎಲ್ಲಾ ಸಮೀಕ್ಷೆ ಗಳು ಹೇಗೆ ಏಕ ಪ್ರಕಾರ ಆಗಲು ಸಾಧ್ಯವಿಲ್ಲ. ನಾನೇ 24 ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದೆ. ಅಲ್ಲಿನ ಜನರ ಅಭಿಪ್ರಾಯ ಅರ್ಥ ಮಾಡಿಕೊಂಡಿದ್ದೇನೆ ಎಂದರು.

Vijaya Karnataka Web 22 May 2019, 7:00 pm
ಮೈಸೂರು: ಈಗಾಗಲೇ ಪ್ರತಿಪಕ್ಷಗಳು ಹೇಳಿರುವಂತೆ ವಿದ್ಯುನ್ಮಾನ ಮತಯಂತ್ರಗಳು ದುರ್ಬಳಕೆ ಆಗಿರುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Vijaya Karnataka Web ಸಿದ್ದರಾಮಯ್ಯ
ಸಿದ್ದರಾಮಯ್ಯ


ಸುದ್ದಿಗಾರರೊಂದಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ವಿದ್ಯುನ್ಮಾನ ಮತಯಂತ್ರ ದುರ್ಬಲಕೆ ಆಗುವುದು ಸಾಧ್ಯ. ಇದನ್ನು ನಾವು ಹೇಳುತ್ತಿಲ್ಲ. ಕೆಲವು ವರ್ಷಗಳ ಹಿಂದೆ ಬಿಜೆಪಿಯೇ ಹೇಳಿದ್ದು, ಅದರ ಸಂಸದರೇ ಈ ಬಗ್ಗೆ ಪುಸ್ತಕ ಬರೆದಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.


ಇವಿಎಂ ದುರ್ಬಳಕೆ ಆಗಿರುವ ಸಾಧ್ಯತೆ ಇದೆ. ಎಲ್ಲಾ ಸಮೀಕ್ಷೆ ಗಳು ಹೇಗೆ ಏಕ ಪ್ರಕಾರ ಆಗಲು ಸಾಧ್ಯವಿಲ್ಲ. ನಾನೇ 24 ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದೆ. ಅಲ್ಲಿನ ಜನರ ಅಭಿಪ್ರಾಯ ಅರ್ಥ ಮಾಡಿಕೊಂಡಿದ್ದೇನೆ ಎಂದರು.

ಆದರೆ ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್‌ ನಾಲ್ಕೈದು ಸ್ಥಾನ ಬರುತ್ತದೆ ಎಂದರೆ ಹೇಗೆ ನಂಬಲು ಸಾಧ್ಯ? ಬಹುತೇಕ ಎಲ್ಲಾ ಉಪಚುನಾವಣೆಯಲ್ಲಿ ಬಿಜೆಪಿ ಸೋತಿದೆ. ಮಹಾ ಚುನಾವಣೆಯಲ್ಲಿ ಮಾತ್ರ ಗೆಲ್ಲಲು ಹೇಗೆ ಸಾಧ್ಯ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌