ಆ್ಯಪ್ನಗರ

ಮಂಡ್ಯ: ಶಿವಪ್ರಕಾಶ್‌ ಬಾಬು ಮನೆಗೆ ಭೇಟಿ ನೀಡಿ ಚರ್ಚಿಸಿದ ಕುಮಾರಸ್ವಾಮಿ

ಭಾನುವಾರ ಮಧ್ಯಾಹ್ನ ಆದಿಚುಂಚನಗಿರಿಗೆ ಭೇಟಿ ನೀಡಿ ಬಂದ ನಂತರ ಮಂಡ್ಯಕ್ಕೆ ಆಗಮಿಸಿ ನಗರಸಭಾ ಮಾಜಿ ಸದಸ್ಯ ಎಸ್.ಕೆ.ಶಿವಪ್ರಕಾಶ್‌ಬಾಬು, ಮಾರ್ವಾಡಿ ಸಮುದಾಯದ ಮುಖಂಡ ಭರತೇಶ್ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ಮನೆಗಳಿಗೆ ಭೇಟಿ ನೀಡಿ ಸಮಾಲೋಚಿಸಿದರು.

Vijaya Karnataka Web 24 Mar 2019, 8:59 pm
ಮಂಡ್ಯ: ಮಂಡ್ಯದಲ್ಲಿ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಕೆಲಸ ಮಾಡಲು ಕೆಲವು ಕಾಂಗ್ರೆಸ್‌ ನಾಯಕರು ತಂತ್ರ ರೂಪಿಸಿದ್ದಾರೆ ಎಂಬ ವದಂತಿ ಹರಡಿದ ಬೆನ್ನಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಈಗ ತೇಪೆ ಹಚ್ಚುವ ಕಾರ್ಯಕ್ಕೆ ಕೈ ಹಾಕಿದ್ದಾರೆ.
Vijaya Karnataka Web ಎಚ್‌ಡಿ ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ


ಮಂಡ್ಯದಲ್ಲಿ ಸುಮಲತಾ ಪರವಾಗಿ ಕೆಲಸ ಮಾಡು ಎಂದು ಕಾಂಗ್ರೆಸ್‌ ಚೆಲುವರಾಯಸ್ವಾಮಿ ಮಂಡ್ಯದ ಮಾಜಿ ನಗರಸಭಾ ಸದಸ್ಯ ಎಸ್‌.ಕೆ. ಶಿವಪ್ರಕಾಶ್‌ ಬಾಬುಗೆ ದೂರವಾಣಿ ಕರೆ ಮಾಡಿ ಒತ್ತಾಯಿಸಿದ್ದು ಬಹಿರಂಗಗೊಂಡಿದೆ.

ಆದರೆ ಇದನ್ನು ಶಿವಪ್ರಕಾಶ್‌ಬಾಬು ತಿರಸ್ಕರಿಸಿ, ಕುಮಾರಸ್ವಾಮಿ ಜತೆಗೆ ತೆರಳುವುದಾಗಿ ತಿಳಿಸಿದ್ದರು.

ಈಗ ಇದೇ ಕಾರಣಕ್ಕಾಗಿ ಕುಮಾರಸ್ವಾಮಿ ಈಗ ಸ್ಥಳೀಯ ಕಾಂಗ್ರೆಸ್‌ ನಾಯಕರ ಮನೆಗೆ ಭೇಟಿ ನೀಡಿ ಮನವಿ ಮಾಡುತ್ತಿದ್ದಾರೆ.

ಭಾನುವಾರ ಮಧ್ಯಾಹ್ನ ಆದಿಚುಂಚನಗಿರಿಗೆ ಭೇಟಿ ನೀಡಿ ಬಂದ ನಂತರ ಮಂಡ್ಯಕ್ಕೆ ಆಗಮಿಸಿ ನಗರಸಭಾ ಮಾಜಿ ಸದಸ್ಯ ಎಸ್.ಕೆ.ಶಿವಪ್ರಕಾಶ್‌ಬಾಬು, ಮಾರ್ವಾಡಿ ಸಮುದಾಯದ ಮುಖಂಡ ಭರತೇಶ್ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ಮನೆಗಳಿಗೆ ಭೇಟಿ ನೀಡಿ ಸಮಾಲೋಚಿಸಿದರು.

ಮಾ.25ರಂದು ಪುತ್ರ ನಿಖಿಲ್ ನಾಮಪತ್ರ ಸಲ್ಲಿಸುವ ಕಾರ್ಯವನ್ನು ಯಶಸ್ವಿಗೊಳಿಗಾಗಿ ದಿನವಿಡೀ ಪರೇಡ್ ನಡೆಸಿದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಅಭ್ಯರ್ಥಿ ನಿಖಿಲ್, ಜಿಲ್ಲಾ ಜೆಡಿಎಸ್‌ನ ಡಿ. ರಮೇಶ್ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌