ಆ್ಯಪ್ನಗರ

ಮಂಡ್ಯದಲ್ಲಿ ಸಮಲತಾ ವಿರುದ್ಧ ರಣಕಹಳೆ ಮೊಳಗಿಸಿದ ಎಚ್‌ಡಿಡಿ, ಎಚ್‌ಡಿಕೆ

ತುಮಕೂರು ಲೋಕಸಭಾ ಕ್ಷೇತ್ರದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ದೇವೇಗೌಡ ಹಾಗೂ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರನ್ನು ಸ್ವಾಗತಿಸಿದ ಹೊನ್ನಲಗೆರೆ ಗ್ರಾಮದ ಜನತೆ‌ ಬೃಹತ್ ಗಾತ್ರದ ಆ್ಯಪಲ್ ಹಾರ ಹಾಕಿದರು.

Vijaya Karnataka Web 13 Apr 2019, 2:24 pm
ಮಂಡ್ಯ: ರಾಷ್ಟ್ರದ ಗಮನ ಸೆಳೆಯುತ್ತಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ವಿರುದ್ಧ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಜಂಟಿಯಾಗಿ ಶನಿವಾರ ರಣ ಕಹಳೆ ಮೊಳಗಿಸಿದ್ದಾರೆ. ಮಂಡ್ಯ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ.
Vijaya Karnataka Web HDD HDK


ಮದ್ದೂರು ತಾಲೂಕು ಕೆ.ಹೊನ್ನಗೆರೆಗೆ ಆಗಮಿಸಿದ ಸಿಎಂ ಕುಮಾರಸ್ವಾಮಿ ಅವರಿಗೆ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ. ಮಾಜಿ ಪ್ರಧಾನಿ ದೇವೇಗೌಡ ಅವರ ಜತೆ ತೆರೆದ ಬಸ್ನಲ್ಲಿ ಕುಮಾರಸ್ವಾಮಿ ಪ್ರಚಾರ ಆರಂಭಿಸಿದರು.

ಕುಮಾರಸ್ವಾಮಿ ಅವರ ಜತೆ ಮಾಜಿ ಪ್ರದಾನಿ ದೇವೆಗೌಡ ಹಾಗೂ ಡಿಸಿ ತಮ್ಮಣ್ಣ ಸಾಥ್ ನೀಡಿದ್ದಾರೆ. ಹೊನ್ನಗೆರೆಯ ಸುತ್ತಾಮುತ್ತಾ ಪುತ್ರ ನಿಖಿಲ್ ಕುಮಾರಸ್ವಾಮಿ ಪರ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ. ಬಳಿಕ ಕೆ.ಎಂ ದೊಡ್ಡಿಯ ಭಾರತಿನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ಅವರನ್ನು ಸ್ವಾಗತಿಸಿದ ಹೊನ್ನಲಗೆರೆ ಗ್ರಾಮದ ಜನತೆ‌ ಬೃಹತ್ ಗಾತ್ರದ ಆ್ಯಪಲ್ ಹಾರ ಹಾಕಿದರು.

ಈ ವೇಳೆ ಸಿಎಂ ಕುಮಾರಸ್ವಾಮಿ ಅವರು ಹತ್ಯೆಯಾದ ತೊಪ್ಪನ ಹಳ್ಳಿ ಗ್ರಾಮ ಪಂಚಾಯತ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಪ್ರಕಾಶ ಅವರನ್ನು ನೇನಪಿಸಿಕೊಂಡರು. ಮೈ ಶುಗರ್ ಕಾರ್ಖಾನೆಯನ್ನು ಅಭಿವೃದ್ಧಿ ಪಡಿಸುವುದರ ಜೊತೆಗೆ ಮಂಡ್ಯ ಜಿಲ್ಲೆಯ ಯುವಕರಿಗೆ ಉದ್ಯೋಗ ನೀಡಲು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದ್ದೆನೆ. ನನ್ನನ್ನು ತಮ್ಮ ಮನೆಯ ಮಗ ಎಂದು ಇಷ್ಟು ಎತ್ತರಕ್ಕೆ ಬೆಳಿಸಿದ್ದಿರಿ. ಲೋಕಸಭಾ ಚುನಾವಣೆಯಲ್ಲಿ ನಿಖಿಲ್ನನ್ನು ಗೆಲ್ಲಿಸುವುದರ ಮೂಲಕ ದೇವೇಗೌಡರ ಕೈ ಬಲಪಡಿಸಬೆಕೆಂದು ನಿಮ್ಮಲ್ಲಿ ಕೇಳಿಕೊಳ್ಳುತ್ತೆನೆ‌ ಎಂದು ನೆರೆದವರಲ್ಲಿ ಕುಮಾರಸ್ವಾಮಿ ವಿನಂತಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ