ಆ್ಯಪ್ನಗರ

ರಾಜಕೀಯ ದ್ವೇಷ ದಳ್ಳುರಿಗೆ ಸಿಲುಕಿಸಿದ ಐಟಿ ದಾಳಿ: ವಿಶ್ವನಾಥ್‌

ರಾಜ್ಯಾಂಗಬದ್ಧ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಸಂವಿಧಾನಾತ್ಮಕ ಭಾಗದ ಕೈ ಹಿಸುಕಲಾಗುತ್ತಿದೆ. ಇದು ಸರಿಯಲ್ಲ, ಇದೊಂದು ಖಂಡನೀಯ ಬೆಳವಣಿಗೆ. ಇದರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ವಿಶ್ವನಾಥ್‌ ಹೇಳಿದರು.

Vijaya Karnataka Web 28 Mar 2019, 9:44 pm
ಮಡಿಕೇರಿ: ಚುನಾವಣಾ ಸಮಯದಲ್ಲಿ ಅಭ್ಯರ್ಥಿಗಳನ್ನು ಹೆದರಿಸುವ ಕೆಲಸ ನಡೆಯುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಆರೋಪಿಸಿದ್ದಾರೆ.
Vijaya Karnataka Web ಎಚ್‌ ವಿಶ್ವನಾಥ್‌
ಎಚ್‌ ವಿಶ್ವನಾಥ್‌


ಐಟಿ ದಾಳಿ ಬಗ್ಗೆ ಗುರುವಾರ ಮಡಿಕೇರಿಯಲ್ಲಿ ಪ್ರತಿಕ್ರಿಯೆ ನೀಡಿದರು

ಐಟಿ ದಾಳಿ ರಾಜಕೀಯ ದ್ವೇಷದ ದಳ್ಳುರಿಗೆ ಸಿಲುಕಿಸಿದೆ. ಕೇಂದ್ರ ಸರ್ಕಾರ ಇತರೆ ರಾಜಕೀಯ ಪಕ್ಷಗಳ ಮೇಲೆ ಪ್ರಯೋಗ ಮಾಡುತ್ತಿದೆ. ರಾಜ್ಯಾಂಗಬದ್ಧ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಸಂವಿಧಾನಾತ್ಮಕ ಭಾಗದ ಕೈ ಹಿಸುಕಲಾಗುತ್ತಿದೆ. ಇದು ಸರಿಯಲ್ಲ, ಇದೊಂದು ಖಂಡನೀಯ ಬೆಳವಣಿಗೆ. ಇದರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ವಿಶ್ವನಾಥ್‌ ಹೇಳಿದರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಎಚ್‌ ಸಿ ಮಹದೇವಪ್ಪ, ಐಟಿ ಇಲಾಖೆಗೆ ದಾಳಿ ಮಾಡುವ ಅಧಿಕಾರವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರ ತನ್ನ ತಾಳಕ್ಕೆ ತಕ್ಕನಾಗಿ ಕುಣಿಸುತ್ತಿದೆ. ರಾಜಕೀಯ ಎದುರಾಳಿಗಳ ಮೇಲೆ ಪ್ರಯೋಗ ಮಾಡಲಾಗುತ್ತಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌