ಆ್ಯಪ್ನಗರ

ಕಾಂಗ್ರೆಸ್‌ಗೆ ಕರ್ನಾಟಕ ಶಕ್ತಿ ತುಂಬಲಿದೆ: ಡಿ. ಆರ್‌. ಪಾಟೀಲ

ಜನರು ಮೋಸ ಹೋಗುವುದು ಒಮ್ಮೆ ಮಾತ್ರ, ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದು ಕನಸಿನ ಮಾತು. ಗೊತ್ತಿಲ್ಲದಂತೆ ಜನರ ಜೇಬಿಗೆ ಕತ್ತರಿ ಹಾಕುವ ಯೋಜನೆಗಳನ್ನು ಪ್ರಧಾನಿ ಮೋದಿ ಜಾರಿಗೆ ತಂದಿದ್ದಾರೆ ಎಂದು ಹರಿಹಾಯ್ದರು.

Vijaya Karnataka Web 8 Apr 2019, 10:53 am
ಹಾನಗಲ್ಲ: ದೇಶದಲ್ಲಿ ಕಾಂಗ್ರೆಸ್‌ ಕ್ಷಿಣಿಸಿದಾಗಲೆಲ್ಲ ಕರ್ನಾಟಕವು ಕಾಂಗ್ರೆಸ್‌ ಪಕ್ಷಕ್ಕೆ ಬಲ ತುಂಬಿದೆ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌.ಪಾಟೀಲ ಹೇಳಿದರು.
Vijaya Karnataka Web Congress


ರವಿವಾರ ತಾಲೂಕಿನ ಬಮ್ಮನಹಳ್ಳಿ ಗ್ರಾಮದಲ್ಲಿ ಈ ಭಾಗದ ಜಿಪಂ ವ್ಯಾಪ್ತಿಯ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತ ಸದೃಢಗೊಳ್ಳುವಲ್ಲಿ ಕಾಂಗ್ರೆಸ್‌ ಮುಖ್ಯ ಪಾತ್ರ ವಹಿಸಿದೆ ಎಂದರು.

ಜನರು ಮೋಸ ಹೋಗುವುದು ಒಮ್ಮೆ ಮಾತ್ರ, ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದು ಕನಸಿನ ಮಾತು. ಗೊತ್ತಿಲ್ಲದಂತೆ ಜನರ ಜೇಬಿಗೆ ಕತ್ತರಿ ಹಾಕುವ ಯೋಜನೆಗಳನ್ನು ಪ್ರಧಾನಿ ಮೋದಿ ಜಾರಿಗೆ ತಂದಿದ್ದಾರೆ ಎಂದು ಹರಿಹಾಯ್ದರು. ಅಧಿಕಾರದ ಹಪಾಹಪಿಗಾಗಿ ಸಾಮಾಜಿಕ ಸ್ವಾಸ್ಥ್ಯ ಕದಡುವ ಶಕ್ತಿಗಳನ್ನು ಮಟ್ಟ ಹಾಕುವಲ್ಲಿ ಈ ಬಾರಿ ಮತದಾರರು ಫಲಿತಾಂಶ ನೀಡಲಿದ್ದಾರೆ, ಮೋದಿ ಸರ್ವಾಧಿಕಾರಿ ಆಡಳಿತ ಕೊನೆಗಾಣಲಿದೆ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ ಮಾತನಾಡಿ, ಕನಸುಗಳನ್ನು ಮಾರಿ ಅಧಿಕಾರಕ್ಕೆ ಬಂದ ಮೋದಿ ವಿರುದ್ಧದ ಅಲೆ ಎದ್ದಿದೆ, ಸುಳ್ಳು ಭರವಸೆ, ಬೆಲೆ ಏರಿಕೆ ಮರ್ಮವನ್ನು ಮತದಾರರು ಅರಿತಿದ್ದಾರೆ. ಬಡ ಜನತೆಯ ಕಲ್ಯಾಣದ ಕಾರ್ಯಕ್ರಮಗಳು ಕಾಂಗ್ರೆಸ್ಸಿನಿಂದ ಮಾತ್ರ ಸಾಧ್ಯ ಎಂದರು. ಮಾಜಿ ಸಚಿವ ಮನೋಹರ ತಹಸೀಲ್ದಾರ್‌ ಮಾತನಾಡಿ, ಎಚ್‌.ಕೆ.ಪಾಟೀಲ ಸಚಿವರಾಗಿದ್ದ ವೇಳೆಯಲ್ಲಿ ಸಾಕಷ್ಟು ಜನೋಪಯೋಗಿ ಕಾರ್ಯಕ್ರಮಗಳನ್ನು ಜಾರಿಗೆ ತರುವಲ್ಲಿ ಡಿ.ಆರ್‌.ಪಾಟೀಲ ಅವರ ಪಾತ್ರ ಗಮನಾರ್ಹವಾಗಿದೆ ಎಂದರು.

ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ ಮಾತನಾಡಿ, ಮತದಾರರಿಗೆ ನೈಜತೆಯ ಅರಿವು ಆಗಿದೆ, ದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಲಿದ್ದಾರೆ ಎಂದರು. ಮುಖಂಡ ಯಾಸೀರ್‌ಖಾನ್‌ ಪಠಾಣ ಮಾತನಾಡಿ, ಎರಡು ಅವಧಿಯಲ್ಲಿ ಸಂಸದ ಶಿವಕುಮಾರ ಉದಾಸಿ ಕ್ಷೇತ್ರಕ್ಕೆ ಹೇಳಿಕೊಳ್ಳುವ ಕೊಡುಗೆ ನೀಡಿಲ್ಲ, ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌.ಪಾಟೀಲ ಅವರು ಕ್ಷೇತ್ರ ಸಮಗ್ರ ಕಲ್ಯಾಣದ ಕನಸು ಹೊಂದಿದ್ದಾರೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌