ಆ್ಯಪ್ನಗರ

ಯಡಿಯೂರಪ್ಪ ಹೆಲಿಕಾಪ್ಟರ್ ತಪಾಸಣೆ

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಚುನಾವಣಾ ಪ್ರಚಾರಕ್ಕಾಗಿ ಬಾಗಲಕೋಟೆಗೆ ಬಂದಿಳಿದ ತಕ್ಷಣ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಹೆಲಿಕಾಪ್ಟರ್ ಪರೀಶೀಲಿಸಿದ ಘಟನೆ ನಡೆದಿದೆ. ಹೆಲಿಕಾಪ್ಟರ್ ನಲ್ಲಿದ್ದ ಬ್ಯಾಗ್‌ಗಳ ಪರಿಶೀಲನೆನಡೆಸಲಾಯಿತು.

Vijaya Karnataka Web 4 Apr 2019, 2:51 pm
ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬಾಗಲಕೋಟೆಗೆ ಬಂದಿಳಿದ ಕ್ಷಣದಲ್ಲೇ ಹೆಲಿಕಾಪ್ಟರ್ ತಪಾಸಣೆ ಮಾಡಿರುವ ಘಟನೆ ವರದಿಯಾಗಿದೆ.
Vijaya Karnataka Web yedyrurappa


ಬಾಗಲಕೋಟೆ ನವನಗರದ ಹೆಲಿಪ್ಯಾಡ್‌ನಲ್ಲಿ ಯಡಿಯೂರಪ್ಪ ಬಂದಿಳಿದ ತಕ್ಷಣ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ತಪಾಸಣೆ ನಡೆಸಿದರು.

ಚುನಾವಣಾ ಪ್ರಚಾರಕ್ಕಾಗಿ ಯಡಿಯೂರಪ್ಪ ದಾವಣಗೆರೆಯಿಂದ ಬಾಗಲಕೋಟೆಗೆ ಹೆಲಿಕಾಪ್ಟರ್ ಮುಖಾಂತರ ಬಂದಿಳಿದಿದ್ದರು. ಈ ವೇಳೆ ತಪಾಸಣೆ ನಡೆದಿದೆ.

ಹೆಲಿಕಾಪ್ಟರ್ ನಲ್ಲಿದ್ದ ಬ್ಯಾಗ್‌ಗಳ ಪರಿಶೀಲನೆನಡೆಸಲಾಯಿತು. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಬಿಜೆಪಿ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಪರ ಪ್ರಚಾರಕ್ಕೆ ಆಗಮಿಸಿದ್ದರು. ಹೆಲಿಕಾಪ್ಟರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹಾಗೂ ಶಾಸಕ ಮುರುಗೇಶ್ ನಿರಾಣಿ ಜತೆಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌